ಬ್ರೇಕಿಂಗ್ ನ್ಯೂಸ್
21-08-20 02:05 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 21: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ದೇಶ - ವಿದೇಶದಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಆದಿತ್ಯ ರಾವ್ ಈತನಿಗೂ ರೋಲ್ ಮಾಡೆಲ್ ಆಗಿದ್ನಂತೆ. ಅದೇ ಕಾರಣಕ್ಕೆ ಆತ ಮಂಗಳೂರು ಏರ್ಪೋರ್ಟಿಗೆ ಬಾಂಬ್ ಇಟ್ಟಿರುವುದಾಗಿ ಹೇಳಿ ಈಗ ಜೈಲು ಕಂಬಿ ಎಣಿಸಿದ್ದಾನೆ. ಹೌದು.. ಎರಡು ದಿನಗಳ ಹಿಂದೆ ಏರ್ಪೋರ್ಟಿಗೆ ಬಾಂಬ್ ಕರೆ ಮಾಡಿ ಸಿಕ್ಕಿಬಿದ್ದ ಕಾರ್ಕಳದ ವಸಂತ ಶೇರಿಗಾರ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ, ಪೊಲೀಸರಿಗೇ ಅಚ್ಚರಿಯಾಗಿತ್ತು.
ಆರೋಪಿ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಟಿ ಕರೆದ ಮಂಗಳೂರು ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್, ವಸಂತ ಶೇರಿಗಾರನ ಬಗ್ಗೆ ಅಚ್ಚರಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ. ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಸಿಸಿಬಿ ಪೊಲೀಸರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿವಾಸಿ ವಸಂತ್ ಶೇರಿಗಾರ (33) ಎಂಬವನನ್ನು ಬಂಧಿಸಿದ್ದು ಆದಿತ್ಯ ರಾವ್ ರೀತಿಯಲ್ಲಿ ಪ್ರಚಾರ ಗಿಟ್ಟಿಸುವುದಕ್ಕಾಗಿ ಬಾಂಬ್ ಇಟ್ಟಿದ್ದಾಗಿ ಹುಸಿ ಕರೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.

ಆಗಸ್ಟ್ 19ರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ ರಾವ್ ಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ಬಜ್ಪೆ ಏರ್ಪೋರ್ಟ್ ಗೆ ಬಾಂಬ್ ಇಟ್ಟಿದ್ದಾಗಿ ಹೇಳಿದ್ದ. ಅವರು ಕೂಡಲೇ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಇದರಿಂದ ಗಾಬರಿಗೊಂಡ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ತಿಳಿಸಿದ್ದು ತಪಾಸಣೆ ಏರ್ಪಡಿಸಿದ್ದರು. ಇದೇ ವೇಳೆ, ಆರೋಪಿಯ ನಂಬರ್ ಟ್ರೇಸ್ ಮಾಡಿದ್ದು ಕಾರ್ಕಳದ ವಸಂತಕೃಷ್ಣ ಶೇರಿಗಾರ್ ಎಂದು ತೋರಿಸಿತ್ತು. ವಿಮಾನ ನಿಲ್ದಾಣ ಆಸುಪಾಸಿನಲ್ಲಿ ತಪಾಸಣೆ ನಡೆಸಿದಾಗ ಬಾಂಬ್ ಕರೆ ಹುಸಿಯೆಂದು ತಿಳಿದುಬಂದಿತ್ತು. ಅಲ್ಲದೆ, ಮಂಗಳೂರು ಪೊಲೀಸರು ನೇರವಾಗಿ ಕಾರ್ಕಳಕ್ಕೆ ತೆರಳಿ, ಸದ್ದಿಲ್ಲದ ಹಾಗೆ ಆರೋಪಿಯನ್ನು ಎತ್ತಾಕ್ಕೊಂಡು ಬಂದಿದ್ದಾರೆ. ವಿಚಾರಣೆ ನಡೆಸಿದಾಗ ಬಾಂಬ್ ಕರೆಯ ನಿಜ ವಿಚಾರ ಬಯಲಾಗಿದೆ.
ಎಂಟನೇ ತರಗತಿ ಓದಿದ್ದ ವಸಂತ, ಬೆಂಗಳೂರಿನಲ್ಲಿ ಹೊಟೇಲಿನಲ್ಲಿ ಕೆಲಸಕ್ಕಿದ್ದ. ಲಾಕ್ ಡೌನ್ ಬಳಿಕ ಊರಿಗೆ ಬಂದಿದ್ದು ಮೊಬೈಲ್ ನಲ್ಲಿ ಹೆಚ್ಚು ಆಕ್ಟೀವ್ ಆಗಿದ್ದ. ಮನೆಯಲ್ಲಿ ಗದ್ದೆ ಕೆಲಸವನ್ನೂ ಮಾಡ್ತಿದ್ದ. ಇದೇ ವೇಳೆ ಗೂಗಲ್ನಲ್ಲಿ ಮಂಗಳೂರು ಏರ್ ಪೋರ್ಟ್ ಬಗ್ಗೆ ಸರ್ಚ್ ಮಾಡಿದಾಗ, ಮಾಜಿ ನಿರ್ದೇಶಕ ವಾಸುದೇವ ರಾವ್ ನಂಬರ್ ಸಿಕ್ಕಿತ್ತು. ಫೋನ್ ಕರೆ ಮಾಡಿ, ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಕಳೆದ ಜನವರಿ ತಿಂಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇರಿಸಿ ಬಂಧಿತನಾಗಿದ್ದ ಆದಿತ್ಯ ರಾವ್ ಒಂದೇ ದಿನ ರಾತ್ರಿ ಬೆಳಗಾಗುವುದರಲ್ಲಿ ದೇಶ - ವಿದೇಶದಲ್ಲಿ ಪ್ರಚಾರ ಪಡೆದಿದ್ದ. ಅದೇ ಪ್ರಕರಣದ ಬೆನ್ನು ಹತ್ತಿದ ವಸಂತ, ಆದಿತ್ಯನ ರೀತಿಯಲ್ಲಿ ದೇಶಾದ್ಯಂತ ಪ್ರಚಾರ ಗಿಟ್ಟಿಸಬೇಕೆಂದು ಈ ಕೆಲಸ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಸಂತ್ ವಿರುದ್ಧ ಗಂಭೀರ ಕಾಯ್ದೆಗಳಡಿ ಪ್ರಕರಣ ದಾಖಲಿಸಿದ್ದೇವೆ. ಆತನ ಮಾನಸಿಕ ಆರೋಗ್ಯದ ಬಗ್ಗೆ ಮೆಡಿಕಲ್ ರಿಪೋರ್ಟ್ ಬರಬೇಕು. ಇದೊಂದು ಗಂಭೀರ ಪ್ರಕರಣವಾಗಿದ್ದು, ಹೆಚ್ಚಿನ ತನಿಖೆ ನಡೆಸುವುದಾಗಿ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ತಿಳಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm