ಬ್ರೇಕಿಂಗ್ ನ್ಯೂಸ್
07-04-21 05:52 pm Mangalore Correspondent ಕರಾವಳಿ
ಉಪ್ಪಿನಂಗಡಿ, ಎ.7 ; ಪಬ್ ಜಿ ಗೇಮ್ ಮಕ್ಕಳ ಮೇಲೆ ಯಾವ ರೀತಿ ಆವರಿಸಿಕೊಳ್ಳುತ್ತಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಇಲ್ಲೊಬ್ಬ ಶಾಲಾ ಬಾಲಕ ಫ್ರೀ ಫಯರ್ ಗೇಮ್ ಆಡಿಕೊಂಡು ತಲೆ ಕೂದಲನ್ನು ವಿಚಿತ್ರವಾಗಿ ಕತ್ತರಿಸಿಕೊಂಡಿದ್ದಾನೆ.
ಇತ್ತೀಚೆಗೆ ಮಂಗಳೂರಿನಲ್ಲಿ ಪಬ್ ಜಿ ಗೇಮ್ ಆಟದ ಸೇಡಿನಲ್ಲಿ ಬಾಲಕನ ಕೊಲೆಯೇ ನಡೆದಿತ್ತು. ಇದೀಗ ಉಪ್ಪಿನಂಗಡಿಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಫ್ರೀ ಫಯರ್ ಗೇಮ್ನ ಟಾಸ್ಕ್ ಉದ್ದೇಶಕ್ಕೆ ತನ್ನ ತಲೆ ಕೂದಲನ್ನೇ ವಿಕಾರವಾಗಿ ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿ ತನ್ನ ತಲೆ ಕೂದಲನ್ನು ವಿಕಾರವಾಗಿ ಕತ್ತರಿಸಿರುವುದನ್ನು ಗಮನಿಸಿದ ಹೆತ್ತವರು ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಸುಳ್ಳು ಕತೆ ಕಟ್ಟಿ, ತನ್ನ ಗೆಳೆಯರು ಹೇಳಿದಕ್ಕಾಗಿ ಹೀಗೆ ಕೂದಲು ಕತ್ತರಿಸಿದ್ದಾಗಿ ಹೇಳಿದ್ದ.

ಹೆತ್ತವರು ಮತ್ತಷ್ಟು ವಿಚಾರಿಸಿದಾಗ ಕೊನೆಗೆ ಸತ್ಯ ಬಾಯ್ಬಿಟ್ಟಿದ್ದಾನೆ. ತಾನು ಫ್ರೀ ಪೈಯರ್ ಆನ್ಲೈನ್ ಆಟದಲ್ಲಿ ಬರುವ ಟಾಸ್ಕ್ ಒಂದರಂತೆ ಮೊಬೈಲ್ ಮುಂಭಾಗದಲ್ಲಿ ತಲೆ ಕೂದಲು ಕತ್ತರಿಸಿಕೊಂಡಿದ್ದಾಗಿ ತಿಳಿಸಿದ್ದಾನೆ.
ವಿದ್ಯಾರ್ಥಿಯ ಕೃತ್ಯದಿಂದ ಕಂಗಾಲಾದ ಪೋಷಕರು, ಪೊಲೀಸರ ಗಮನಕ್ಕೆ ತಂದಿದ್ದರು. ಈ ವೇಳೆ ಇದೇ ಆಟದಲ್ಲಿ ಇನ್ನೂ ಕೆಲವು ಸಹಪಾಠಿ ಮಕ್ಕಳು ಭಾಗಿಯಾಗಿರುವುದು ಕಂಡುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪ್ಪಿನಂಗಡಿ ಪೊಲೀಸರು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿ ಆನ್ಲೈನ್ ಆಟಗಳ ಬಗ್ಗೆ ನಿಗಾ ಇರಿಸಲು ಮುಂದಾಗಿದ್ದಾರೆ. ಜೊತೆಗೆ ಪೋಷಕರು ಮಕ್ಕಳಿಗೆ ಆನ್ಲೈನ್ ತರಗತಿ ನೆಪದಲ್ಲಿ ಮೊಬೈಲ್ ನೀಡುವುದಕ್ಕೆ ನಿರ್ಬಂಧ ವಿಧಿಸಿ, ಮಕ್ಕಳ ಮೇಲೆ ನಿಗಾ ಇಡುವಂತೆ ಸೂಚಿಸಿದ್ದಾರೆ.
Uppinangady Pubg game free fire addiction boy accepts the task for a scary hair cut. Police have warned the parents and boy in connection to this.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm