ಬ್ರೇಕಿಂಗ್ ನ್ಯೂಸ್
22-08-20 05:14 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 22: ಕರಾವಳಿಯಲ್ಲಿ ಕೊರೊನಾ ಸಂಕಷ್ಟದ ನಡುವೆ ಗಣೇಶನ ಪೂಜೆ ನಡೆದಿದೆ. ಆದರೆ, ಕರಾವಳಿ ಜನ ಗಣೇಶನ ಆರಾಧನೆಯಲ್ಲಿ ತೊಡಗಿದ್ದರೆ ಇತ್ತ ಹಸಿರ ಸಿರಿಯ ಪ್ರಕೃತಿಯೇ ಗಣಪನ ರೂಪದಲ್ಲಿ ಕಂಡುಬಂದಿದ್ದಾಳೆ.
ಹೌದು.. ಮಂಗಳೂರು ನಗರ ಹೊರವಲಯದ ವಾಮಂಜೂರು ಬಳಿಯ ಕೆತ್ತಿಕಲ್ ಎಂಬಲ್ಲಿ ಅಪರೂಪದ ದೃಶ್ಯ ಕಂಡುಬಂದಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಈಚಲು ಮರಕ್ಕೆ ಸುತ್ತಿಕೊಂಡ ಗಿಡ, ಬಳ್ಳಿಗಳೆಲ್ಲ ಸೇರಿ ಗಣೇಶನ ಆಕೃತಿ ಪಡೆದಿದ್ದು ರಮಣೀಯ ನಿಸರ್ಗ ಸಿರಿ ಭಕ್ತಜನರನ್ನು ಮಂತ್ರಮುಗ್ಧಗೊಳಿಸಿದೆ. ಕೆತ್ತಿಕಲ್ ತಿರುವಿನಿಂದ ಅಮೃತೇಶ್ವರಿ ದೇವಸ್ಥಾನಕ್ಕೆ ತಿರುಗುವ ರಸ್ತೆಯಲ್ಲಿ ಸಾಗುತ್ತಿದ್ದಂತೆ ಈ ಗಣೇಶ ರೂಪ ಕಂಡುಬರುತ್ತಿದ್ದು ಇದನ್ನು ವಿಶಾಲ್ ವಾಮಂಜೂರು ಎನ್ನುವ ಫೋಟೋಗ್ರಾಫರ್ ಸೆರೆ ಹಿಡಿದು ಆ ಫೋಟೊವನ್ನು ಹಂಚಿಕೊಂಡಿದ್ದಾರೆ.

ಕಾಕತಾಳೀಯ ಎಂಬಂತೆ, ಗಣೇಶನ ಹಬ್ಬದ ದಿವಸವೇ ಇಂಥ ನಿಸರ್ಗ ಸಿರಿ ಕಂಡುಬಂದಿದ್ದು ಆ ಚಿತ್ರಣದ ಫೋಟೊ ಈಗ ವೈರಲ್ ಆಗಿದೆ. ಈಚಲು ಮರಕ್ಕೆ ಪೊದೆಗಳು ಬೆಳೆದು ನಿಂತಿರುವುದು ಅತ್ತ ರಸ್ತೆಯಲ್ಲಿ ಸಾಗುವ ಪ್ರಯಾಣಿಕರಿಗೆ ಗಣಪತಿಯ ಸೊಂಡಿಲಿನ ರೂಪ ಮನಸ್ಸಿಗೆ ಬರುತ್ತದೆ. ಇದನ್ನೇ ಫೋಟೋಗ್ರಾಫರ್ ತನ್ನ ಕಣ್ಣಿಗೆ ನಿಲುಕಿದಂತೆ ಕ್ಕಿಕ್ಕಿಸಿದ್ದು ಫೋಟೊ ವೈರಲ್ ಆಗುತ್ತಿದ್ದಂತೆ ಜನರು ಸ್ಥಳಕ್ಕೆ ಆಗಮಿಸ ತೊಡಗಿದ್ದಾರೆ. ನಿಸರ್ಗದಲ್ಲಿ ಅರಳಿದ ಗಣಪನನ್ನ ಕಂಡು ಜನರು ಭಕ್ತಿಯಿಂದ ನಮಿಸುತ್ತಿದ್ದಾರೆ. ತಮ್ಮ ಮೊಬೈಲ್ ಗಳಲ್ಲಿ ಫೋಟೊ ತೆಗೆದು ಕಣ್ಣು ತುಂಬಿಸಿಕೊಳ್ಳುತ್ತಿದ್ದಾರೆ. ಗಣೇಶೋತ್ಸವ ಸಡಗರದ ನಡುವಲ್ಲೇ ಹಸಿರ ಸಿರಿಯ ಮಧ್ಯೆ ಗಣೇಶನ ರೂಪ ಕಂಡಿರುವುದು, ಭಕ್ತ ಜನರ ಕುತೂಹಲಕ್ಕೆ ಕಾರಣವಾಗಿದೆ.
Photo Courtesy : Vishal Vamanjoor
Video:
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm