ಬ್ರೇಕಿಂಗ್ ನ್ಯೂಸ್
22-03-21 12:23 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ಹೈವೇ ರಸ್ತೆಯಲ್ಲಿ ಸ್ಕೂಟರ್ ಸವಾರ ತಿರುವು ಪಡೆಯುತ್ತಿದ್ದ ವೇಳೆ ಅತಿ ವೇಗದಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಡಿವೈಡರ್ ಹತ್ತಿ ಸ್ಕೂಟರ್ ಮೇಲೆ ಹರಿದ ಘಟನೆ ಗಡಿಭಾಗ ತಲಪಾಡಿ ಜಂಕ್ಷನ್ನಲ್ಲಿ ನಡೆದಿದೆ. ಸ್ಕೂಟರ್ ಸವಾರ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾನೆ.


ಗಾಯಾಳುವನ್ನು ಕಾಸರಗೋಡು ಜಿಲ್ಲೆಯ ಉದ್ಯಾವರ ನಿವಾಸಿ ತುಳಸಿ ಎಂದು ಗುರುತಿಸಲಾಗಿದೆ. ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗಡಿಭಾಗ ತಲಪಾಡಿಯಲ್ಲಿ ಸ್ಕೂಲ್ ಬಸ್ಸೊಂದು ಇನ್ನೊಂದು ರಸ್ತೆಗೆ ತಿರುವು ಪಡೆಯುವ ಯತ್ನದಲ್ಲಿದ್ದಾಗ ಕೇರಳ ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಧ್ಯಕ್ಕೆ ನುಗ್ಗಿ ಬಂದಿದೆ. ಇದೇ ವೇಳೆ, ಮತ್ತೊಂದು ರಸ್ತೆಯಿಂದ ಸ್ಕೂಟರ್ ಸವಾರ ತಿರುವು ಪಡೆಯಲು ಬಂದಿದ್ದು ಕೆಎಸ್ಸಾರ್ಟಿಸಿ ಬಸ್ ನೇರವಾಗಿ ಡಿವೈಡರ್ ಮತ್ತು ಸ್ಕೂಟರ್ ಮೇಲೆ ಹರಿದಿದೆ. ಸ್ಕೂಟರ್ ಬಸ್ಸಿನಡಿಗೆ ಸಿಲುಕಿ ಅಪ್ಪಚ್ಚಿಯಾಗಿದೆ.

ಶಾಲಾ ಬಸ್ ಚಾಲಕ ಅಜಾಗರೂಕತೆ ಚಾಲನೆಯಿಂದ ಘಟನೆ ಸಂಭವಿಸಿದೆ ಎನ್ನಲಾಗುತ್ತದೆ. ಸರಕಾರಿ ಬಸ್ ಚಾಲಕ, ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ್ದು ಆತನ ಸಮಯ ಪ್ರಜ್ಞೆಯಿಂದ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಸ್ಕೂಟರ್ ಚಾಲಕ ತುಳಸಿಯ ಎರಡೂ ಕಾಲು ಮುರಿತಕ್ಕೊಳಗಾಗಿದ್ದು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Video:
Live accident caught in CCTV of Ksrtc Bus and Scooter accident in Talapady, Mangalore
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm