ಬ್ರೇಕಿಂಗ್ ನ್ಯೂಸ್
03-04-21 01:02 pm Mangalore Correspondent ಕರಾವಳಿ
ಮಂಗಳೂರು, ಎ.3: ಸಚಿವ ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಈಶ್ವರಪ್ಪ ಬರೆದಿರುವುದು ಕೇವಲ ಪತ್ರ ಅಲ್ಲ, ರಾಜ್ಯ ಸರಕಾರದ ಆಡಳಿತ ವೈಖರಿ. ಹಿರಿಯ ಕ್ಯಾಬಿನೆಟ್ ಮಿನಿಸ್ಟರ್ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಬಿಂಬಿಸಿದ್ದಾರೆ. ರಾಜ್ಯದಲ್ಲಿ ಸಚಿವರಿಗೇ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಕೇರಳ ಪ್ರವಾಸ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಮಾಧ್ಯಮದ ಜೊತೆ ಮಾತನಾಡಿದರು. ರಾಜ್ಯದಲ್ಲಿ ಸರಕಾರ ಹೇಗೆ ಆಡಳಿತ ನಡೆಸುತ್ತಿದೆ ಎಂಬುದನ್ನು ಸಚಿವ ಈಶ್ವರಪ್ಪ ಬಿಚ್ಚಿಟ್ಟಿದ್ದಾರೆ. ರಾಜ್ಯದ ಕಾನ್ ಸ್ಟಿಟ್ಯೂಷನಲ್ ಹೆಡ್ ಅಂದ್ರೆ ರಾಜ್ಯಪಾಲರಿಗೆ ಸಚಿವರೇ ಸಿಎಂ ಮೇಲೆ ವಿಶ್ವಾಸವಿಲ್ಲ ಎಂದಿದ್ದಾರೆ. ಮಿನಿಸ್ಟರ್ ಒಬ್ಬರಿಗೆ ಸಿಎಂ ಮೇಲೆ ವಿಶ್ವಾಸವಿಲ್ಲ ಎಂದರೆ ಸರಕಾರ ಹೇಗೆ ನಡೀತಿದೆ ? ಸರಕಾರದಲ್ಲಿ ಏನು ನಡೀತಿದೆ? ಹೇಗೆ ನಡೀತಿದೆ? ಎನ್ನುವುದನ್ನು ಈಶ್ವರಪ್ಪ ಎಕ್ಸ್ ಪೋಸ್ ಮಾಡಿದ್ದಾರೆ. ಸಿಎಂಗೆ ತಮ್ಮ ಆಡಳಿತ ಸರಿ ಇದೆ ಅನ್ನೋದಾದರೆ ಇಂದು ಸಂಜೆ ಒಳಗೆ ಈಶ್ವರಪ್ಪ ಅವರನ್ನು ಸಂಪುಟದಿಂದ ಡಿಸ್ಮಿಸ್ ಮಾಡಬೇಕು. ಇಲ್ಲಾಂದ್ರೆ ಯಡಿಯೂರಪ್ಪ ಅವರೇ ವಾಲೆಂಟರಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಈಶ್ವರಪ್ಪ ಇದನ್ನು ರೆಬೆಲ್ ಅಲ್ಲ, ಲಾಯಲ್ ಅಂತಿದ್ದಾರೆ. ಇದು ರಾಜ್ಯದ ಆಡಳಿತ ವಿಚಾರವಾಗಿದೆ. ಆಡಳಿತದ ಬಗ್ಗೆ ದೇಶಕ್ಕೆ ಪಾಠ ಹೇಳ್ತಾ ಇದ್ದವರು ಇದನ್ನು ತೋರಿಸಿಕೊಟ್ಟಿದ್ದಾರೆ. ರಾಜ್ಯಪಾಲರಿಗೆ ದೂರು ಕೊಟ್ಟು ಸಮರ್ಥನೆ ಮಾಡುತ್ತಿದ್ದಾರೆ. ಇದರ ಅರ್ಥ ಏನು ಎಂದು ಡಿಕೆಶಿ ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಮತ್ತು ನನ್ನ ನಡುವೆ ಭಿನ್ನಮತವಿರುವ ಬಗ್ಗೆ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ. ನಾನು ಮಂತ್ರಿಯಾಗಿದ್ದಾಗ ಸಿಎಂ ವಿರುದ್ಧ ಮಾತಾಡಿಲ್ಲ. ನಮ್ಮ ಬಗ್ಗೆ ಹೇಳುವ ಬದಲಾಗಿ ಮೊದಲು ನಿಮ್ದು ಸರಿಮಾಡಿಕೊಳ್ಳಿ. ನಿಮ್ಮಲ್ಲಿ ಆರು ಜನ ಮುತ್ತು ರತ್ನಗಳನ್ನು ಇಟ್ಟುಕೊಂಡಿ ಕೊಂಡಿದ್ದೀರಿ. ಇನ್ನು 15 ಜನ ಬೇರೆ ಇದ್ದಾರೆ. ರಾಜ್ಯದಲ್ಲಿ ಆಡಳಿತ ಸ್ಥಿತಿ ಸಂಪೂರ್ಣ ಕುಸಿದು ಹೋಗಿದೆ. ಇದನ್ನು ಸಚಿವರೇ ಆಗಾಗ ತೋರಿಸಿಕೊಳ್ಳುತ್ತಿದ್ದಾರೆ ಎಂದು ತಿವಿದರು.

ಸಿಡಿ ಪ್ರಕರಣದ ಬಗ್ಗೆ ಮಾತನಾಡಿದ ಡಿಕೆಶಿ, ಒಳ್ಳೆ ಹೆಸರು ಗಳಿಸಿರುವ ಪೊಲೀಸರು ಸಿಡಿ ಪ್ರಕರಣದಲ್ಲಿ ಏನು ಮಾಡುತ್ತಿದ್ದಾರೆ ? ಯಾವ ದಿಕ್ಕಿನಲ್ಲಿ ತನಿಖೆ ಸಾಗುತ್ತಿದೆ ಎಂಬುದು ನನಗೆ ಗೊತ್ತಿದೆ. ರಮೇಶ್ ಜಾರಕಿಹೊಳಿ ಕಷ್ಟ ನಷ್ಟ ಏನೋ? ಎಲ್ಲೆಲ್ಲಿ ನೋವಿದೆಯೋ ಎನ್ನುವ ಮೂಲಕ ಡಿಕೆಶಿ ವ್ಯಂಗ್ಯವಾಡಿದ್ದಾರೆ.
ಇದೇ ವೇಳೆ, ಕೊರೊನಾ ಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ಎಡವಿದೆ. ವಾಸ್ತವಿಕ ಸ್ಥಿತಿಯನ್ನು ಅರಿತುಕೊಳ್ಳದೆ ಏನೇನೊ ಮಾತನಾಡುತ್ತಿದ್ದಾರೆ. ಮನೆಯಲ್ಲಿ ಒಟ್ಟಿಗಿರುವ ಮಂದಿ ಥಿಯೇಟರಲ್ಲಿ ಬೇರೆ ಬೇರೆ ಇರಬೇಕಂದ್ರೆ ಏನರ್ಥ. ಕೊರೊನಾ ನಿಯಂತ್ರಣಕ್ಕೆ ಬರಬೇಕು ಎಂದ್ರೆ ಚುನಾವಣಾ ಪ್ರಚಾರ ಸೇರಿದಂತೆ ಎಲ್ಲದಕ್ಕೂ ನಿಯಂತ್ರಣ ಹೇರಿ ಅಂತ ಸೂಚ್ಯವಾಗಿ ಹೇಳಿದರು.
Read: ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ; ಯಡಿಯೂರಪ್ಪ ವಿರೋಧಿ ಬಣದ ಹೊಸ ದಾಳ ! ಬಿಜೆಪಿಗೆ ಮತ್ತೆ ಇಕ್ಕಟ್ಟು
Video:
Eshwarappa has shown the true colour of BJP govt mocked congress KPCC DK Shivakumar in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm