ಬ್ರೇಕಿಂಗ್ ನ್ಯೂಸ್
07-04-21 05:52 pm Mangalore Correspondent ಕರಾವಳಿ
ಉಪ್ಪಿನಂಗಡಿ, ಎ.7 ; ಪಬ್ ಜಿ ಗೇಮ್ ಮಕ್ಕಳ ಮೇಲೆ ಯಾವ ರೀತಿ ಆವರಿಸಿಕೊಳ್ಳುತ್ತಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಇಲ್ಲೊಬ್ಬ ಶಾಲಾ ಬಾಲಕ ಫ್ರೀ ಫಯರ್ ಗೇಮ್ ಆಡಿಕೊಂಡು ತಲೆ ಕೂದಲನ್ನು ವಿಚಿತ್ರವಾಗಿ ಕತ್ತರಿಸಿಕೊಂಡಿದ್ದಾನೆ.
ಇತ್ತೀಚೆಗೆ ಮಂಗಳೂರಿನಲ್ಲಿ ಪಬ್ ಜಿ ಗೇಮ್ ಆಟದ ಸೇಡಿನಲ್ಲಿ ಬಾಲಕನ ಕೊಲೆಯೇ ನಡೆದಿತ್ತು. ಇದೀಗ ಉಪ್ಪಿನಂಗಡಿಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಫ್ರೀ ಫಯರ್ ಗೇಮ್ನ ಟಾಸ್ಕ್ ಉದ್ದೇಶಕ್ಕೆ ತನ್ನ ತಲೆ ಕೂದಲನ್ನೇ ವಿಕಾರವಾಗಿ ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿ ತನ್ನ ತಲೆ ಕೂದಲನ್ನು ವಿಕಾರವಾಗಿ ಕತ್ತರಿಸಿರುವುದನ್ನು ಗಮನಿಸಿದ ಹೆತ್ತವರು ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಸುಳ್ಳು ಕತೆ ಕಟ್ಟಿ, ತನ್ನ ಗೆಳೆಯರು ಹೇಳಿದಕ್ಕಾಗಿ ಹೀಗೆ ಕೂದಲು ಕತ್ತರಿಸಿದ್ದಾಗಿ ಹೇಳಿದ್ದ.

ಹೆತ್ತವರು ಮತ್ತಷ್ಟು ವಿಚಾರಿಸಿದಾಗ ಕೊನೆಗೆ ಸತ್ಯ ಬಾಯ್ಬಿಟ್ಟಿದ್ದಾನೆ. ತಾನು ಫ್ರೀ ಪೈಯರ್ ಆನ್ಲೈನ್ ಆಟದಲ್ಲಿ ಬರುವ ಟಾಸ್ಕ್ ಒಂದರಂತೆ ಮೊಬೈಲ್ ಮುಂಭಾಗದಲ್ಲಿ ತಲೆ ಕೂದಲು ಕತ್ತರಿಸಿಕೊಂಡಿದ್ದಾಗಿ ತಿಳಿಸಿದ್ದಾನೆ.
ವಿದ್ಯಾರ್ಥಿಯ ಕೃತ್ಯದಿಂದ ಕಂಗಾಲಾದ ಪೋಷಕರು, ಪೊಲೀಸರ ಗಮನಕ್ಕೆ ತಂದಿದ್ದರು. ಈ ವೇಳೆ ಇದೇ ಆಟದಲ್ಲಿ ಇನ್ನೂ ಕೆಲವು ಸಹಪಾಠಿ ಮಕ್ಕಳು ಭಾಗಿಯಾಗಿರುವುದು ಕಂಡುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪ್ಪಿನಂಗಡಿ ಪೊಲೀಸರು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿ ಆನ್ಲೈನ್ ಆಟಗಳ ಬಗ್ಗೆ ನಿಗಾ ಇರಿಸಲು ಮುಂದಾಗಿದ್ದಾರೆ. ಜೊತೆಗೆ ಪೋಷಕರು ಮಕ್ಕಳಿಗೆ ಆನ್ಲೈನ್ ತರಗತಿ ನೆಪದಲ್ಲಿ ಮೊಬೈಲ್ ನೀಡುವುದಕ್ಕೆ ನಿರ್ಬಂಧ ವಿಧಿಸಿ, ಮಕ್ಕಳ ಮೇಲೆ ನಿಗಾ ಇಡುವಂತೆ ಸೂಚಿಸಿದ್ದಾರೆ.
Uppinangady Pubg game free fire addiction boy accepts the task for a scary hair cut. Police have warned the parents and boy in connection to this.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm