ಬ್ರೇಕಿಂಗ್ ನ್ಯೂಸ್
08-04-21 11:49 am Mangalore Correspondent ಕರಾವಳಿ
ಮಂಗಳೂರು, ಎ.8 : ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಹೊಂಡದಲ್ಲಿದ್ದ ನೀರಿಗೆ ಬಿದ್ದು ಮುಳುಗೇಳುತ್ತಾ ಪ್ರಾಣ ಸಂಕಟದಲ್ಲಿದ್ದ ಪಾರಿವಾಳವನ್ನು ಅಗ್ನಿಶಾಮಕದಳ ಸಿಬಂದಿ ರಕ್ಷಿಸಿದ ಘಟನೆ ನಡೆದಿದೆ.

ನಗರದ ಟಿಎಂಎ ಪೈ ಸಭಾಂಗಣದ ಮುಂಭಾಗದಲ್ಲಿ ಕಟ್ಟಡ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದ ಪ್ರದೇಶದಲ್ಲಿ ಪಾರ್ಕಿಂಗ್ ಸ್ಥಳಕ್ಕೆಂದು 10-15 ಅಡಿ ಹೊಂಡ ಕೊರೆಯಲಾಗಿತ್ತು. ಬೃಹತ್ ಹೊಂಡದಲ್ಲಿ ಮಳೆಯಿಂದಾಗಿ ನೀರು ತುಂಬಿದ್ದು, ಈ ಹೊಂಡಕ್ಕೆ ನೀರು ಕುಡಿಯಲೆಂದು ಬಂದಿದ್ದ ಪಾರಿವಾಳ ಅಕಸ್ಮಾತ್ತಾಗಿ ಹೊಂಡಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಅದು ಮೇಲೆ ಬರಲಾಗದೆ ನೀರಿನಲ್ಲಿ ಮುಳುಗೇಳುತ್ತಾ ಒದ್ದಾಡುತ್ತಿತ್ತು. ಇದನ್ನು ಕಂಡು ಮೇಲೆ ಹಾರುತ್ತಿದ್ದ ಹದ್ದುಗಳು ಪಾರಿವಾಳದ ಬೇಟೆಗೆ ಮುಂದಾಗಿತ್ತು.

ಪರಿಸರ ಹೋರಾಟಗಾರ ಶಶಿಧರ್ ಶೆಟ್ಟಿ ಏನೋ ಕೆಲಸ ನಿಮಿತ್ತ ಅದರ ಮುಂಭಾಗದ ಫ್ಲ್ಯಾಟ್ ಗೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಹೋಗಿದ್ದು ಪಾರಿವಾಳ ಅಪಾಯಕ್ಕೀಡಾದ ದೃಶ್ಯ ಕಂಡಿದ್ದಾರೆ. ತಕ್ಷಣ ಅವರು ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಪಾರಿವಾಳವನ್ನು ರಕ್ಷಿಸಿದ್ದಾರೆ.

ಪೂರ್ತಿ ಒದ್ದೆಯಾಗಿ ಒದ್ದಾಡುತ್ತಿದ್ದ ಪಾರಿವಾಳವನ್ನು ಸಹಜ ಸ್ಥಿತಿಗೆ ಬರುವವರೆಗೂ ಪೋಷಣೆಗಾಗಿ ಎನಿಮಲ್ ಕೇರ್ ಟ್ರಸ್ಟ್ ನ ತೌಸೀಫ್ ಅವರ ಸುಪರ್ದಿಗೆ ಒಪ್ಪಿಸಲಾಗಿದೆ. ಪಾರಿವಾಳದ ರಕ್ಷಣೆಗೆ ಅಗ್ನಿಶಾಮಕ ಸಿಬಂದಿ ಬಂದು ಕಾರ್ಯಾಚರಣೆ ನಡೆಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
Video:
In a sublime gesture of humanitarian concern, the entire fire brigade came calling after learning that a baby pigeon was facing peril to its life. A large water body has been formed in a private land where construction work is going on opposite Dr T M A Pai convention hall on M G Road in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm