ಬ್ರೇಕಿಂಗ್ ನ್ಯೂಸ್
30-03-21 12:51 pm Mangalore Correspondent ಕರಾವಳಿ
ಪುತ್ತೂರು, ಮಾ.30: ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ರಮ್ಯಾ ಹಾಗೂ ಕಡಬ ತಾಲೂಕಿನ ಕಾಣಿಯೂರಿನ ಯೋಗಿತಾ ಎಂಬವರು ಭಾರತೀಯ ಸೇನೆಯ ಬಿ.ಎಸ್.ಎಫ್ ಯೋಧರಾಗಿ ಆಯ್ಕೆಯಾಗಿದ್ದು ಇದೇ ಎಪ್ರಿಲ್ 1ರಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ರಮ್ಯಾ ಬಲ್ನಾಡು ಗ್ರಾಮದ ಪದ್ಮಯ್ಯ ಗೌಡ ಹಾಗೂ ತೇಜಾವತಿ ದಂಪತಿಯ ಪುತ್ರಿ. ಬಲ್ನಾಡು ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಿಕ್ಷಣ, ಪಿಯುಸಿ ಹಾಗೂ ಪದವಿಯನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪಡೆದಿದ್ದರು.
ಕಳೆದ ವರ್ಷ ಫೆಬ್ರವರಿಯಲ್ಲಿ ಸೇನಾ ನೇಮಕಾತಿಯ ಮೆಡಿಕಲ್ ಪರೀಕ್ಷೆ ಬರೆದಿದ್ದರು. ಆದರೆ ಕೊರೊನಾದಿಂದಾಗಿ ಫಲಿತಾಂಶ ತಡವಾಗಿ ಪ್ರಕಟವಾಗಿತ್ತು. ಶಾಲಾ ದಿನಗಳಲ್ಲಿ ಎನ್ ಸಿ ಸಿ ಯಲ್ಲಿ ಪಾಲ್ಗೊಂಡಿದ್ದ ಸೇನೆಗೆ ಸೇರುವ ನಿಟ್ಟಿನಲ್ಲಿ ತರಬೇತಿ ಪಡೆದಿದ್ದರು. ಈಗ ಎಲ್ಲ ಪರೀಕ್ಷೆಗಳನ್ನು ತೇರ್ಗಡೆ ಮಾಡಿಕೊಂಡು ಊರಿಗೆ ಹೆಮ್ಮೆ ತಂದಿದ್ದಾರೆ.

ಕಾಣಿಯೂರು ಗ್ರಾಮದ ಮಲೆಕರ್ಚಿ ಮೇದಪ್ಪ ಗೌಡ ಮತ್ತು ದೇವಕಿ ದಂಪತಿಯ ಪುತ್ರಿ ಯೋಗಿತಾ ಎಂ. ಎಪ್ರಿಲ್ 1 ರಂದು ಮಧ್ಯಪ್ರದೇಶದ ಗ್ವಾಲಿಯರ್ ನ ತೇಕನ್ಪುರ್ ನಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ಬೊಬ್ಬೆಕೇರಿ ಮತ್ತು ಅಲಂಕಾರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಕಾಣಿಯೂರಿನಲ್ಲಿ ಮತ್ತು ನಿಂತಿಕಲ್ ಕೆ.ಎಸ್ ಗೌಡ ಪಿಯು ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶೇ.70 ಅಂಕಗಳೊಂದಿಗೆ ಪಿಯು ಶಿಕ್ಷಣ ಪಡೆದಿದ್ದರು. ವಿಶ್ವವಿದ್ಯಾಲಯ ಕಾಲೇಜು ಮಂಗಳೂರಿನಲ್ಲಿ ಬಿಎಸ್ಸಿ ಪದವಿ, ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ಮೈಕ್ರೋಬಯಾಲಾಜಿ ವಿಷಯದಲ್ಲಿ ಎಂಎಸ್ಸಿ ಪದವಿ ಪಡೆದು ದೇಶದ ಗಡಿ ಕಾಯುವ ಕೆಲಸಕ್ಕೆ ಮುಂದಾಗಿದ್ದಾರೆ. ಇಬ್ಬರಿಗೂ ಹ್ಯಾಟ್ಸ್ ಅಪ್..
Two ladies from Dakshina Kannada district have been chosen to serve the Border Security Force (BSF) that keeps vigil on the country's borders. They will report to their BSF bosses and begin to serve the force on April 1.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm