ಬ್ರೇಕಿಂಗ್ ನ್ಯೂಸ್
29-03-21 01:41 pm Mangalore Correspondent ಕರಾವಳಿ
ಮಂಗಳೂರು, ಮಾ.29: ರಾಮಸೇನೆಯ ಸಂಸ್ಥಾಪಕ ಮತ್ತು ರಾಜ್ಯಾಧ್ಯಕ್ಷನೆಂದು ಹೇಳಿಕೊಂಡು ಬಂದಿದ್ದ ಪ್ರಸಾದ್ ಅತ್ತಾವರ ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ಹೇಳಿ, ಪ್ರೊಫೆಸರ್ ಒಬ್ಬರಿಂದ ಭಾರೀ ಪ್ರಮಾಣದ ಹಣ ಪಡೆದು ಮೋಸಗೈದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ.
ಮಂಗಳೂರು ಅಥವಾ ರಾಯಚೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವ ಆಮಿಷವೊಡ್ಡಿ 17.5 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದ ಬಗ್ಗೆ ಪ್ರಸಾದ ಅತ್ತಾವರ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು ವಿವಿಯಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಜಯಶಂಕರ್ ಎಂಬವರು ಕುಲಪತಿ ಆಗಲು ಎಲ್ಲ ಅರ್ಹತೆಗಳನ್ನು ಹೊಂದಿದ್ದ ಕಾರಣ, ಅದಕ್ಕಾಗಿ ಲಾಬಿ ನಡೆಸಿದ್ದರು. ಈ ವೇಳೆ, ಅವರ ಪರಿಚಯದ ವಿವೇಕ್ ಆಚಾರ್ಯ ಎಂಬಾತ ರಾಮಸೇನೆಯ ಪ್ರಸಾದ್ ಅತ್ತಾವರನನ್ನು ಪರಿಚಯ ಮಾಡಿದ್ದು, ಇವರಿಗೆ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹೈಲೆವೆಲ್ ಟಚ್ ಹೊಂದಿದ್ದಾಗಿ ನಂಬಿಸಿದ್ದಾರೆ. ಗಣ್ಯ ವ್ಯಕ್ತಿಗಳ ಜೊತೆ ಫೋಟೋ ತೆಗೆಸಿಕೊಂಡಿದ್ದನ್ನು ತೋರಿಸಿ ಪ್ರೊಫೆಸರಲ್ಲಿ ನಂಬಿಕೆ ಹುಟ್ಟಿಸಿದ್ದಾರೆ. ಬಳಿಕ ಕುಲಪತಿ ಸ್ಥಾನ ಕೊಡಿಸಲು 30 ಲಕ್ಷ ರೂ. ಆಗುವುದೆಂದು ಹೇಳಿ, ಪ್ರೊಫೆಸರ್ ಬಳಿ ಡೀಲ್ ಕುದುರಿಸಿದ್ದಾರೆ. ಇದಕ್ಕಾಗಿ 17.5 ಲಕ್ಷ ಹಣವನ್ನು ಪಡೆದಿದ್ದು, ಉಳಿದ ಹಣಕ್ಕೆ ಮೂರು ಖಾಲಿ ಚೆಕ್ ಪಡೆದಿದ್ದಾರೆ. ಹಣ ಪಡೆದು ವರ್ಷದ ಮೇಲಾದ್ರೂ ಭರವಸೆ ಈಡೇರದ ಕಾರಣ ಹಣ ಕೇಳಿದಾಗ, ಬೈದು ಜೀವ ಬೆದರಿಕೆ ಹಾಕಿದ್ದಾರೆಂದು ಡಾ.ಜಯಶಂಕರ್ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ಕಂಕನಾಡಿ ಠಾಣೆಯಲ್ಲಿ ಕಲಂ 406, 417, 420, 506 ಜೊತೆಗೆ ಏಪಿಸಿ 34 ಪ್ರಕಾರ ಪ್ರಕರಣ ದಾಖಲಾಗಿತ್ತು.

ಈ ಹಿಂದೆ ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಪ್ರಸಾದ್ ಅತ್ತಾವರ ಕೊನೆಯ ಬಾರಿಗೆ ಶ್ರೀರಾಮ ಸೇನೆಯಲ್ಲಿದ್ದ. ಯಾವುದೋ ವಿಚಾರದಲ್ಲಿ ಸಂಘಟನೆಯಿಂದ ಹೊರಬಂದಿದ್ದ ಪ್ರಸಾದ್, ಬಳಿಕ ತನ್ನದೇ ಆದ ರಾಮಸೇನೆ ಎಂಬ ಹೆಸರಲ್ಲಿ ಸಂಘಟನೆ ಕಟ್ಟಿಕೊಂಡಿದ್ದ. ಅದರ ಸಂಸ್ಥಾಪಕ ಮತ್ತು ರಾಜ್ಯಾಧ್ಯಕ್ಷನೂ ತಾನೇ ಎಂದು ಹೇಳಿಕೊಂಡಿದ್ದಲ್ಲದೆ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಬಿಜೆಪಿ ಪ್ರಮುಖರ ಸಖ್ಯ ಬೆಳೆಸಿಕೊಂಡಿದ್ದ. ಮಂಗಳೂರಿಗೆ ಸಿಎಂ ಬರುತ್ತಿದ್ದಾಗ ಹತ್ತಿರದ ನಂಟು ಇರುವಂತೆ ಪೋಸು ಕೊಡುತ್ತಿದ್ದ.


ಪ್ರಸಾದ್ ಅತ್ತಾವರ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಮತ್ತು ಬಂದರು ಠಾಣೆಯಲ್ಲಿ ರೌಡಿಶೀಟ್ ಬುಕ್ ಮಾಡಲಾಗಿತ್ತು. ಬಂದರು, ಕದ್ರಿ ಮತ್ತು ಕಂಕನಾಡಿ ಠಾಣೆಗಳಲ್ಲಿ ಹಲವು ಕೇಸುಗಳನ್ನು ಎದುರಿಸುತ್ತಿದ್ದಾನೆ. ಇದೀಗ ಕುಲಪತಿ ಸ್ಥಾನದ ಆಮಿಷವೊಡ್ಡಿ ಹಣ ಪಡೆದ ಆರೋಪದಲ್ಲಿ ಸಿಕ್ಕಿಬಿದ್ದು ಜೈಲು ಸೇರಿದ್ದಾನೆ. ಇದೇ ರೀತಿ ಹಲವರಿಂದ ಹಣ ಪಡೆದು ಮೋಸಗೈದಿರುವ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು ಅದರ ಬಗ್ಗೆ ದೂರು ಬಂದಲ್ಲಿ ತನಿಖೆ ಮಾಡಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Video:
Mangalore Ram Sene President Prasad Attavar has been arrested for duping a Mangalore University professor in lakhs stating he would buy a Vice-Chancellor seat.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm