ಬ್ರೇಕಿಂಗ್ ನ್ಯೂಸ್
06-04-21 04:13 pm Mangalore Correspondent ಕರಾವಳಿ
ಮಂಗಳೂರು, ಎ.6: ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಂ ಶಂಕರ್ ನಡೆಸಿರುವ ರಹಸ್ಯ ಕಾರ್ಯಾಚರಣೆಯಲ್ಲಿ ಉಳ್ಳಾಲದ ಕುಂಪಲದಲ್ಲಿರುವ ನೂರಾನಿ ಯತೀಂಖಾನದಲ್ಲಿ ಮೇಲ್ವಿಚಾರಕನಾಗಿದ್ದ ಉಸ್ತಾದ್ ಸಿಕ್ಕಿಬಿದ್ದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ನಿವಾಸಿಯಾಗಿರುವ ಅಯೂಬ್ (52) ನನ್ನು ಪೊಲೀಸರು ಬಂಧಿಸಿದ್ದಾರೆ.
ಚೈಲ್ಡ್ ಕೇರ್ ಸೆಂಟರಿನಲ್ಲಿ ಮಕ್ಕಳಿಗೆ ಲೈಂಗಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಲಾಗುತ್ತಿದೆ ಎಂಬ ಮಾಹಿತಿಯಡಿ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿದ್ದರು. ಇದಕ್ಕಾಗಿ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರು ಮತ್ತು ರೋಶನಿ ನಿಲಯ ಸಮಾಜ ಕಾರ್ಯ ವಿಭಾಗದ ಪ್ರಾಧ್ಯಾಪಕರಿಂದ ನಗರದ ಟಿಎಂಎ ಪೈ ಕನ್ವೆನ್ಶನ್ ಹಾಲ್ ನಲ್ಲಿ ಕಾರ್ಯಾಗಾರ ನಡೆಸಲಾಗಿತ್ತು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 30ಕ್ಕೂ ಅಧಿಕ ಮಕ್ಕಳ ಅನಾಥಾಶ್ರಮಗಳಿಂದ 480ಕ್ಕೂ ಮಕ್ಕಳು ಭಾಗವಹಿಸಿದ್ದರು.

ಕಾರ್ಯಾಗಾರದಲ್ಲಿ ಮಕ್ಕಳನ್ನು ಖುದ್ದಾಗಿ ವೈದ್ಯರು ತಪಾಸಣೆಗೆ ಒಳಪಡಿಸಿದ್ದಾರೆ. ಅಲ್ಲದೆ, ಮಕ್ಕಳಲ್ಲಿ ಕೆಟ್ಟ ಅಭ್ಯಾಸಗಳು, ಒಳ್ಳೆಯ ನಡತೆಗಳು ಇತ್ಯಾದಿ ವಿಚಾರದಲ್ಲಿ ಅರಿವು ಶಿಬಿರ ನಡೆಸಲಾಗಿದೆ. ಬಳಿಕ ಮಕ್ಕಳನ್ನು ವಿಶ್ವಾಸಕ್ಕೆ ಪಡೆದು ಪ್ರಶ್ನೆ ಮಾಡಿದಾಗ, ಅಲ್ಲಿ ಕಿರುಕುಳ ಆಗುತ್ತಿರುವ ವಿಚಾರ ಬಾಯಿಬಿಟ್ಟಿದ್ದಾರೆ. ಬಳಿಕ ರೋಶನಿ ನಿಲಯದ ಉಪನ್ಯಾಸಕರ ಮೂಲಕ ಪ್ರಶ್ನಾವಳಿ ತಯಾರಿಸಿ ಅವುಗಳಿಗೆ ಉತ್ತರಿಸಲು ನೀಡಲಾಗಿತ್ತು. ಈ ವೇಳೆ, ತಮಗಾದ ನೋವು ಮತ್ತು ಕಿರುಕುಳವನ್ನು ಅವರು ಹೇಳಿಕೊಂಡಿದ್ದಾರೆ.

ಉಳ್ಳಾಲದ ಕುಂಪಲದಲ್ಲಿರುವ ಯತೀಂಖಾನದಲ್ಲಿ 79 ಮಕ್ಕಳಿದ್ದಾರೆ. ಆ ಪೈಕಿ 51 ಮಂದಿ 6ನೇ ಕ್ಲಾಸ್ ಮೇಲಿನವರಾಗಿದ್ದು ಶಾಲೆಗೆ ಹೋಗುತ್ತಿದ್ದಾರೆ. ಈ ಪೈಕಿ, 12 ವರ್ಷದ ಬಾಲಕನೊಬ್ಬ ತನಗೆ ಲೈಂಗಿಕ ಕಿರುಕುಳ ಆಗುತ್ತಿರುವ ಬಗ್ಗೆ ಹೇಳಿಕೊಂಡಿದ್ದಾನೆ. ಆತನನ್ನು ಮತ್ತಷ್ಟು ತಪಾಸಣೆಗೆ ಒಳಪಡಿಸಿದಾಗ, ನಿಗಾ ಕೇಂದ್ರದಲ್ಲಿ ಮೇಲ್ವಿಚಾರಕನಾಗಿರುವ ಅಯೂಬ್ ಹೆಸರು ಹೊರಗೆ ಬಂದಿದೆ. ಇದೇ ವ್ಯಕ್ತಿಯಿಂದ ಇತರೇ ನಾಲ್ಕು ಮಕ್ಕಳು ಕೂಡ ಕಿರುಕುಳಕ್ಕೆ ಒಳಗಾಗಿದ್ದಾರೆ. ಈ ಕೇಂದ್ರದಲ್ಲಿ ಗಂಡು ಮಕ್ಕಳು ಮಾತ್ರ ಇದ್ದು, ಆರೋಪಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಬಗ್ಗೆ ತಿಳಿದುಬಂದಿದೆ. ಆ ಹುಡುಗ ನಾಲ್ಕು ವರ್ಷಗಳಿಂದ ಈ ಕೇಂದ್ರದಲ್ಲಿದ್ದು ತಂದೆ, ತಾಯಿ ಇಲ್ಲದ ಕಾರಣ ಇಲ್ಲಿ ಉಳಿದುಕೊಂಡಿದ್ದ ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.


ಪ್ರಕರಣದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಏಕ್ಟಿನಡಿ ಪ್ರಕರಣ ದಾಖಲಿಸಲಾಗಿದೆ. ಇಡೀ ಪ್ರಕರಣವನ್ನು ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಇನ್ನೂ ಕೆಲವು ನಿಗಾ ಕೇಂದ್ರಗಳ ಮಕ್ಕಳು ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಮಕ್ಕಳು ನೇರವಾಗಿ ಹೇಳಿಕೊಳ್ಳದ ಹೊರತು ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಲ್ಲ. ಚೆನ್ನೈ ಸೇರಿದಂತೆ ದೇಶದ ಮಹಾನಗರಗಳಲ್ಲಿ ಈ ರೀತಿ ಮಕ್ಕಳನ್ನು ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಮಾಡಿಸಿ, ಕಿರುಕುಳದ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ. ರಾಜ್ಯದಲ್ಲಿ ಮೊದಲ ಬಾರಿಗೆ ಈ ರೀತಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದರು.
Read: ಚೈಲ್ಡ್ ಕೇರ್ ಸೆಂಟರಲ್ಲೇ ಮಕ್ಕಳಿಗೆ ಲೈಂಗಿಕ ಕಿರುಕುಳ !! ಪೊಲೀಸ್ ಸ್ಟಿಂಗಲ್ಲಿ ಸಿಕ್ಕಿಬಿದ್ದ ಉಸ್ತಾದ್ !!
Video:
The Mangalore City Police Commissioner Shashi Kumar and his team have succeeded in arresting a person who was involved in Sexual Abuse and Harassment of children in Child Care centres in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm