ಬ್ರೇಕಿಂಗ್ ನ್ಯೂಸ್
05-04-21 01:22 pm Udupi Correspondent ಕರಾವಳಿ
ಉಡುಪಿ, ಎ.5 : ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮಹಿಳೆ ಮೃತಪಟ್ಟು ಮಕ್ಕಳು ಸಹಿತ 13 ಮಂದಿ ಗಾಯಗೊಂಡ ಘಟನೆ ಬ್ರಹ್ಮಾವರದ ಹೇರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ವಲಸೆ ಕಾರ್ಮಿಕರಾಗಿದ್ದು ಕಾಂಕ್ರೀಟ್ ಕೆಲಸ ಮುಗಿಸಿ ಭಾನುವಾರ ಸಂಜೆ 15 ಮಂದಿ ವಾಹನದಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಟೈರ್ ಸ್ಫೋಟಗೊಂಡು ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿ ಜನರೇಟರ್, ಕಾಂಕ್ರಿಟ್ ಮಿಕ್ಸಿಂಗ್ ಮೆಷಿನ್ ಕೂಡ ಇತ್ತು ಎಂದು ತಿಳಿದುಬಂದಿದೆ.
ಏಕಾಏಕಿ ವಾಹನ ಪಲ್ಟಿಯಾಗಿದ್ದರಿಂದ ವಾಹನದಡಿಗೆ ಸಿಲುಕಿದ್ದು, ಕೆಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ 35 ವರ್ಷದ ಮಹಿಳೆ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಮಕ್ಕಳು ಹಾಗೂ ಮಹಿಳೆಯರ ಚೀರಾಟ ಮನ ಕಲಕುವಂತಿತ್ತು. ಸ್ಥಳೀಯರು ಹಾಗೂ ಇತರ ವಾಹನ ಸವಾರರು ಅವರನ್ನು ರಕ್ಷಿಸಿ ಅಂಬುಲೆನ್ಸ್ ಹಾಗೂ ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು. ಗಾಯಾಳುಗಳನ್ನು ಉಡುಪಿ ಜಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 12 ಮಂದಿ ದಾಖಲಾಗಿದ್ದು ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಬೇಜವಾಬ್ದಾರಿಯಿಂದ ಕಾರ್ಮಿಕರನ್ನು ಸಾಗಿಸುತ್ತಿದ್ದ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಬ್ರಹ್ಮಾವರ ಪೊಲೀಸರು ಹಾಗೂ ಹೈವೇ ಪಟ್ರೋಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Udupi truck carrying labourers topples one killed 15 injured. A case has been on contractor over negligence.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm