ಬ್ರೇಕಿಂಗ್ ನ್ಯೂಸ್
07-04-21 05:42 pm Mangalore Correspondent ಕರಾವಳಿ
ಮಂಗಳೂರು, ಎ.7: ಕುಲಪತಿಯಾಗಲು ಲಂಚ ನೀಡಿದ್ದಾರೆ ಎನ್ನಲಾದ ಕೋಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜಯಶಂಕರ್ ಅವರನ್ನು ಡಿಮೋಶನ್ ಮಾಡಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ದೇಶಕ ಸ್ಥಾನದಿಂದ ಜಯಶಂಕರ್ ಅವರನ್ನು ಕಿತ್ತು ಹಾಕಲಾಗಿದೆ. ಆ ಸ್ಥಾನಕ್ಕೆ ಫಿಸಿಕ್ಸ್ ವಿಭಾಗದಲ್ಲಿ ಪ್ರೊಫೆಸರ್ ಆಗಿರುವ ರವೀಂದ್ರಾಚಾರಿ ಎಂಬವರನ್ನು ನಿಯೋಜಿಸಲಾಗಿದೆ.
ಮೂಲತಃ ಮಡಿಕೇರಿಯವರಾದ ಪ್ರೊಫೆಸರ್ ಎಂ. ಜಯಶಂಕರ್, ವಿವೇಕ್ ಆಚಾರ್ಯ ಎಂಬಾತನ ಮೂಲಕ ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಪರಿಚಯ ಮಾಡಿಕೊಂಡಿದ್ದರು. ಈ ವೇಳೆ, ಮಂಗಳೂರು ಅಥವಾ ರಾಯಚೂರು ವಿವಿಯಲ್ಲಿ ಕುಲಪತಿ ಹುದ್ದೆ ಕೊಡಿಸುವ ಮಾತುಕತೆ ನಡೆದಿತ್ತು. ಇದಕ್ಕಾಗಿ 30 ಲಕ್ಷ ರೂ. ಡೀಲ್ ಆಗಿತ್ತು ಎನ್ನಲಾಗುತ್ತಿದ್ದು, ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 10 ಲಕ್ಷ ನೀಡಿದ್ದರು ಎನ್ನಲಾಗಿದೆ.

ಬಳಿಕ ಹಣ ಹಿಂತಿರುಗಿಸುವಂತೆ ಜೈಶಂಕರ್ ಕೇಳಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಪ್ರಸಾದ್ ಅತ್ತಾವರ ಜೊತೆಗೆ ಮಾತುಕತೆ ನಡೆಸಿದ್ದರು. ಆದರೆ, ಬೆಂಗಳೂರಿನ ವ್ಯಕ್ತಿ ಹಣ ಹಿಂತಿರುಗಿಸಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಪ್ರೊಫೆಸರ್ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು. ಬೆಂಗಳೂರಿನ ವ್ಯಕ್ತಿಯನ್ನು ಬಂಧಿಸಿಲ್ಲ. ಪ್ರಸಾದ್ ಅತ್ತಾವರ ಸಿಎಂ ಯಡ್ಯೂರಪ್ಪ ಜೊತೆಗೆ ನಿಕಟ ನಂಟು ಇರಿಸಿಕೊಂಡಿದ್ದ ವ್ಯಕ್ತಿ. ಎಫ್ಐಆರ್ ಆದ ಕೂಡಲೇ ಬಂಧಿಸಿರುವುದರ ಹಿಂದೆ ಮಂಗಳೂರಿನ ರಾಜಕೀಯ ಮುಖಂಡರ ದ್ವೇಷದ ರಾಜಕಾರಣ ಇದೆಯೆಂಬ ಆರೋಪಗಳು ಕೇಳಿಬರುತ್ತಿವೆ.
ಪ್ರಸಾದ್ ಅತ್ತಾವರ ಬಂಧನದ ಬಳಿಕ ಲಂಚ ನೀಡಿದ್ದ ಪ್ರೊಫೆಸರ್ ವಿರುದ್ಧ ಕ್ರಮ ತೆಗೆದುಕೊಳ್ತೀರಾ ಎಂದು ಪೊಲೀಸ್ ಕಮಿಷನರ್ ಅವರನ್ನು ಪ್ರಶ್ನೆ ಮಾಡಿದ್ದಕ್ಕೆ, ನಾವು ಏಕ್ಷನ್ ತಗೊಳ್ಳಲು ಬರಲ್ಲ. ವಿವಿಯ ಕುಲಪತಿಗೆ ನಾವು ಎಫ್ಐಆರ್ ಆಗಿರುವ ಪ್ರತಿಯನ್ನು ಫಾರ್ವರ್ಡ್ ಮಾಡುತ್ತೇವೆ. ಕುಲಪತಿಯಷ್ಟೇ ಕ್ರಮ ತೆಗೆದುಕೊಳ್ಳಬಹುದು ಎಂದು ಹೇಳಿದ್ದರು. ಈ ಬೆಳವಣಿಗೆಯ ಬಳಿಕ ಮಂಗಳೂರು ವಿವಿಯ ಸಿಂಡಿಕೇಟ್ ಸಭೆಯಲ್ಲಿ ಪ್ರೊಫೆಸರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ನಡೆದಿತ್ತು. ಪ್ರೊಫೆಸರ್ ಆಗಿರುವ ವ್ಯಕ್ತಿಗೆ ನೋಟೀಸ್ ಕೂಡ ನೀಡಲಾಗಿತ್ತು. ಇದೇ ಎಪ್ರಿಲ್ 9ರಂದು ಸಿಂಡಿಕೇಟ್ ಸಭೆ ನಡೆಯಲಿದ್ದು, ಯಾವ ನಿರ್ಧಾರ ಕೈಗೊಳ್ಳುತ್ತಾರೆಂದು ನೋಡಬೇಕು.
Mangalore Professor Jayashanakr who alleged prasad attavar of cheating suspended from his post at university. The professor had alleged that ram sena chief had cheated him of 16 lakhs.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm