ಬ್ರೇಕಿಂಗ್ ನ್ಯೂಸ್
31-03-21 03:18 pm Mangalore Correspondent ಕರಾವಳಿ
ಉಳ್ಳಾಲ, ಮಾ.31: ಬೇಸಗೆಯಲ್ಲಿ ಎಲ್ಲಿ ನೋಡಿದರೂ ನೀರಿನದ್ದೇ ಸಮಸ್ಯೆ. ಪಂಚಾಯತ್, ನಗರಸಭೆಗಳ ಅಧಿಕಾರಿಗಳಿಗೆ ಜನಸಾಮಾನ್ಯರಿಗೆ ಕುಡಿಯುವ ನೀರು ಪೂರೈಸುವುದೇ ತಲೆನೋವಿನ ಸಂಗತಿ. ಇದನ್ನರಿತ ಉಳ್ಳಾಲದ ನಗರಸಭಾ ಸದಸ್ಯ ಮುಶ್ತಾಕ್ ಪಟ್ಲ ಎಂಬವರು ತನ್ನ ವಾರ್ಡಿನಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಪಣ ತೊಟ್ಟಿದ್ದಾರೆ.
ತನ್ನ ವಾರ್ಡ್ ವ್ಯಾಪ್ತಿಯಲ್ಲಿ ಕನಿಷ್ಠ 25 ಮನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳನ್ನು ನಿರ್ಮಿಸಲು ಉಳ್ಳಾಲ ನಗರಸಭಾ ಸದಸ್ಯ ಮುಶ್ತಾಕ್ ಪಟ್ಲ ಮುಂದಾಗಿದ್ದು, ಇಂಗು ಗುಂಡಿಗಳ ನಿರ್ಮಾಣಕ್ಕೆ ಚಾಲನೆಯನ್ನೂ ನೀಡಿದ್ದು ಈ ಕಾರ್ಯಕ್ಕೆ ನಗರಸಭೆ ಆಯುಕ್ತರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲವು ಯೋಜನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳ ನಿರ್ಮಾಣ ಅತ್ಯಂತ ಸರಳ ಮತ್ತು ಮಿತ ವೆಚ್ಚದ್ದು. ಈ ನಿಟ್ಟಿನಲ್ಲಿ ಉಳ್ಳಾಲ ನಗರಸಭೆಯ ಕಲ್ಲಾಪು - ಪಟ್ಲ ವಾರ್ಡಿನ ಸದಸ್ಯರಾದ ಮುಶ್ತಾಕ್ ಪಟ್ಲ ಅವರು ತಾನು ಪ್ರತಿನಿಧಿಸುತ್ತಿರುವ ಕ್ಷೇತ್ರ ವ್ಯಾಪ್ತಿಯಲ್ಲಿ ಬೇಸಿಗೆ ಅವಧಿಯಲ್ಲಿ ಸುಮಾರು 25 ಮನೆಗಳಲ್ಲಿ ಮಳೆ ನೀರಿನ ಇಂಗು ಗುಂಡಿಗಳ ನಿರ್ಮಾಣದ ಗುರಿ ಇಟ್ಟು ಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಬಬ್ಬುಕಟ್ಟೆ ನಿವಾಸಿ ಮೆಹಪೂಝ್ ಅವರ ನಿವಾಸದಲ್ಲಿ ಮೊದಲ ಇಂಗುಗುಂಡಿ ನಿರ್ಮಾಣ ಆಗಿದೆ.

ಮೆಹಪೂಝ್ ಅವರ ಮನೆಯಲ್ಲಿ ನಿರ್ಮಿಸಲಾದ ಮಳೆ ನೀರು ಇಂಗು ಗುಂಡಿಯನ್ನು ನಗರಸಭೆ ಆಯುಕ್ತರಾದ ರಾಯಪ್ಪ ಅವರೇ ಬಂದು ಪರಿಶೀಲಿಸಿದ್ದು ಭವಿಷ್ಯದ ಉತ್ತಮ ಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಂತರ್ಜಲದ ಮಟ್ಟವನ್ನ ವೃದ್ದಿಸುವ ನಿಟ್ಟಿನಲ್ಲಿ ಮಳೆ ನೀರಿನ ಇಂಗು ಗುಂಡಿಗಳ ಮೂಲಕ ತೆರೆದ ಬಾವಿ, ಕೊಳವೆ ಬಾವಿಗಳಿಗೆ ನೀರನ್ನು ಪುನರ್ ಭರ್ತಿ ಮಾಡಲು ಸಾರ್ವಜನಿಕರು ಪ್ರಯತ್ನ ನಡೆಸಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲು ಸಾಧ್ಯವಿಲ್ಲ ಎಂದಿದ್ದಾರೆ.

ಅನೇಕ ಮನೆಗಳಲ್ಲಿ ಸಾಕಷ್ಟು ಸ್ಥಳಾವಕಾಶ ಇದ್ದರೂ ಮಳೆ ನೀರನ್ನು ಸುಮ್ಮನೆ ವ್ಯರ್ಥವಾಗಿ ಹರಿಯ ಬಿಡಲಾಗುತ್ತದೆ. ವಾರ್ಡ್ ನಿವಾಸಿಗಳಲ್ಲಿ ಮಳೆ ನೀರು ಇಂಗಿಸುವಿಕೆಯ ಮಹತ್ವ , ಪ್ರಯೋಜನಗಳನ್ನು ತಿಳಿಯ ಪಡಿಸಿದ್ದು ಕನಿಷ್ಠ 25 ಮನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳನ್ನು ಈ ಬಾರಿ ನಿರ್ಮಿಸುವುದಾಗಿ ನಗರ ಸದಸ್ಯ ಮುಶ್ತಾಕ್ ಪಟ್ಲ ಹೇಳಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm