ಬ್ರೇಕಿಂಗ್ ನ್ಯೂಸ್
03-04-21 03:45 pm Mangalore Correspondent ಕರಾವಳಿ
ಮಂಗಳೂರು, ಎ.3: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರೀ ಪ್ರಮಾಣದ ಚಿನ್ನದ ಅಕ್ರಮ ಸಾಗಾಟವನ್ನು ಪತ್ತೆ ಮಾಡಿದ್ದಾರೆ. ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಒಟ್ಟು ಎರಡೂವರೆ ಕೇಜಿ ಚಿನ್ನವನ್ನು ವಶಕ್ಕೆ ಪಡೆದಿದ್ದು, ಅಂದಾಜು 1.20 ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ.

ಎಪ್ರಿಲ್ 1 ಮತ್ತು 2ರಂದು ದುಬೈನಿಂದ ಬಂದಿದ್ದ ಕೇರಳದ ಕಾಸರಗೋಡಿನ ಅಬ್ದುಲ್ ಸಲಾಂ ಮನಿಪರಂಬು ಮತ್ತು ಮೊಹಮ್ಮದ್ ಅಶ್ರಫ್ ಎಂಬಿಬ್ಬರನ್ನು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಅಬ್ದುಲ್ ಸಲಾಂ ತನ್ನ ದೇಹದಲ್ಲಿ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿಟ್ಟಿದ್ದರೆ, ಮೊಹಮ್ಮದ್ ಅಶ್ರಫ್ ತಾನು ತೊಟ್ಟಿದ್ದ ಜೀನ್ಸ್ ಅಂಗಿಯಲ್ಲಿ ಬಟನ್ ರೂಪದಲ್ಲಿ ಚಿನ್ನವನ್ನು ಹಾಕ್ಕೊಂಡಿದ್ದ. ಅಲ್ಲದೆ, ತನ್ನ ಶೂ ಒಳಗೆ ಚಿನ್ನದ ಸರ ಇಟ್ಟುಕೊಂಡಿದ್ದ. ಇವರಲ್ಲಿ 26.43 ಲಕ್ಷ ಮೌಲ್ಯದ ಒಟ್ಟು 576 ಗ್ರಾಮ್ ಚಿನ್ನ ಪತ್ತೆಯಾಗಿತ್ತು.


ಎಪ್ರಿಲ್ 3ರಂದು ಬೆಳಗ್ಗೆ ಮಂಗಳೂರಿನ ಉಳ್ಳಾಲದ ನಿವಾಸಿ ಮೊಹಮ್ಮದ್ ಆಶಿಫ್ (28) ಎನ್ನುವಾತ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಬಂದಿದ್ದು ಭಾರೀ ಪ್ರಮಾಣದ ಚಿನ್ನದ ಜೊತೆ ಸಿಕ್ಕಿಬಿದ್ದಿದ್ದಾನೆ. ಪ್ಯಾಂಟ್ ಮತ್ತು ಶರ್ಟಿನಲ್ಲಿ ವಿಶೇಷವಾಗಿ ರಚಿಸಲಾಗಿದ್ದ ಪಾಕೆಟ್ ಒಳಗೆ ಚಿನ್ನದ ಗಟ್ಟಿ ಇಟ್ಟುಕೊಂಡಿದ್ದ. ಈತನ ಬಳಿ 1 ಕೇಜಿ 933 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 92.27 ಲಕ್ಷ ಆಗಿರುತ್ತದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ದಿನದ ಅಂತರದಲ್ಲಿ ಎರಡೂವರೆ ಕೇಜಿ ಚಿನ್ನ ಪತ್ತೆಯಾಗಿದ್ದು ಇದೇ ಮೊದಲಾಗಿದ್ದು, ದಿನವೂ ಭಾರೀ ಪ್ರಮಾಣದ ಚಿನ್ನ ಕಳ್ಳ ಸಾಗಣೆ ಮೂಲಕ ಭಾರತಕ್ಕೆ ಬರುತ್ತಿರುವುದರ ದ್ಯೋತಕವಾಗಿದೆ.
In a Big time Haul the customs officers of Mangalore Airport have seized 2.5 Kgs of Gold worth 1.20 crores in two days.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm