ಬ್ರೇಕಿಂಗ್ ನ್ಯೂಸ್
01-04-21 06:19 pm Mangalore Correspondent ಕರಾವಳಿ
ಮಂಗಳೂರು, ಎ.1: ಬೆಂಗಳೂರಿನ ಜೈಲಿನಿಂದಲೇ ಮಂಗಳೂರಿನ ರೌಡಿಸಂ ಜಗತ್ತನ್ನು ಕೈಯಲ್ಲಿರಿಸಿಕೊಂಡಿರುವ ರೌಡಿ ಆಕಾಶ್ ಭವನ ಶರಣ್ ಗ್ಯಾಂಗಿನ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಶರಣ್ ಸೂಚನೆಯಂತೆ ಹಫ್ತಾ ವಸೂಲಿ ಮತ್ತು ತಮ್ಮ ವಿರೋಧಿಗಳನ್ನು ಮುಗಿಸಲು ಸಂಚು ನಡೆಸಿದ್ದ ಆರೋಪದಲ್ಲಿ ಶರಣ್ ತಮ್ಮ ದೀರಜ್ ಅಲಿಯಾಸ್ ಕುಟ್ಟ ಆಕಾಶಭವನ(26), ಮತ್ತು ಇವರಿಗೆ ಮಧ್ಯಪ್ರದೇಶದಿಂದ ಮಾರಕಾಸ್ತ್ರಗಳನ್ನು ಪೂರೈಸುತ್ತಿದ್ದ ರಾಜೇಶ್ ತೋಮರ್ ಅಲಿಯಾಸ್ ರಾಜ್ಬೀರ್ (31), ಮರಳು ದಂಧೆಯಲ್ಲಿ ತೊಡಗಿಸ್ಕೊಂಡು ಹಣಕಾಸು ಡೀಲ್ ನಡೆಸುತ್ತಿದ್ದ ಅದ್ಯಪಾಡಿ ನಿವಾಸಿ ರಾಕೇಶ್ ಕಂಬಳಿ(25), ಎಕ್ಕಾರಿನ ರಾಜೇಶ್ ಆಚಾರ್ಯ(38), ಆಕಾಶ್ಭವನ ನಂದನಪುರ ನಿವಾಸಿ ಸಾಗರ್ (23) ಎಂಬವರನ್ನು ಬಂಧಿಸಲಾಗಿದೆ.

ಈಗಾಗ್ಲೇ ಬೈಕ್ ಅಡ್ಡಗಟ್ಟಿ ದರೋಡೆ ನಡೆಸುತ್ತಿದ್ದ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ದೀಕ್ಷಿತ್ ಪೂಜಾರಿ, ಚಂದ್ರಹಾಸ, ಪ್ರಜ್ವಲ್ ಮತ್ತು ಸಂತೋಷ್ ಪೂಜಾರಿಯನ್ನು ವಿಚಾರಣೆ ನಡೆಸಿದಾಗ, ಅವರು ಆಕಾಶಭವನ್ ಶರಣ್ ಸೂಚನೆಯಂತೆ ಕೆಲಸ ಮಾಡುತ್ತಿರುವುದು ತಿಳಿದುಬಂದಿತ್ತು. ಅಲ್ಲದೆ, ಮಂಗಳೂರಿನಲ್ಲಿ ತಾನೇ ಅಂಡರ್ ವರ್ಲ್ಡ್ ಕಿಂಗ್ ಆಗಬೇಕೆಂದು ಬಯಸುತ್ತಿದ್ದ ಆಕಾಶಭವನ ಶರಣ್ ವಿರುದ್ಧ ಇದ್ದವರನ್ನು ಕೊಲ್ಲಲು ಸಂಚು ರೂಪಿಸಿದ್ದು ಬಯಲಾಗಿತ್ತು. ಅದರಂತೆ, ವಿಚಾರಣೆ ನಡೆಸಿದಾಗ ಈ ಹಿಂದೆ ಭೂಗತ ಪಾತಕಿ ರವಿಪೂಜಾರಿ ಗ್ಯಾಂಗಿನಲ್ಲಿ ಗುರುತಿಸಿಕೊಂಡಿದ್ದ ಪ್ರದೀಪ್ ಮೆಂಡನ್, ಮಂಕಿಸ್ಟಾಂಡ್ ವಿಜಯ್ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದು ತಿಳಿದು ಬಂದಿತ್ತು.


ಇದಲ್ಲದೆ, ಆಕಾಶಭವನ್ ಶರಣ್ ಸೂಚನೆಯಂತೆ ಕಂಕನಾಡಿ ಠಾಣೆ ವ್ಯಾಪ್ತಿಯ ಹಳೇ ರೌಡಿ ಗೌರೀಶ್ ಅಲಿಯಾಸ್ ಗೌರಿಯನ್ನು ಕೊಲೆ ಮಾಡಲು ಆತನ ತಮ್ಮ ಧೀರಜ್ ಮುಂದಾಗಿರುವುದು ತಿಳಿದುಬಂದಿತ್ತು. ಧೀರಜ್ ಗೆ ನೆರವು ನೀಡುತ್ತಿದ್ದ ಇತರ ಮೂವರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ರೌಡಿಸಂ ಲೋಕದಲ್ಲಿ ತನ್ನದೇ ಪಾರುಪತ್ಯ ಪಡೆಯುವುದಕ್ಕಾಗಿ ಆಕಾಶಭವನ್ ಶರಣ್ ಈ ಕೆಲಸವನ್ನು ಮಾಡಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ. ಮೂವರ ಕೊಲೆ ಸಂಚಿನ ಆರೋಪದಲ್ಲಿ ಕಂಕನಾಡಿ ಪೊಲೀಸರು ಬೆಂಗಳೂರು ಜೈಲಿನಲ್ಲಿರುವ ಆಕಾಶಭವನ್ ಶರಣ್ ನನ್ನು ನ್ಯಾಯಾಲಯದ ಅನುಮತಿ ಪಡೆದು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.
Mangalore Plotting murder and robbery Police arrest four of akash bhavan gang. The Kankandy Town police have succeeded in arresting the four.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm