ಬ್ರೇಕಿಂಗ್ ನ್ಯೂಸ್
30-03-21 02:52 pm Mangalore Correspondent ಕರಾವಳಿ
ಮಂಗಳೂರು, ಮಾ.30: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸದಂತೆ ಸಿಎಂ ಯಡಿಯೂರಪ್ಪ ಸೂಚಿಸಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಲಂ 144-3 ಪ್ರಕಾರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೊರಡಿಸಿದ್ದಾರೆ. ತಕ್ಷಣದಿಂದಲೇ ಎಲ್ಲ ರೀತಿಯ ಧಾರ್ಮಿಕ ಆಚರಣೆ, ಸಾರ್ವಜನಿಕ ಸಮಾರಂಭಗಳು, ಉತ್ಸವಗಳನ್ನು ನಡೆಸದಂತೆ ಅನಿರ್ದಿಷ್ಟಾವಧಿಗೆ ನಿಷೇಧಿಸಿ ಆದೇಶ ಮಾಡಿದ್ದಾರೆ.

ಜನ ಸೇರುವಂತಹ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳನ್ನು ನಿಷೇಧಿಸಲಾಗಿದೆ. ಇದೇ ವೇಳೆ, ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ನಡೆಸಲು ಅನುಮತಿ ನೀಡಲಾಗಿದೆ. ಹೋಳಿ, ಯುಗಾದಿ, ಗುಡ್ ಫ್ರೈಡೇ ಇನ್ನಿತರ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲೂ ಜನ ಸೇರುವಂತಿಲ್ಲ. ಇದಕ್ಕಾಗಿ ಸಾರ್ವಜನಿಕ ಮೈದಾನ, ಮಾರುಕಟ್ಟೆ ಪ್ರದೇಶಗಳನ್ನು ಬಳಸುವಂತಿಲ್ಲ. ಧಾರ್ಮಿಕ ವಿಧಿಗಳನ್ನು ಕಟ್ಟುಪಾಡಿಗಳಿಗಷ್ಟೇ ಸೀಮಿತವಾಗಿ ನಡೆಸಬೇಕು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ತಪ್ಪಿದಲ್ಲಿ ಕೋವಿಡ್ ವಿಪತ್ತು ನಿರ್ವಹಣೆ ಕಾನೂನು ಪ್ರಕಾರ ದಂಡನೆ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 144 ಸೆಕ್ಷನ್ ಅಡಿ ಮೂರನೇ ವಿಧಿಯನ್ನು ಬಳಸಿ ನಿಷೇಧ ಆದೇಶ ಮಾಡಲಾಗಿದ್ದು ಕೆಲವೊಂದು ಪ್ರಕ್ರಿಯೆಗಳಿಗೆ ಅನುಮತಿಸಿದ್ದರೆ, ಒಳಾಂಗಣ ಮತ್ತು ಹೊರಾಂಗಣದ ಜನ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸಲು ಈ ಕಾಯ್ದೆಯಡಿ ಅವಕಾಶ ನೀಡಲಾಗಿದೆ.
ಎಪ್ರಿಲ್, ಮೇ ತಿಂಗಳಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಉತ್ಸವಗಳು ನಡೆಯುತ್ತಿದ್ದು, ಈ ವಿಧಿಯಡಿ ಎಲ್ಲವನ್ನೂ ನಿಷೇಧಿಸಲು ಜಿಲ್ಲಾಧಿಕಾರಿಗೆ ಅವಕಾಶ ಇರಲಿದೆ. ಮುಖ್ಯಮಂತ್ರಿ 15 ದಿನಗಳ ಕಾಲ ಸಭೆ, ಸಮಾರಂಭಗಳನ್ನು ನಿಷೇಧಿಸಿದ್ದರೆ, ಜಿಲ್ಲಾಧಿಕಾರಿ ಮುಂದಿನ ಆದೇಶದ ವರೆಗೂ ಈ ರೀತಿಯ ಕಾಯ್ದೆಯನ್ನು ಹೇರಿದ್ದಾರೆ.
As the second wave of Coronavirus is spreading, deputy commissioner (DC) Dr Rajendra K V has announced the imposition of a ban on religious gatherings and celebrations in public places in Dakshina Kannada (DK) district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm