ಬ್ರೇಕಿಂಗ್ ನ್ಯೂಸ್
21-03-21 09:01 pm Mangaluru correspondent ಕರಾವಳಿ
ಮಂಗಳೂರು, ಮಾ.21 : ಬಿಜೆಪಿ ಶಾಸಕರ ಅಶ್ಲೀಲ ಸಿಡಿಯ ಬಗ್ಗೆ ಸಮಗ್ರ ತನಿಖೆ ಮಾಡಲು ಎಸ್ಐಟಿ ರಚಿಸಿದ ನಾಚಿಕೆಗೇಡು ಬಿಜೆಪಿ ಸರಕಾರಕ್ಕೆ ತನ್ನದೇ ಪಕ್ಷದ ಒಬ್ಬ ಕಾರ್ಯಕರ್ತನ ಭೀಕರ ಕೊಲೆಯ ಹಿಂದಿರುವ ಸತ್ಯವನ್ನು ಬಯಲಿಗೆಳೆಯಲು, ಸಮಗ್ರ ತನಿಖೆ ನಡೆಸಲು ಎಸ್ಐಟಿ ರಚಿಸಲು ಯಾಕೆ ಅಸಾಧ್ಯ..? ಎಂದು ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಪ್ರಶ್ನೆ ಮಾಡಿದ್ದಾರೆ.
ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ಪ್ರಕರಣಕ್ಕೆ ಐದು ವರುಷ ಸಂದ ಈ ದಿನದಂದು ದೇಶಪ್ರೇಮಿ ಸಂಘಟನೆಗಳ ಒಕ್ಕೂಟ ನಡೆಸಿದ ಮೆರವಣೆಗೆ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅಕ್ರಮಗಳ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ ಕಾರಣಕ್ಕಾಗಿಯೇ ಕೊಲೆಗೀಡಾಗಿದ್ದಾರೆ. ಪೊಲೀಸ್ ಇಲಾಖೆ ಕೊಲೆಗಟುಕರನ್ನಷ್ಟೇ ಬಂಧಿಸಿದ್ದಾರೆ ಹೊರತು ಕೊಲೆಯ ಹಿಂದಿರುವ ಸೂತ್ರಧಾರಿಗಳನ್ನು ಬಂಧಿಸೋದಾಗಲಿ ಅಥವಾ ಪ್ರಕರಣವನ್ನು ಸಂಪೂರ್ಣ ಭೇದಿಸಲು ಈವರೆಗೂ ಸಾಧ್ಯವಾಗಿಲ್ಲ. ಪ್ರಕರಣದ ಸಮಗ್ರ ತನಿಖೆ ನಡೆಯಬೇಕು. ಹಾಗಾಗಿ ಉನ್ನತ ಮಟ್ಟದ ತನಿಖೆಗಾಗಿ ಎಸ್ಐಟಿ ನೇಮಕ ಆಗಬೇಕು. ಅದು ಆಗುವವರೆಗೆ ಬಾಳಿಗಾ ಸಾವಿನ ನ್ಯಾಯಕ್ಕಾಗಿ ನಡೆಯುವ ಹೋರಾಟ ಎಂದೂ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ಈ ವೇಳೆ ಡಿವೈಎಫ್ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಡಿಎಸ್ಎಸ್ ರಾಜ್ಯ ಮುಖಂಡರಾದ ಎಂ. ದೇವದಾಸ್, ಮನೋವೈದ್ಯ ಡಾ. ಪಿ.ವಿ. ಭಂಡಾರಿ , ಮಂಜುಳಾ ನಾಯಕ್, ಮಾಜಿ ಕಾರ್ಪೊರೇಟರ್ ಪ್ರಕಾಶ್ ಸಾಲ್ಯಾನ್, ಸುನಿಲ್ ಬಜಿಲಕೇರಿ, ಸುಧಾಕರ ಶೆಣೈ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಎಸ್ಎಸ್ ಜಿಲ್ಲಾ ಮುಖಂಡರಾದ ರಘು ಎಕ್ಕಾರ್, ಜೆರಾಲ್ಡ್ ಟವರ್, ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್ , ಪ್ರಸಾದ್ ಬಜಿಲಕೇರಿ, ಡಾ. ಕೃಷ್ಣಪ್ಪ ಕೊಂಚಾಡಿ, ಗುಲಾಬಿ ಬಿಳಿಮಲೆ, ಆಶಾ ನಾಯಕ್, ಎರಿಕ್ ಲೋಬೋ, ಶ್ಯಾಮ್ ಸುಂದರ್ ರಾವ್, ವಾಸುದೇವ ಉಚ್ಚಿಲ, ಪ್ರಭಾಕರ ಕಾಪಿಕಾಡ್, ಬಾಳಿಗಾ ಅವರ ಸಹೋದರಿ ಅನುರಾಧ ಬಾಳಿಗ, ಹರ್ಷ ಬಾಳಿಗ ಉಪಸ್ಥಿತರಿದ್ದರು.

ಸಭೆಯನ್ನು ದೇಶಪ್ರೇಮಿ ಸಂಘಟನೆಗಳ ಸಂಚಾಲಕ ಡಿವೈಎಫ್ಐ ಮುಖಂಡ ಸಂತೋಷ್ ಬಜಾಲ್ ಸ್ವಾಗತಿಸಿ ನಿರ್ವಹಿಸಿದರು. ವೆಂಕಟರಮಣ ದೇವಳದ ಮುಂಭಾಗದಲ್ಲಿ ಬಾಳಿಗಾ ಸಹೋದರಿಯರು ಪ್ರಾರ್ಥಿಸುವ ಮೂಲಕ ಮೆರವಣಿಗೆ ಪ್ರಾರಂಭಗೊಂಡು ಬಾಳಿಗ ಮನೆ ವರೆಗೆ ನಡೆಯಿತು.
SIT probe should be initiated in connection to the Murder of Vinayak Baliga said Professor Narendra Nayak during the mark the 5th death anniversary of the RTI activist in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm