ಬ್ರೇಕಿಂಗ್ ನ್ಯೂಸ್
24-03-21 08:18 pm Mangaluru correspondent ಕರಾವಳಿ
ಮಂಗಳೂರು, ಮಾ.24 : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರ ಘಟಕದ ವತಿಯಿಂದ ಭಗತ್ ಸಿಂಗ್, ರಾಜಗುರು, ಸುಖದೇವ್ ಇವರ ಬಲಿದಾನ ದಿನದ ಸ್ಮರಣೆಯಾಗಿ ಸಾರ್ವಜನಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉರ್ವಾಸ್ಟೋರ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ವಕ್ತಾರರಾಗಿದ್ದ ದಿಶಾ ಭಾರತ ಇದರ ಟ್ರಸ್ಟಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ಪದ್ಮಾರ್, ಭಾರತೀಯತೆಯನ್ನು ಉಳಿಸಲು ಪ್ರಯತ್ನಿಸಿದ ಸಾವಿರಾರು ಬಲಿದಾನಿಗಳು ಈ ಪುಣ್ಯಭೂಮಿಯಲ್ಲಿ ಆಗಿಹೋಗಿದ್ದಾರೆ. ತ್ಯಾಗ, ಬಲಿದಾನ ಮತ್ತು ಸೇವೆ ಭಾರತದ ಪರಂಪರೆಯಲ್ಲಿ ಅಡಕವಾಗಿದ್ದು ಇದನ್ನು ಯುವ ಸಮುದಾಯ ಮುಂದುವರಿಸುವ ಅಗತ್ಯತೆ ಇದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ನಿವೃತ್ತ ಪೊಲೀಸ್ ಅಧೀಕ್ಷಕರಾದ ಪಿ ಹರಿಶ್ಚಂದ್ರ ಆಗಮಿಸಿ , ಬಲಿದಾನಿಗಳ ಆದರ್ಶಗಳನ್ನು ಯುವ ಜನತೆ ಜೀವನದಲ್ಲಿ ಮೈಗೂಡಿಸಬೇಕು ಎಂದು ಹೇಳಿದರು. ಅ ಭಾ ವಿ ಪ ಮಂಗಳೂರು ಮಹಾನಗರದ ಅಧ್ಯಕ್ಷೆ ಶ್ರೀಮತಿ ಭಾರತಿ ಪ್ರಭು ಹಾಗೂ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸಾರ್ವಜನಿಕ ಸಭೆಯ ಮೊದಲು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ನೃತ್ಯ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಸುಮಂಗಲಾ ರಾವ್, ಹಿರಿಯ ಕಾರ್ಯಕರ್ತರಾದ ಚ.ನ ಶಂಕರರಾವ್, ಸರಸ್ವತಿ ರಾವ್, ರಾಘವೇಂದ್ರ ಹೊಳ್ಳ, ಉದ್ಯಮಿ ಸಂಜಯ್ ಪ್ರಭು, ಸುಜಿತ್ ಪ್ರತಾಪ್, ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಸಂದೇಶ್ ರೈ ಮಜಕ್ಕಾರ್, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ನಗರ ಸಹ ಕಾರ್ಯದರ್ಶಿಗಳಾದ ಶ್ರೇಯಸ್ ರೈ, ಕಿರಣ್, ಆತ್ಮಿಕ, ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀಲಕ್ಷ್ಮೀ ಮಠದಮೂಲೆ, ಕಾರ್ಯಕರ್ತರಾದ ಆದಿತ್ಯ ಶೆಟ್ಟಿ, ಆದರ್ಶ್ ಉಪ್ಪಾರ, ಪ್ರಣಮ್ ಶೆಟ್ಟಿ, ಭವನೀಶ್ ಶೆಟ್ಟಿ ಹಾಗೂ ಅನೇಕ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Martyr's Day 2021 Bhagat Singh death anniversary program was held by ABVP in Mangalore
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm