ಬ್ರೇಕಿಂಗ್ ನ್ಯೂಸ್
03-04-21 03:45 pm Mangalore Correspondent ಕರಾವಳಿ
ಮಂಗಳೂರು, ಎ.3: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರೀ ಪ್ರಮಾಣದ ಚಿನ್ನದ ಅಕ್ರಮ ಸಾಗಾಟವನ್ನು ಪತ್ತೆ ಮಾಡಿದ್ದಾರೆ. ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಒಟ್ಟು ಎರಡೂವರೆ ಕೇಜಿ ಚಿನ್ನವನ್ನು ವಶಕ್ಕೆ ಪಡೆದಿದ್ದು, ಅಂದಾಜು 1.20 ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ.

ಎಪ್ರಿಲ್ 1 ಮತ್ತು 2ರಂದು ದುಬೈನಿಂದ ಬಂದಿದ್ದ ಕೇರಳದ ಕಾಸರಗೋಡಿನ ಅಬ್ದುಲ್ ಸಲಾಂ ಮನಿಪರಂಬು ಮತ್ತು ಮೊಹಮ್ಮದ್ ಅಶ್ರಫ್ ಎಂಬಿಬ್ಬರನ್ನು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಅಬ್ದುಲ್ ಸಲಾಂ ತನ್ನ ದೇಹದಲ್ಲಿ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿಟ್ಟಿದ್ದರೆ, ಮೊಹಮ್ಮದ್ ಅಶ್ರಫ್ ತಾನು ತೊಟ್ಟಿದ್ದ ಜೀನ್ಸ್ ಅಂಗಿಯಲ್ಲಿ ಬಟನ್ ರೂಪದಲ್ಲಿ ಚಿನ್ನವನ್ನು ಹಾಕ್ಕೊಂಡಿದ್ದ. ಅಲ್ಲದೆ, ತನ್ನ ಶೂ ಒಳಗೆ ಚಿನ್ನದ ಸರ ಇಟ್ಟುಕೊಂಡಿದ್ದ. ಇವರಲ್ಲಿ 26.43 ಲಕ್ಷ ಮೌಲ್ಯದ ಒಟ್ಟು 576 ಗ್ರಾಮ್ ಚಿನ್ನ ಪತ್ತೆಯಾಗಿತ್ತು.


ಎಪ್ರಿಲ್ 3ರಂದು ಬೆಳಗ್ಗೆ ಮಂಗಳೂರಿನ ಉಳ್ಳಾಲದ ನಿವಾಸಿ ಮೊಹಮ್ಮದ್ ಆಶಿಫ್ (28) ಎನ್ನುವಾತ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಬಂದಿದ್ದು ಭಾರೀ ಪ್ರಮಾಣದ ಚಿನ್ನದ ಜೊತೆ ಸಿಕ್ಕಿಬಿದ್ದಿದ್ದಾನೆ. ಪ್ಯಾಂಟ್ ಮತ್ತು ಶರ್ಟಿನಲ್ಲಿ ವಿಶೇಷವಾಗಿ ರಚಿಸಲಾಗಿದ್ದ ಪಾಕೆಟ್ ಒಳಗೆ ಚಿನ್ನದ ಗಟ್ಟಿ ಇಟ್ಟುಕೊಂಡಿದ್ದ. ಈತನ ಬಳಿ 1 ಕೇಜಿ 933 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 92.27 ಲಕ್ಷ ಆಗಿರುತ್ತದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ದಿನದ ಅಂತರದಲ್ಲಿ ಎರಡೂವರೆ ಕೇಜಿ ಚಿನ್ನ ಪತ್ತೆಯಾಗಿದ್ದು ಇದೇ ಮೊದಲಾಗಿದ್ದು, ದಿನವೂ ಭಾರೀ ಪ್ರಮಾಣದ ಚಿನ್ನ ಕಳ್ಳ ಸಾಗಣೆ ಮೂಲಕ ಭಾರತಕ್ಕೆ ಬರುತ್ತಿರುವುದರ ದ್ಯೋತಕವಾಗಿದೆ.
In a Big time Haul the customs officers of Mangalore Airport have seized 2.5 Kgs of Gold worth 1.20 crores in two days.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm