ಬ್ರೇಕಿಂಗ್ ನ್ಯೂಸ್
30-03-21 02:52 pm Mangalore Correspondent ಕರಾವಳಿ
ಮಂಗಳೂರು, ಮಾ.30: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸದಂತೆ ಸಿಎಂ ಯಡಿಯೂರಪ್ಪ ಸೂಚಿಸಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಲಂ 144-3 ಪ್ರಕಾರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೊರಡಿಸಿದ್ದಾರೆ. ತಕ್ಷಣದಿಂದಲೇ ಎಲ್ಲ ರೀತಿಯ ಧಾರ್ಮಿಕ ಆಚರಣೆ, ಸಾರ್ವಜನಿಕ ಸಮಾರಂಭಗಳು, ಉತ್ಸವಗಳನ್ನು ನಡೆಸದಂತೆ ಅನಿರ್ದಿಷ್ಟಾವಧಿಗೆ ನಿಷೇಧಿಸಿ ಆದೇಶ ಮಾಡಿದ್ದಾರೆ.

ಜನ ಸೇರುವಂತಹ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳನ್ನು ನಿಷೇಧಿಸಲಾಗಿದೆ. ಇದೇ ವೇಳೆ, ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ನಡೆಸಲು ಅನುಮತಿ ನೀಡಲಾಗಿದೆ. ಹೋಳಿ, ಯುಗಾದಿ, ಗುಡ್ ಫ್ರೈಡೇ ಇನ್ನಿತರ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲೂ ಜನ ಸೇರುವಂತಿಲ್ಲ. ಇದಕ್ಕಾಗಿ ಸಾರ್ವಜನಿಕ ಮೈದಾನ, ಮಾರುಕಟ್ಟೆ ಪ್ರದೇಶಗಳನ್ನು ಬಳಸುವಂತಿಲ್ಲ. ಧಾರ್ಮಿಕ ವಿಧಿಗಳನ್ನು ಕಟ್ಟುಪಾಡಿಗಳಿಗಷ್ಟೇ ಸೀಮಿತವಾಗಿ ನಡೆಸಬೇಕು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ತಪ್ಪಿದಲ್ಲಿ ಕೋವಿಡ್ ವಿಪತ್ತು ನಿರ್ವಹಣೆ ಕಾನೂನು ಪ್ರಕಾರ ದಂಡನೆ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 144 ಸೆಕ್ಷನ್ ಅಡಿ ಮೂರನೇ ವಿಧಿಯನ್ನು ಬಳಸಿ ನಿಷೇಧ ಆದೇಶ ಮಾಡಲಾಗಿದ್ದು ಕೆಲವೊಂದು ಪ್ರಕ್ರಿಯೆಗಳಿಗೆ ಅನುಮತಿಸಿದ್ದರೆ, ಒಳಾಂಗಣ ಮತ್ತು ಹೊರಾಂಗಣದ ಜನ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸಲು ಈ ಕಾಯ್ದೆಯಡಿ ಅವಕಾಶ ನೀಡಲಾಗಿದೆ.
ಎಪ್ರಿಲ್, ಮೇ ತಿಂಗಳಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಉತ್ಸವಗಳು ನಡೆಯುತ್ತಿದ್ದು, ಈ ವಿಧಿಯಡಿ ಎಲ್ಲವನ್ನೂ ನಿಷೇಧಿಸಲು ಜಿಲ್ಲಾಧಿಕಾರಿಗೆ ಅವಕಾಶ ಇರಲಿದೆ. ಮುಖ್ಯಮಂತ್ರಿ 15 ದಿನಗಳ ಕಾಲ ಸಭೆ, ಸಮಾರಂಭಗಳನ್ನು ನಿಷೇಧಿಸಿದ್ದರೆ, ಜಿಲ್ಲಾಧಿಕಾರಿ ಮುಂದಿನ ಆದೇಶದ ವರೆಗೂ ಈ ರೀತಿಯ ಕಾಯ್ದೆಯನ್ನು ಹೇರಿದ್ದಾರೆ.
As the second wave of Coronavirus is spreading, deputy commissioner (DC) Dr Rajendra K V has announced the imposition of a ban on religious gatherings and celebrations in public places in Dakshina Kannada (DK) district.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm