ಬ್ರೇಕಿಂಗ್ ನ್ಯೂಸ್
26-03-21 04:52 pm Mangaluru correspondent ಕರಾವಳಿ
ಮಂಗಳೂರು, ಮಾ.25: ಜನರಿಗೆ ಯಾವುದೇ ಸೂಚನೆ ನೀಡದೆ ಜಿಲ್ಲಾಧಿಕಾರಿಯವರು ಏಕಾಏಕಿ ಬೀದಿಗಿಳಿದು ದಂಡ ವಿಧಿಸಿದ್ದು ತಪ್ಪು. ಮಾಲ್, ಪಬ್ ಗಳಲ್ಲಿ ಸೇರುವ ಜನರ ಮೇಲೆ ದಂಡ ಹಾಕಲ್ಲ. ಸಾಮಾನ್ಯ ಜನರ ಮೇಲೆ ದಂಡ ವಿಧಿಸುವ, ಬಂಧಿಸುವ ಕೆಲಸ ಮಾಡುತ್ತಾರೆ. ಇದು ಎಷ್ಟು ಸರಿ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕೈಗೊಂಡಿರುವ ದಿಢೀರ್ ದಾಳಿ ಕ್ರಮವನ್ನು ಟೀಕಿಸಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕಿ, ದೊಡ್ಡ ಮಾಲ್ಗಳಲ್ಲಿ ದಾಳಿ ನಡೆಸಿ, 500 ಸಾವಿರ ದಂಡ ವಿಧಿಸಿದ್ದಾರೆ. ಸಣ್ಣ ವ್ಯಾಪಾರಸ್ಥರ ಅಂಗಡಿಗಳಿಗೆ 4-5 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಹಾನಗರ ಪಾಲಿಕೆಯವರು ಕೂಡ ಇದೇ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ಜನರ ಮೇಲೆ ಇವರು ದಂಡದ ಪ್ರಯೋಗ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಮಾಸ್ಕ್ ಧರಿಸದೇ ಇದ್ದುದಕ್ಕೆ ದಂಡ ವಿಧಿಸಲಿ. ಹಾಗೆಂದು ಮಾಸ್ಕ್ ಹಾಕದ ಕಾರಣಕ್ಕೆ ಬಂಧಿಸುವ ಅಧಿಕಾರ ಇದೆಯೇ ಇವರಿಗೆ. ಪೆಟ್ರೋಲ್ ಪಂಪಿನಲ್ಲಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ಒಬ್ಬನನ್ನು ಅಪರಾಧಿಯಂತೆ ಎಳಕೊಂಡು ಹೋಗಿದ್ದು ಎಷ್ಟು ಸರಿ ಎಂದು ಆಕ್ಷೇಪಿಸಿದ್ದಾರೆ.
ಮೊನ್ನೆ ಸುರತ್ಕಲ್ ನಲ್ಲಿ ಡಿಜೆ, ಡ್ಯಾನ್ಸ್ ಎಂದು ಬಹಳಷ್ಟು ಜನ ಸೇರಿದ್ದರು. ಕುಣಿದಾಡಿದ್ದಾರೆ. ಅದರಲ್ಲಿ ಡೀಸಿಯವರೂ ಇದ್ದರು. ಅಲ್ಲಿ ಇಲ್ಲದ ಕೊರೊನಾ ನಿಯಮ ಬೀದಿಯಲ್ಲಿ ಹೋಗೋ ಜನರ ಮೇಲೆ ಮಾತ್ರ ಯಾಕೆ ವಿಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Congress leader prathibha kulai has slammed Mangalore DC Rajendra for his audacity on poor over covid rules.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm