ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.

ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.

ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm