ಬ್ರೇಕಿಂಗ್ ನ್ಯೂಸ್
25-03-21 09:33 am Mangaluru Correspondent ಕರಾವಳಿ
ಉಪ್ಪಿನಂಗಡಿ, ಮಾ.25: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಇಲ್ಲಿನ ನೆಲ್ಯಾಡಿ ಬಳಿ ಖಾಸಗಿ ಬಸ್ ಮತ್ತು ಕಂಟೇನರ್ ಲಾರಿ ಮಧ್ಯೆ ಭೀಕರ ಅಪಘಾತ ನಡೆದು ಬೆಂಕಿ ಹತ್ತಿಕೊಂಡಿದ್ದು ಕಂಟೈನರ್ ಚಾಲಕ ಸಜೀವ ದಹನವಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಕಂಟೈನರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಮೆ ಒಮ್ಮೆಲೇ ಎರಡೂ ವಾಹನಗಳಿಗೆ ಬೆಂಕಿ ಹತ್ತಿಕ್ಕೊಂಡಿದೆ. ಕಂಟೈನರ್ ಚಾಲಕ ಗಾಯಗೊಂಡು ಹೊರಬರಲಾಗದೆ ಸಜೀವ ದಹನವಾದರೆ, ಬಸ್ನಲ್ಲಿದ್ದವರು ಅದೃಷ್ಟವಶಾತ್ ಸಾವಿನಿಂದ ಪಾರಾಗಿದ್ದಾರೆ.


ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ದುರ್ಗಾ ಮೋಟರ್ಸ್ ಬಸ್ ಎನ್ನಲಾಗುತ್ತಿದ್ದು, ಬಸ್ನಲ್ಲಿ 30 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಹಾಸನ ಕಡೆಯಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಕಂಟೈನರ್ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಕಂಟೈನರ್ಗೆ ಗ್ಯಾಸ್ ಬಳಕೆ ಮಾಡುತ್ತಿದ್ದು, ಅಪಘಾತದ ಬಳಿಕ ಗ್ಯಾಸ್ ಸೋರಿಕೆಯಾಗಿ ಬೆಂಕಿ ದೊಡ್ಡ ಮಟ್ಟಕ್ಕೆ ಹತ್ತಿಕೊಂಡಿದೆ ಎನ್ನಲಾಗಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಮತ್ತು ಕಂಟೇನರ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಸ್ಥಳದಲ್ಲಿ ಅಪಘಾತದ ಭೀಕರ ದೃಶ್ಯಕ್ಕೆ ಸಾಕ್ಷಿಯಾಗಿ ನಿಂತಿದೆ.
Video:
In a tragic accident between Van and Private Bus, Truck Driver got burnt alive and the bus was completely gutted by fire at Nellyadi, Sullia in Mangalore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm