ಬ್ರೇಕಿಂಗ್ ನ್ಯೂಸ್
27-03-21 02:08 pm Mangaluru correspondent ಕರಾವಳಿ
ಮಂಗಳೂರು, ಮಾರ್ಚ್ 27: ಖಾಸಗಿ ಕಾರಿನ ಚಾಲಕನೊಬ್ಬ ಸಮವಸ್ತ್ರ ಧರಿಸಿಲ್ಲ ಎಂಬ ಕಾರಣಕ್ಕೆ ಬಂಟ್ವಾಳ ಪೊಲೀಸರು 500 ರೂ. ದಂಡ ವಿಧಿಸಿದ ಘಟನೆ ನಡೆದಿದ್ದು ಈ ಬಗ್ಗೆ ತಿಳಿದ ಎಸ್ಪಿ ದಂಡದ ಹಣವನ್ನು ಹಿಂತಿರುಗಿ ಕೊಡಿಸಿದ ಪ್ರಸಂಗ ನಡೆದಿದೆ.
ಸಾಮಾನ್ಯವಾಗಿ ಖಾಸಗಿ ವಾಹನದ ಚಾಲಕರು ಸಮವಸ್ತ್ರ ಹಾಕಬೇಕೆಂಬ ನಿಯಮವಿಲ್ಲ. ಬಾಡಿಗೆ ನಡೆಸುವ ಕಾರುಗಳು ಅಂದರೆ, ಯೆಲ್ಲೋ ಬೋರ್ಡ್ ನಂಬರ್ ಪ್ಲೇಟ್ ಇರುವ ವಾಹನಗಳಿಗೆ ಮಾತ್ರ ಚಾಲಕರು ಬಿಳಿ ಸಮವಸ್ತ್ರ ಧರಿಸಬೇಕೆಂಬ ನಿಯಮ ಇದೆ.
ಆದರೆ ಮಾ.23ರಂದು ಬಂಟ್ವಾಳ ಬಳಿಯ ರಾಮಲ್ಕಟ್ಟೆ ಎಂಬಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು, ಸಮವಸ್ತ್ರ ಧರಿಸದ ಕಾರಣಕ್ಕೆ ಪಾಣೆ ಮಂಗಳೂರು ಮೂಲದ ಕಾರು ಚಾಲಕರೊಬ್ಬರಿಗೆ 500 ರೂ. ದಂಡ ವಿಧಿಸಿದ್ದರು.
ಪೊಲೀಸರು ನೀಡಿದ ದಂಡದ ರಶೀದಿಯನ್ನು ನೋಡಿದ ಕಾರು ಚಾಲಕರ ಪುತ್ರ, ಅದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಅವರ ಗಮನಕ್ಕೆ ತಂದಿದ್ದಾರೆ. ಈ ವೇಳೆ ಎಸ್ಪಿ ಸಮಸ್ಯೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಲ್ಲದೆ, ಪೊಲೀಸರು ಸಂಗ್ರಹಿಸಿದ್ದ ದಂಡದ ಮೊತ್ತವನ್ನು ಪೇದೆಯಲ್ಲಿ ಅದೇ ದಿನ ರಾತ್ರಿ ಹಿಂತಿರುಗಿಸಲು ಸೂಚನೆ ನೀಡಿದ್ದಾರೆ.
ಎಸ್ಪಿ ಸೂಚನೆಯಂತೆ ಪೊಲೀಸ್ ಪೇದೆ ನೇರವಾಗಿ ಖಾಸಗಿ ವಾಹನದಲ್ಲಿ ಪಾಣೆಮಂಗಳೂರಿಗೆ ನಡುರಾತ್ರಿಯಲ್ಲೇ ಬಂದು ಖಾಸಗಿ ಕಾರು ಚಾಲಕನ ಕೈಗೆ 500 ರೂ. ಹಿಂತಿರುಗಿಸಿದ್ದಾರೆ. ಪೊಲೀಸ್ ಅಧೀಕ್ಷಕರು ತುರ್ತಾಗಿ ಸ್ಪಂದಿಸಿದ ಕ್ರಮಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.
Bantwal police have charged a fine of Rs 500 from a private car driver for not wearing his uniform. The son of a car driver who saw the receipt of the fine from the police brought it to the notice of the Dakshina Kannada District Superintendent of Police, BM Lakshmiprasad, who then returned the fine amount back to the driver.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm