ಬ್ರೇಕಿಂಗ್ ನ್ಯೂಸ್
08-04-21 05:46 pm Mangalore Correspondent ಕರಾವಳಿ
ಉಳ್ಳಾಲ: ಎ.8; ತೊಕ್ಕೊಟ್ಟಿನ ಸ್ಮಾರ್ಟ್ ಪ್ಲಾನೆಟ್ ವಸತಿ ಮತ್ತು ವಾಣಿಜ್ಯ ಸಂಕೀರ್ಣದ ಸೆಕ್ಯುರಿಟಿ ಗಾರ್ಡ್ ಓರ್ವರಿಗೆ ಕೇರಳ ರಾಜ್ಯದ ಭಾಗ್ಯಮಿತ್ರ ಲಾಟರಿಯ ಒಂದು ಕೋಟಿ ರೂಪಾಯಿ ಬಂಪರ್ ಬಹುಮಾನ ಲಭಿಸಿದೆ.

ಮೂಲತಃ ಕೇರಳ ರಾಜ್ಯದ ಕ್ಯಾಲಿಕಟ್ ನಿವಾಸಿಯಾಗಿರುವ ಮೊಯ್ದಿನ್ ಕುಟ್ಟಿ (65) ಅವರಿಗೆ ಒಂದು ಕೋಟಿ ಬಂಪರ್ ಬಹುಮಾನ ಲಭಿಸಿದೆ. ಮೊಯ್ದಿನ್ ಕುಟ್ಟಿ ಅವರು ಕಳೆದ ಕೆಲ ವರ್ಷಗಳಿಂದ ಸ್ಮಾರ್ಟ್ ಪ್ಲಾನೆಟ್ ಕಟ್ಟಡದಲ್ಲಿ ಸೆಕ್ಯುರಿಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಅವರಿಗೆ ಕೇರಳದ ಲಾಟರಿ ತೆಗೆಯುವ ಹವ್ಯಾಸವಿದ್ದು ಕಳೆದ ವಾರ ಎಪ್ರಿಲ್ 4 ರಂದು ಡ್ರಾಗೊಳ್ಳುವ 100 ರೂಪಾಯಿ ಬೆಲೆಯ ಭಾಗ್ಯ ಮಿತ್ರ ಟಿಕೇಟನ್ನು ಕೇರಳದ ಉಪ್ಪಳದಲ್ಲಿ ಖರೀದಿಸಿದ್ದು ಒಂದು ಕೋಟಿ ರೂಪಾಯಿ ಬಂಪರ್ ಬಹುಮಾನ ಗಿಟ್ಟಿಸಿ ಕೋಟ್ಯಾಧೀಶರಾಗಿದ್ದಾರೆ. ಮೊಯ್ದಿನ್ ಕುಟ್ಟಿಗೆ ಪತ್ನಿ ಮೂವರು ಮಕ್ಕಳಿದ್ದಾರೆ. ಕೆಲಸ ಅರಸಿ ತೊಕ್ಕೊಟ್ಟಿಗೆ ಬಂದಿದ್ದ ಮೊಯ್ದಿನ್ ಕುಟ್ಟಿ ಅವರು ಸ್ಮಾರ್ಟ್ ಪ್ಲಾನೆಟ್ ಪ್ಲಾಝಾದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.


500 ರೂಪಾಯಿ ಸಾಲ ಕೊಟ್ಟಿದ್ದ ಟೈಲರ್
ಕಳೆದ ಶನಿವಾರ ಮೊಯ್ದಿನ್ ಕುಟ್ಟಿ ಅವರು ಸ್ಮಾರ್ಟ್ ಪ್ಲಾನೆಟ್ ಕಟ್ಟಡದಲ್ಲಿರುವ ಒಮೇಗಾ ಟೈಲರ್ ಶಾಪ್ ಮಾಲೀಕರಾದ ರವಿ ಅವರಲ್ಲಿ 500 ರೂಪಾಯಿ ಸಾಲ ಪಡೆದು ಕೇರಳದ ಭಾಗ್ಯಮಿತ್ರ ಲಾಟರಿಯನ್ನು ಖರೀದಿಸಿದ್ದರಂತೆ. ತಾನು ಸಾಲವಾಗಿ ನೀಡಿದ ಹಣದಲ್ಲಿ ಮೊಯ್ದಿನ್ ಕುಟ್ಟಿ ಅವರಂತಹ ಬಡವನಿಗೆ ಕೋಟಿ ಬಹುಮಾನ ಬಂದ ವಿಷಯ ತಿಳಿದ ರವಿ ಅವರು ಸಂಭ್ರಮಿಸಿದ್ದು ಕುಟ್ಟಿ ಅವರನ್ನ ಅಭಿನಂದಿಸಿದ್ದಾರೆ.

ಭಾಗ್ಯಮಿತ್ರ ಲಾಟರಿಯಲ್ಲಿ 5 ಜನರಿಗೆ ತಲಾ 1 ಕೋಟಿ ಬಂಪರ್ ಬಹುಮಾನ ಲಭಿಸಿದ್ದು ಅದರಲ್ಲಿ ಮೊಯ್ದಿನ್ ಕುಟ್ಟಿ ಅವರು ಓರ್ವ ಅದೃಷ್ಟಶಾಲಿಯಾಗಿದ್ದಾರೆ.
Read: ಕೋಟಿ ಲಾಟರಿ ಕತೆಯೇ ಸುಳ್ಳು ; ಯಾಮಾರಿಸಿದ ವಾಚ್ಮನ್ ಕುಟ್ಟಿ ಪರಾರಿ !
In a big-time luck a security guard from Ullal, Mangalore has won rupees one crore Kerela lottery unexpectedly. Mohiuddin Kuti is the lucky Security Guard.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 07:35 pm
HK News Staffer
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am