ಬ್ರೇಕಿಂಗ್ ನ್ಯೂಸ್
07-04-21 11:14 pm Mangaluru correspondent ಕರಾವಳಿ
ಮಂಗಳೂರು, ಎ.7: ಕೆಎಸ್ಸಾರ್ಟಿಸಿ ನೌಕರರನ್ನು ನಾಯಕತ್ವ ಹೆಸರಲ್ಲಿ ಕೋಡಿಹಳ್ಳಿ ದಾರಿ ತಪ್ಪಿಸುತ್ತಿದ್ದಾರೆ. ಅವರ ಎಂಟು ಬೇಡಿಕೆಗಳನ್ನು ಪರಿಗಣಿಸಿದ್ದೇವೆ. ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಏನು ಮಾಡಬೇಕೋ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾರಿಗೆ ವ್ಯವಸ್ಥೆ ಅನ್ನೋದು ಕಾರ್ಪೋರೇಷನ್ ವ್ಯವಸ್ಥೆ. ಸಾರಿಗೆ ಇಲಾಖೆಯವರನ್ನು ಸರ್ಕಾರಿ ನೌಕರರನ್ನಾಗಿ ಮಾಡಿದ್ರೆ ಎಲ್ಲಾ ನಿಗಮದವರೂ ಬೇಡಿಕೆ ಇಡ್ತಾರೆ. ಅದು ಕೇಳೋ ಬೇಡಿಕೆನೇ ಅಲ್ಲ. ಯಾರಾದ್ರು ಒಬ್ರು ಒಪ್ತಾರಾ ಇದನ್ನ? ಸಾರಿಗೆ ನೌಕರರ ಬೇಡಿಕೆಯನ್ನು ಯಾರೂ ಒಪ್ಪೋದಿಲ್ಲ. ರೈತರ ನಾಯಕರಾಗಿ ಹೋರಾಟ ಮಾಡುತಿದ್ದವರು ಈಗ ಸಾರಿಗೆ ನೌಕರರ ಹೋರಾಟದ ನೇತೃತ್ವ ವಹಿಸಿದ್ದಾರೆ. ಏನು ಅಭ್ಯಂತರ ಇಲ್ಲ.

ಬೇಡಿಕೆ ಒಂದು ಪರ್ಸೆಂಟ್ ಆದರೂ ನ್ಯಾಯಬದ್ಧ ಆಗಿರಬೇಕು. ಕೋಡಿಹಳ್ಳಿ ಚಂದ್ರಶೇಖರ್ ಅವರು ನಾವು ಹೇಳ್ತೇವೆ, ನೀವು ಕೇಳ ಬೇಕು ಅನೋ ಮನೋಭಾವ ದಲ್ಲಿದ್ದಾರೆ. ಸರ್ವಾಧಿಕಾರಿ ವ್ಯವಸ್ಥೆ ಪ್ರಜಾಪ್ರಭುತ್ವ ದಲ್ಲಿ ನಡೆಯೋದಿಲ್ಲ. ಕೋಡಿಹಳ್ಳಿ ಕಡೆಗೆ ಸಾರಿಗೆ ನೌಕರರು ಹೊದರೆ ನೌಕರರಿಗೇ ಅನ್ಯಾಯವಾಗುತ್ತದೆ.ಕೋಡಿಹಳ್ಳಿ ಚಂದ್ರ ಶೇಖರ್ ಕಾರ್ಮಿಕರ ದಾರಿ ತಪ್ಪಿಸುತ್ತಿದ್ದಾರೆ, ರಾಜ್ಯದ ಅಭಿವೃದ್ಧಿ ಮತ್ತು ಆರ್ಥಿಕತೆ ಕುಂಠಿತಗೊಳಿಸೋದು
ಕೋಡಿಹಳ್ಳಿ ಚಂದ್ರಶೇಖರ್ ಉದ್ದೇಶ. ಈ ರೀತಿಯ ಕಾನೂನು ವಿರೋಧಿ ಹೋರಾಟ ಗಳನ್ನ ಹೇಗೆ ಬಗ್ಗು ಬಡೀಬೇಕು ಅನ್ನೋದು ಸರ್ಕಾರಕ್ಕೆ ಗೊತ್ತಿದೆ. ಮುಷ್ಕರವನ್ನು ಒಂದು ವಾರ ಅಥವಾ 15 ದಿನ ಎಳ್ಕೊಂಡ್ ಹೋದ್ರೆ ರಾಜ್ಯದ ಜನ ಒಪ್ಪುವುದಿಲ್ಲ. ರಾಜ್ಯದ ಜನರೇ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ತಿರುಗಿಬೀಳುತ್ತಾರೆ. ಜನರಿಗೆ ಅನ್ಯಾಯವಾದರೆ ಸರ್ಕಾರವೂ ಸುಮ್ಮನೆ ಕೂರಕಾಗಲ್ಲ ಎಂದು ಸೂಚ್ಯವಾಗಿ ಹೇಳಿದ್ದಾರೆ.
![]()
ಸಾರಿಗೆ ನೌಕರರಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ. ಕೋಡಿಹಳ್ಳಿ ನಾಯಕತ್ವ ಹಿಂದೆ ಹೋಗಬೇಡಿ, ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸೋಕೆ ಆಗೋದಿಲ್ಲ. ಕೋಡಿಹಳ್ಳಿಯ ನಾಯಕತ್ವವನ್ನು ಬಿಟ್ಟು ಬನ್ನಿ ಮಾತನಾಡೋಣ ಎಂದರು ಸಚಿವ ಕೆ ಎಸ್ ಈಶ್ವರಪ್ಪ.
ನರೇಗೂ ಕೂಲಿ ಹೆಚ್ಚಳ
ಇದೇ ವೇಳೆ, ನರೇಗಾ ಕೂಲಿ ದರವನ್ನು ರೂ. 275 ರಿಂದ 289 ರೂ.ಗೆ ಏರಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಅಲ್ಲದೆ, ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದು ಮಾಡುವ ತೀರ್ಮಾನ ರಾಜ್ಯ ಸರಕಾರ ತೆಗೆದುಕೊಂಡಿಲ್ಲ. ಈ ಬಾರಿ ತಾಲೂಕು ಪಂಚಾಯತ್ ಗಳಿಗೂ ಚುನಾವಣೆ ನಡೆಯಲಿದೆ. ಆದರೆ ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದು ಪಡಿಸಬೇಕೆಂಬ ಆಗ್ರಹ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಿಂದ ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಎಲ್ಲಾ ಜಿಲ್ಲೆಯಲ್ಲಿಯೂ ಜಲ ಶಕ್ತಿ ಅಭಿಯಾನ ಆರಂಭವಾಗಲಿದೆ. ಮಾರ್ಚ್ 22ರಂದು ರಾಜ್ಯದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಯೋಜನೆಯ ಮೂಲಕ ಮಳೆ ನೀರಿಂಗಿಸುವುದು. ಜಲಮರುಪೂರಣ ಸೇರಿದಂತೆ ಜಲ ಸಂವರ್ಧನೆಯ ಕಾರ್ಯಕ್ರಮ ನಡೆಯಲಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಅಂಗಾರ, ಶಾಸಕ ರಾಜೇಶ್ ನಾಯ್ಕ್ ಉಳೆಪಾಡಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮೊದಲಾದ ವರು ಉಪಸ್ಥಿತರಿದ್ದರು.
Ksrtc bus strike kodihalli chandrashekar is misleading ksrtc staffs slams eshwarappa during a press meet held in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm