ಬ್ರೇಕಿಂಗ್ ನ್ಯೂಸ್
22-08-20 05:14 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 22: ಕರಾವಳಿಯಲ್ಲಿ ಕೊರೊನಾ ಸಂಕಷ್ಟದ ನಡುವೆ ಗಣೇಶನ ಪೂಜೆ ನಡೆದಿದೆ. ಆದರೆ, ಕರಾವಳಿ ಜನ ಗಣೇಶನ ಆರಾಧನೆಯಲ್ಲಿ ತೊಡಗಿದ್ದರೆ ಇತ್ತ ಹಸಿರ ಸಿರಿಯ ಪ್ರಕೃತಿಯೇ ಗಣಪನ ರೂಪದಲ್ಲಿ ಕಂಡುಬಂದಿದ್ದಾಳೆ.
ಹೌದು.. ಮಂಗಳೂರು ನಗರ ಹೊರವಲಯದ ವಾಮಂಜೂರು ಬಳಿಯ ಕೆತ್ತಿಕಲ್ ಎಂಬಲ್ಲಿ ಅಪರೂಪದ ದೃಶ್ಯ ಕಂಡುಬಂದಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಈಚಲು ಮರಕ್ಕೆ ಸುತ್ತಿಕೊಂಡ ಗಿಡ, ಬಳ್ಳಿಗಳೆಲ್ಲ ಸೇರಿ ಗಣೇಶನ ಆಕೃತಿ ಪಡೆದಿದ್ದು ರಮಣೀಯ ನಿಸರ್ಗ ಸಿರಿ ಭಕ್ತಜನರನ್ನು ಮಂತ್ರಮುಗ್ಧಗೊಳಿಸಿದೆ. ಕೆತ್ತಿಕಲ್ ತಿರುವಿನಿಂದ ಅಮೃತೇಶ್ವರಿ ದೇವಸ್ಥಾನಕ್ಕೆ ತಿರುಗುವ ರಸ್ತೆಯಲ್ಲಿ ಸಾಗುತ್ತಿದ್ದಂತೆ ಈ ಗಣೇಶ ರೂಪ ಕಂಡುಬರುತ್ತಿದ್ದು ಇದನ್ನು ವಿಶಾಲ್ ವಾಮಂಜೂರು ಎನ್ನುವ ಫೋಟೋಗ್ರಾಫರ್ ಸೆರೆ ಹಿಡಿದು ಆ ಫೋಟೊವನ್ನು ಹಂಚಿಕೊಂಡಿದ್ದಾರೆ.

ಕಾಕತಾಳೀಯ ಎಂಬಂತೆ, ಗಣೇಶನ ಹಬ್ಬದ ದಿವಸವೇ ಇಂಥ ನಿಸರ್ಗ ಸಿರಿ ಕಂಡುಬಂದಿದ್ದು ಆ ಚಿತ್ರಣದ ಫೋಟೊ ಈಗ ವೈರಲ್ ಆಗಿದೆ. ಈಚಲು ಮರಕ್ಕೆ ಪೊದೆಗಳು ಬೆಳೆದು ನಿಂತಿರುವುದು ಅತ್ತ ರಸ್ತೆಯಲ್ಲಿ ಸಾಗುವ ಪ್ರಯಾಣಿಕರಿಗೆ ಗಣಪತಿಯ ಸೊಂಡಿಲಿನ ರೂಪ ಮನಸ್ಸಿಗೆ ಬರುತ್ತದೆ. ಇದನ್ನೇ ಫೋಟೋಗ್ರಾಫರ್ ತನ್ನ ಕಣ್ಣಿಗೆ ನಿಲುಕಿದಂತೆ ಕ್ಕಿಕ್ಕಿಸಿದ್ದು ಫೋಟೊ ವೈರಲ್ ಆಗುತ್ತಿದ್ದಂತೆ ಜನರು ಸ್ಥಳಕ್ಕೆ ಆಗಮಿಸ ತೊಡಗಿದ್ದಾರೆ. ನಿಸರ್ಗದಲ್ಲಿ ಅರಳಿದ ಗಣಪನನ್ನ ಕಂಡು ಜನರು ಭಕ್ತಿಯಿಂದ ನಮಿಸುತ್ತಿದ್ದಾರೆ. ತಮ್ಮ ಮೊಬೈಲ್ ಗಳಲ್ಲಿ ಫೋಟೊ ತೆಗೆದು ಕಣ್ಣು ತುಂಬಿಸಿಕೊಳ್ಳುತ್ತಿದ್ದಾರೆ. ಗಣೇಶೋತ್ಸವ ಸಡಗರದ ನಡುವಲ್ಲೇ ಹಸಿರ ಸಿರಿಯ ಮಧ್ಯೆ ಗಣೇಶನ ರೂಪ ಕಂಡಿರುವುದು, ಭಕ್ತ ಜನರ ಕುತೂಹಲಕ್ಕೆ ಕಾರಣವಾಗಿದೆ.
Photo Courtesy : Vishal Vamanjoor
Video:
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm