ಬ್ರೇಕಿಂಗ್ ನ್ಯೂಸ್
22-08-20 10:08 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 22: ಕೊರೊನಾ ನಿರ್ಬಂಧದ ಬಳಿಕ ಕೇಂದ್ರ ಸರಕಾರದ ಅನ್ ಲಾಕ್ - 3 ಗೈಡ್ ಲೈನ್ಸ್ ನಲ್ಲಿ ಅಂತಾರಾಜ್ಯ ಸಂಚಾರ ಮುಕ್ತಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ, ಕೆಲವು ಕಡೆ ಆಯಾ ರಾಜ್ಯಗಳ ಜಿಲ್ಲಾಡಳಿತಗಳು ಗಡಿಭಾಗದಲ್ಲಿ ಸಂಚಾರ ನಿರ್ಬಂಧ ಮುಂದುವರಿಸಿದ್ದವು. ಇದರಿಂದ ಆಯಾ ಭಾಗದ ಜನರು ಸಂಕಷ್ಟಕ್ಕೆ ಒಳಗಾಗಿದ್ದು ಆರ್ಥಿಕ ಚಟುವಟಿಕೆಗೆ ಸಮಸ್ಯೆ ಆಗಿರುವುದನ್ನು ಮನಗಂಡು ಕೇಂದ್ರ ಸರಕಾರದ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತೊಮ್ಮೆ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಅಂತಾರಾಜ್ಯ ಸಂಚಾರ ನಿರ್ಬಂಧಿಸದಂತೆ ಸೂಚನೆ ನೀಡಿದ್ದಾರೆ.

ಪ್ರಮುಖವಾಗಿ ಕೇರಳ - ಕರ್ನಾಟಕದ ಗಡಿಭಾಗ ಕಾಸರಗೋಡು ಜಿಲ್ಲೆಯ ಜನರಿಗೆ ಸಂಕಷ್ಟ ಉಂಟಾಗಿತ್ತು. ಜುಲೈ 29ರಂದು ಕೇಂದ್ರ ಸರಕಾರ ಹೊರಡಿಸಿದ್ದ ಅನ್ ಲಾಕ್ - 3 ರ ಮಾರ್ಗದರ್ಶಿ ಸೂತ್ರದಲ್ಲಿ ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಕೊಟ್ಟಿದ್ದರೂ, ಕೇರಳ ಸರಕಾರ ನಿರ್ಬಂಧ ಮುಂದುವರಿಸಿತ್ತು. ಕರ್ನಾಟಕ ಗಡಿ ಮಾತ್ರವಲ್ಲದೆ ತಮಿಳ್ನಾಡು ಗಡಿಯಲ್ಲೂ ಕೇರಳ ಸರಕಾರ ಇದೇ ನೀತಿ ಅನುಸರಿಸಿತ್ತು. ಈ ಬಗ್ಗೆ ಆಯಾ ಭಾಗದ ಜನರು ಸಂಕಷ್ಟಕ್ಕೆ ಈಡಾಗಿದ್ದಲ್ಲದೆ ಸರಕು ಸಾಗಣೆಯೂ ಅಸಾಧ್ಯವಾಗಿರುವ ವಿಚಾರದಲ್ಲಿ ಕೋರ್ಟ್ ಕಟಕಟೆ ಏರಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮತ್ತೆ ರಾಜ್ಯ ಸರಕಾರಗಳಿಗೆ ಅನ್ ಲಾಕ್ - 3 ರ ಕುರಿತು ಪುನರ್ಮನನ ಮಾಡಿದ್ದು ಯಾವುದೇ ಕಾರಣಕ್ಕೂ ಅಂತಾರಾಜ್ಯ ಸಂಚಾರವನ್ನು ನಿರ್ಬಂಧಿಸಬಾರದು. ಅದಕ್ಕಾಗಿ ಇ- ಪಾಸ್, ಇನ್ನಿತರ ರೀತಿಯಲ್ಲಿ ಪ್ರತ್ಯೇಕ ಅನುಮತಿ ಪಡೆಯುವಂತೆ ಜನರನ್ನು ನಿರ್ಬಂಧಿಸುವಂತಿಲ್ಲ. ಸರಕು ಸಾಗಣೆಗಾಗಲೀ, ಜನರ ಸಂಚಾರಕ್ಕಾಗಲೀ ನಿರ್ಬಂಧ ವಿಧಿಸದೆ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಹಾಗೊಂದು ವೇಳೆ ನಿರ್ಬಂಧಿಸಿದರೆ ಅದು 2005ರ ಗೃಹ ಸಚಿವಾಲಯದ ವಿಪತ್ತು ನಿರ್ವಹಣೆಯ ಕಾಯ್ದೆಯ ಉಲ್ಲಂಘನೆಯಾಗುತ್ತದೆ. ಹೀಗಾಗಿ ಕೇಂದ್ರ ಸರಕಾರದ ಆದೇಶವನ್ನು ರಾಜ್ಯ ಸರಕಾರಗಳು ಯಥಾವತ್ತಾಗಿ ಪಾಲನೆ ಮಾಡುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮನವರಿಕೆ ಮಾಡಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm