ಬ್ರೇಕಿಂಗ್ ನ್ಯೂಸ್
30-03-21 12:51 pm Mangalore Correspondent ಕರಾವಳಿ
ಪುತ್ತೂರು, ಮಾ.30: ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ರಮ್ಯಾ ಹಾಗೂ ಕಡಬ ತಾಲೂಕಿನ ಕಾಣಿಯೂರಿನ ಯೋಗಿತಾ ಎಂಬವರು ಭಾರತೀಯ ಸೇನೆಯ ಬಿ.ಎಸ್.ಎಫ್ ಯೋಧರಾಗಿ ಆಯ್ಕೆಯಾಗಿದ್ದು ಇದೇ ಎಪ್ರಿಲ್ 1ರಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ರಮ್ಯಾ ಬಲ್ನಾಡು ಗ್ರಾಮದ ಪದ್ಮಯ್ಯ ಗೌಡ ಹಾಗೂ ತೇಜಾವತಿ ದಂಪತಿಯ ಪುತ್ರಿ. ಬಲ್ನಾಡು ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಿಕ್ಷಣ, ಪಿಯುಸಿ ಹಾಗೂ ಪದವಿಯನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪಡೆದಿದ್ದರು.
ಕಳೆದ ವರ್ಷ ಫೆಬ್ರವರಿಯಲ್ಲಿ ಸೇನಾ ನೇಮಕಾತಿಯ ಮೆಡಿಕಲ್ ಪರೀಕ್ಷೆ ಬರೆದಿದ್ದರು. ಆದರೆ ಕೊರೊನಾದಿಂದಾಗಿ ಫಲಿತಾಂಶ ತಡವಾಗಿ ಪ್ರಕಟವಾಗಿತ್ತು. ಶಾಲಾ ದಿನಗಳಲ್ಲಿ ಎನ್ ಸಿ ಸಿ ಯಲ್ಲಿ ಪಾಲ್ಗೊಂಡಿದ್ದ ಸೇನೆಗೆ ಸೇರುವ ನಿಟ್ಟಿನಲ್ಲಿ ತರಬೇತಿ ಪಡೆದಿದ್ದರು. ಈಗ ಎಲ್ಲ ಪರೀಕ್ಷೆಗಳನ್ನು ತೇರ್ಗಡೆ ಮಾಡಿಕೊಂಡು ಊರಿಗೆ ಹೆಮ್ಮೆ ತಂದಿದ್ದಾರೆ.

ಕಾಣಿಯೂರು ಗ್ರಾಮದ ಮಲೆಕರ್ಚಿ ಮೇದಪ್ಪ ಗೌಡ ಮತ್ತು ದೇವಕಿ ದಂಪತಿಯ ಪುತ್ರಿ ಯೋಗಿತಾ ಎಂ. ಎಪ್ರಿಲ್ 1 ರಂದು ಮಧ್ಯಪ್ರದೇಶದ ಗ್ವಾಲಿಯರ್ ನ ತೇಕನ್ಪುರ್ ನಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ಬೊಬ್ಬೆಕೇರಿ ಮತ್ತು ಅಲಂಕಾರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಕಾಣಿಯೂರಿನಲ್ಲಿ ಮತ್ತು ನಿಂತಿಕಲ್ ಕೆ.ಎಸ್ ಗೌಡ ಪಿಯು ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶೇ.70 ಅಂಕಗಳೊಂದಿಗೆ ಪಿಯು ಶಿಕ್ಷಣ ಪಡೆದಿದ್ದರು. ವಿಶ್ವವಿದ್ಯಾಲಯ ಕಾಲೇಜು ಮಂಗಳೂರಿನಲ್ಲಿ ಬಿಎಸ್ಸಿ ಪದವಿ, ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ಮೈಕ್ರೋಬಯಾಲಾಜಿ ವಿಷಯದಲ್ಲಿ ಎಂಎಸ್ಸಿ ಪದವಿ ಪಡೆದು ದೇಶದ ಗಡಿ ಕಾಯುವ ಕೆಲಸಕ್ಕೆ ಮುಂದಾಗಿದ್ದಾರೆ. ಇಬ್ಬರಿಗೂ ಹ್ಯಾಟ್ಸ್ ಅಪ್..
Two ladies from Dakshina Kannada district have been chosen to serve the Border Security Force (BSF) that keeps vigil on the country's borders. They will report to their BSF bosses and begin to serve the force on April 1.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm