ಬ್ರೇಕಿಂಗ್ ನ್ಯೂಸ್
27-03-21 02:08 pm Mangaluru correspondent ಕರಾವಳಿ
ಮಂಗಳೂರು, ಮಾರ್ಚ್ 27: ಖಾಸಗಿ ಕಾರಿನ ಚಾಲಕನೊಬ್ಬ ಸಮವಸ್ತ್ರ ಧರಿಸಿಲ್ಲ ಎಂಬ ಕಾರಣಕ್ಕೆ ಬಂಟ್ವಾಳ ಪೊಲೀಸರು 500 ರೂ. ದಂಡ ವಿಧಿಸಿದ ಘಟನೆ ನಡೆದಿದ್ದು ಈ ಬಗ್ಗೆ ತಿಳಿದ ಎಸ್ಪಿ ದಂಡದ ಹಣವನ್ನು ಹಿಂತಿರುಗಿ ಕೊಡಿಸಿದ ಪ್ರಸಂಗ ನಡೆದಿದೆ.
ಸಾಮಾನ್ಯವಾಗಿ ಖಾಸಗಿ ವಾಹನದ ಚಾಲಕರು ಸಮವಸ್ತ್ರ ಹಾಕಬೇಕೆಂಬ ನಿಯಮವಿಲ್ಲ. ಬಾಡಿಗೆ ನಡೆಸುವ ಕಾರುಗಳು ಅಂದರೆ, ಯೆಲ್ಲೋ ಬೋರ್ಡ್ ನಂಬರ್ ಪ್ಲೇಟ್ ಇರುವ ವಾಹನಗಳಿಗೆ ಮಾತ್ರ ಚಾಲಕರು ಬಿಳಿ ಸಮವಸ್ತ್ರ ಧರಿಸಬೇಕೆಂಬ ನಿಯಮ ಇದೆ.
ಆದರೆ ಮಾ.23ರಂದು ಬಂಟ್ವಾಳ ಬಳಿಯ ರಾಮಲ್ಕಟ್ಟೆ ಎಂಬಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು, ಸಮವಸ್ತ್ರ ಧರಿಸದ ಕಾರಣಕ್ಕೆ ಪಾಣೆ ಮಂಗಳೂರು ಮೂಲದ ಕಾರು ಚಾಲಕರೊಬ್ಬರಿಗೆ 500 ರೂ. ದಂಡ ವಿಧಿಸಿದ್ದರು.
ಪೊಲೀಸರು ನೀಡಿದ ದಂಡದ ರಶೀದಿಯನ್ನು ನೋಡಿದ ಕಾರು ಚಾಲಕರ ಪುತ್ರ, ಅದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಅವರ ಗಮನಕ್ಕೆ ತಂದಿದ್ದಾರೆ. ಈ ವೇಳೆ ಎಸ್ಪಿ ಸಮಸ್ಯೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಲ್ಲದೆ, ಪೊಲೀಸರು ಸಂಗ್ರಹಿಸಿದ್ದ ದಂಡದ ಮೊತ್ತವನ್ನು ಪೇದೆಯಲ್ಲಿ ಅದೇ ದಿನ ರಾತ್ರಿ ಹಿಂತಿರುಗಿಸಲು ಸೂಚನೆ ನೀಡಿದ್ದಾರೆ.
ಎಸ್ಪಿ ಸೂಚನೆಯಂತೆ ಪೊಲೀಸ್ ಪೇದೆ ನೇರವಾಗಿ ಖಾಸಗಿ ವಾಹನದಲ್ಲಿ ಪಾಣೆಮಂಗಳೂರಿಗೆ ನಡುರಾತ್ರಿಯಲ್ಲೇ ಬಂದು ಖಾಸಗಿ ಕಾರು ಚಾಲಕನ ಕೈಗೆ 500 ರೂ. ಹಿಂತಿರುಗಿಸಿದ್ದಾರೆ. ಪೊಲೀಸ್ ಅಧೀಕ್ಷಕರು ತುರ್ತಾಗಿ ಸ್ಪಂದಿಸಿದ ಕ್ರಮಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.
Bantwal police have charged a fine of Rs 500 from a private car driver for not wearing his uniform. The son of a car driver who saw the receipt of the fine from the police brought it to the notice of the Dakshina Kannada District Superintendent of Police, BM Lakshmiprasad, who then returned the fine amount back to the driver.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm