ಬ್ರೇಕಿಂಗ್ ನ್ಯೂಸ್
08-04-21 11:49 am Mangalore Correspondent ಕರಾವಳಿ
ಮಂಗಳೂರು, ಎ.8 : ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಹೊಂಡದಲ್ಲಿದ್ದ ನೀರಿಗೆ ಬಿದ್ದು ಮುಳುಗೇಳುತ್ತಾ ಪ್ರಾಣ ಸಂಕಟದಲ್ಲಿದ್ದ ಪಾರಿವಾಳವನ್ನು ಅಗ್ನಿಶಾಮಕದಳ ಸಿಬಂದಿ ರಕ್ಷಿಸಿದ ಘಟನೆ ನಡೆದಿದೆ.

ನಗರದ ಟಿಎಂಎ ಪೈ ಸಭಾಂಗಣದ ಮುಂಭಾಗದಲ್ಲಿ ಕಟ್ಟಡ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದ ಪ್ರದೇಶದಲ್ಲಿ ಪಾರ್ಕಿಂಗ್ ಸ್ಥಳಕ್ಕೆಂದು 10-15 ಅಡಿ ಹೊಂಡ ಕೊರೆಯಲಾಗಿತ್ತು. ಬೃಹತ್ ಹೊಂಡದಲ್ಲಿ ಮಳೆಯಿಂದಾಗಿ ನೀರು ತುಂಬಿದ್ದು, ಈ ಹೊಂಡಕ್ಕೆ ನೀರು ಕುಡಿಯಲೆಂದು ಬಂದಿದ್ದ ಪಾರಿವಾಳ ಅಕಸ್ಮಾತ್ತಾಗಿ ಹೊಂಡಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಅದು ಮೇಲೆ ಬರಲಾಗದೆ ನೀರಿನಲ್ಲಿ ಮುಳುಗೇಳುತ್ತಾ ಒದ್ದಾಡುತ್ತಿತ್ತು. ಇದನ್ನು ಕಂಡು ಮೇಲೆ ಹಾರುತ್ತಿದ್ದ ಹದ್ದುಗಳು ಪಾರಿವಾಳದ ಬೇಟೆಗೆ ಮುಂದಾಗಿತ್ತು.

ಪರಿಸರ ಹೋರಾಟಗಾರ ಶಶಿಧರ್ ಶೆಟ್ಟಿ ಏನೋ ಕೆಲಸ ನಿಮಿತ್ತ ಅದರ ಮುಂಭಾಗದ ಫ್ಲ್ಯಾಟ್ ಗೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಹೋಗಿದ್ದು ಪಾರಿವಾಳ ಅಪಾಯಕ್ಕೀಡಾದ ದೃಶ್ಯ ಕಂಡಿದ್ದಾರೆ. ತಕ್ಷಣ ಅವರು ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಪಾರಿವಾಳವನ್ನು ರಕ್ಷಿಸಿದ್ದಾರೆ.

ಪೂರ್ತಿ ಒದ್ದೆಯಾಗಿ ಒದ್ದಾಡುತ್ತಿದ್ದ ಪಾರಿವಾಳವನ್ನು ಸಹಜ ಸ್ಥಿತಿಗೆ ಬರುವವರೆಗೂ ಪೋಷಣೆಗಾಗಿ ಎನಿಮಲ್ ಕೇರ್ ಟ್ರಸ್ಟ್ ನ ತೌಸೀಫ್ ಅವರ ಸುಪರ್ದಿಗೆ ಒಪ್ಪಿಸಲಾಗಿದೆ. ಪಾರಿವಾಳದ ರಕ್ಷಣೆಗೆ ಅಗ್ನಿಶಾಮಕ ಸಿಬಂದಿ ಬಂದು ಕಾರ್ಯಾಚರಣೆ ನಡೆಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
Video:
In a sublime gesture of humanitarian concern, the entire fire brigade came calling after learning that a baby pigeon was facing peril to its life. A large water body has been formed in a private land where construction work is going on opposite Dr T M A Pai convention hall on M G Road in Mangalore.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm