ಬ್ರೇಕಿಂಗ್ ನ್ಯೂಸ್
07-04-21 05:52 pm Mangalore Correspondent ಕರಾವಳಿ
ಉಪ್ಪಿನಂಗಡಿ, ಎ.7 ; ಪಬ್ ಜಿ ಗೇಮ್ ಮಕ್ಕಳ ಮೇಲೆ ಯಾವ ರೀತಿ ಆವರಿಸಿಕೊಳ್ಳುತ್ತಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಇಲ್ಲೊಬ್ಬ ಶಾಲಾ ಬಾಲಕ ಫ್ರೀ ಫಯರ್ ಗೇಮ್ ಆಡಿಕೊಂಡು ತಲೆ ಕೂದಲನ್ನು ವಿಚಿತ್ರವಾಗಿ ಕತ್ತರಿಸಿಕೊಂಡಿದ್ದಾನೆ.
ಇತ್ತೀಚೆಗೆ ಮಂಗಳೂರಿನಲ್ಲಿ ಪಬ್ ಜಿ ಗೇಮ್ ಆಟದ ಸೇಡಿನಲ್ಲಿ ಬಾಲಕನ ಕೊಲೆಯೇ ನಡೆದಿತ್ತು. ಇದೀಗ ಉಪ್ಪಿನಂಗಡಿಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಫ್ರೀ ಫಯರ್ ಗೇಮ್ನ ಟಾಸ್ಕ್ ಉದ್ದೇಶಕ್ಕೆ ತನ್ನ ತಲೆ ಕೂದಲನ್ನೇ ವಿಕಾರವಾಗಿ ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿ ತನ್ನ ತಲೆ ಕೂದಲನ್ನು ವಿಕಾರವಾಗಿ ಕತ್ತರಿಸಿರುವುದನ್ನು ಗಮನಿಸಿದ ಹೆತ್ತವರು ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಸುಳ್ಳು ಕತೆ ಕಟ್ಟಿ, ತನ್ನ ಗೆಳೆಯರು ಹೇಳಿದಕ್ಕಾಗಿ ಹೀಗೆ ಕೂದಲು ಕತ್ತರಿಸಿದ್ದಾಗಿ ಹೇಳಿದ್ದ.

ಹೆತ್ತವರು ಮತ್ತಷ್ಟು ವಿಚಾರಿಸಿದಾಗ ಕೊನೆಗೆ ಸತ್ಯ ಬಾಯ್ಬಿಟ್ಟಿದ್ದಾನೆ. ತಾನು ಫ್ರೀ ಪೈಯರ್ ಆನ್ಲೈನ್ ಆಟದಲ್ಲಿ ಬರುವ ಟಾಸ್ಕ್ ಒಂದರಂತೆ ಮೊಬೈಲ್ ಮುಂಭಾಗದಲ್ಲಿ ತಲೆ ಕೂದಲು ಕತ್ತರಿಸಿಕೊಂಡಿದ್ದಾಗಿ ತಿಳಿಸಿದ್ದಾನೆ.
ವಿದ್ಯಾರ್ಥಿಯ ಕೃತ್ಯದಿಂದ ಕಂಗಾಲಾದ ಪೋಷಕರು, ಪೊಲೀಸರ ಗಮನಕ್ಕೆ ತಂದಿದ್ದರು. ಈ ವೇಳೆ ಇದೇ ಆಟದಲ್ಲಿ ಇನ್ನೂ ಕೆಲವು ಸಹಪಾಠಿ ಮಕ್ಕಳು ಭಾಗಿಯಾಗಿರುವುದು ಕಂಡುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪ್ಪಿನಂಗಡಿ ಪೊಲೀಸರು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿ ಆನ್ಲೈನ್ ಆಟಗಳ ಬಗ್ಗೆ ನಿಗಾ ಇರಿಸಲು ಮುಂದಾಗಿದ್ದಾರೆ. ಜೊತೆಗೆ ಪೋಷಕರು ಮಕ್ಕಳಿಗೆ ಆನ್ಲೈನ್ ತರಗತಿ ನೆಪದಲ್ಲಿ ಮೊಬೈಲ್ ನೀಡುವುದಕ್ಕೆ ನಿರ್ಬಂಧ ವಿಧಿಸಿ, ಮಕ್ಕಳ ಮೇಲೆ ನಿಗಾ ಇಡುವಂತೆ ಸೂಚಿಸಿದ್ದಾರೆ.
Uppinangady Pubg game free fire addiction boy accepts the task for a scary hair cut. Police have warned the parents and boy in connection to this.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm