ಬ್ರೇಕಿಂಗ್ ನ್ಯೂಸ್
03-04-21 03:45 pm Mangalore Correspondent ಕರಾವಳಿ
ಮಂಗಳೂರು, ಎ.3: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರೀ ಪ್ರಮಾಣದ ಚಿನ್ನದ ಅಕ್ರಮ ಸಾಗಾಟವನ್ನು ಪತ್ತೆ ಮಾಡಿದ್ದಾರೆ. ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಒಟ್ಟು ಎರಡೂವರೆ ಕೇಜಿ ಚಿನ್ನವನ್ನು ವಶಕ್ಕೆ ಪಡೆದಿದ್ದು, ಅಂದಾಜು 1.20 ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ.

ಎಪ್ರಿಲ್ 1 ಮತ್ತು 2ರಂದು ದುಬೈನಿಂದ ಬಂದಿದ್ದ ಕೇರಳದ ಕಾಸರಗೋಡಿನ ಅಬ್ದುಲ್ ಸಲಾಂ ಮನಿಪರಂಬು ಮತ್ತು ಮೊಹಮ್ಮದ್ ಅಶ್ರಫ್ ಎಂಬಿಬ್ಬರನ್ನು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಅಬ್ದುಲ್ ಸಲಾಂ ತನ್ನ ದೇಹದಲ್ಲಿ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿಟ್ಟಿದ್ದರೆ, ಮೊಹಮ್ಮದ್ ಅಶ್ರಫ್ ತಾನು ತೊಟ್ಟಿದ್ದ ಜೀನ್ಸ್ ಅಂಗಿಯಲ್ಲಿ ಬಟನ್ ರೂಪದಲ್ಲಿ ಚಿನ್ನವನ್ನು ಹಾಕ್ಕೊಂಡಿದ್ದ. ಅಲ್ಲದೆ, ತನ್ನ ಶೂ ಒಳಗೆ ಚಿನ್ನದ ಸರ ಇಟ್ಟುಕೊಂಡಿದ್ದ. ಇವರಲ್ಲಿ 26.43 ಲಕ್ಷ ಮೌಲ್ಯದ ಒಟ್ಟು 576 ಗ್ರಾಮ್ ಚಿನ್ನ ಪತ್ತೆಯಾಗಿತ್ತು.


ಎಪ್ರಿಲ್ 3ರಂದು ಬೆಳಗ್ಗೆ ಮಂಗಳೂರಿನ ಉಳ್ಳಾಲದ ನಿವಾಸಿ ಮೊಹಮ್ಮದ್ ಆಶಿಫ್ (28) ಎನ್ನುವಾತ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಬಂದಿದ್ದು ಭಾರೀ ಪ್ರಮಾಣದ ಚಿನ್ನದ ಜೊತೆ ಸಿಕ್ಕಿಬಿದ್ದಿದ್ದಾನೆ. ಪ್ಯಾಂಟ್ ಮತ್ತು ಶರ್ಟಿನಲ್ಲಿ ವಿಶೇಷವಾಗಿ ರಚಿಸಲಾಗಿದ್ದ ಪಾಕೆಟ್ ಒಳಗೆ ಚಿನ್ನದ ಗಟ್ಟಿ ಇಟ್ಟುಕೊಂಡಿದ್ದ. ಈತನ ಬಳಿ 1 ಕೇಜಿ 933 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 92.27 ಲಕ್ಷ ಆಗಿರುತ್ತದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ದಿನದ ಅಂತರದಲ್ಲಿ ಎರಡೂವರೆ ಕೇಜಿ ಚಿನ್ನ ಪತ್ತೆಯಾಗಿದ್ದು ಇದೇ ಮೊದಲಾಗಿದ್ದು, ದಿನವೂ ಭಾರೀ ಪ್ರಮಾಣದ ಚಿನ್ನ ಕಳ್ಳ ಸಾಗಣೆ ಮೂಲಕ ಭಾರತಕ್ಕೆ ಬರುತ್ತಿರುವುದರ ದ್ಯೋತಕವಾಗಿದೆ.
In a Big time Haul the customs officers of Mangalore Airport have seized 2.5 Kgs of Gold worth 1.20 crores in two days.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm