ಬ್ರೇಕಿಂಗ್ ನ್ಯೂಸ್
08-04-21 05:46 pm Mangalore Correspondent ಕರಾವಳಿ
ಉಳ್ಳಾಲ: ಎ.8; ತೊಕ್ಕೊಟ್ಟಿನ ಸ್ಮಾರ್ಟ್ ಪ್ಲಾನೆಟ್ ವಸತಿ ಮತ್ತು ವಾಣಿಜ್ಯ ಸಂಕೀರ್ಣದ ಸೆಕ್ಯುರಿಟಿ ಗಾರ್ಡ್ ಓರ್ವರಿಗೆ ಕೇರಳ ರಾಜ್ಯದ ಭಾಗ್ಯಮಿತ್ರ ಲಾಟರಿಯ ಒಂದು ಕೋಟಿ ರೂಪಾಯಿ ಬಂಪರ್ ಬಹುಮಾನ ಲಭಿಸಿದೆ.

ಮೂಲತಃ ಕೇರಳ ರಾಜ್ಯದ ಕ್ಯಾಲಿಕಟ್ ನಿವಾಸಿಯಾಗಿರುವ ಮೊಯ್ದಿನ್ ಕುಟ್ಟಿ (65) ಅವರಿಗೆ ಒಂದು ಕೋಟಿ ಬಂಪರ್ ಬಹುಮಾನ ಲಭಿಸಿದೆ. ಮೊಯ್ದಿನ್ ಕುಟ್ಟಿ ಅವರು ಕಳೆದ ಕೆಲ ವರ್ಷಗಳಿಂದ ಸ್ಮಾರ್ಟ್ ಪ್ಲಾನೆಟ್ ಕಟ್ಟಡದಲ್ಲಿ ಸೆಕ್ಯುರಿಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಅವರಿಗೆ ಕೇರಳದ ಲಾಟರಿ ತೆಗೆಯುವ ಹವ್ಯಾಸವಿದ್ದು ಕಳೆದ ವಾರ ಎಪ್ರಿಲ್ 4 ರಂದು ಡ್ರಾಗೊಳ್ಳುವ 100 ರೂಪಾಯಿ ಬೆಲೆಯ ಭಾಗ್ಯ ಮಿತ್ರ ಟಿಕೇಟನ್ನು ಕೇರಳದ ಉಪ್ಪಳದಲ್ಲಿ ಖರೀದಿಸಿದ್ದು ಒಂದು ಕೋಟಿ ರೂಪಾಯಿ ಬಂಪರ್ ಬಹುಮಾನ ಗಿಟ್ಟಿಸಿ ಕೋಟ್ಯಾಧೀಶರಾಗಿದ್ದಾರೆ. ಮೊಯ್ದಿನ್ ಕುಟ್ಟಿಗೆ ಪತ್ನಿ ಮೂವರು ಮಕ್ಕಳಿದ್ದಾರೆ. ಕೆಲಸ ಅರಸಿ ತೊಕ್ಕೊಟ್ಟಿಗೆ ಬಂದಿದ್ದ ಮೊಯ್ದಿನ್ ಕುಟ್ಟಿ ಅವರು ಸ್ಮಾರ್ಟ್ ಪ್ಲಾನೆಟ್ ಪ್ಲಾಝಾದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.


500 ರೂಪಾಯಿ ಸಾಲ ಕೊಟ್ಟಿದ್ದ ಟೈಲರ್
ಕಳೆದ ಶನಿವಾರ ಮೊಯ್ದಿನ್ ಕುಟ್ಟಿ ಅವರು ಸ್ಮಾರ್ಟ್ ಪ್ಲಾನೆಟ್ ಕಟ್ಟಡದಲ್ಲಿರುವ ಒಮೇಗಾ ಟೈಲರ್ ಶಾಪ್ ಮಾಲೀಕರಾದ ರವಿ ಅವರಲ್ಲಿ 500 ರೂಪಾಯಿ ಸಾಲ ಪಡೆದು ಕೇರಳದ ಭಾಗ್ಯಮಿತ್ರ ಲಾಟರಿಯನ್ನು ಖರೀದಿಸಿದ್ದರಂತೆ. ತಾನು ಸಾಲವಾಗಿ ನೀಡಿದ ಹಣದಲ್ಲಿ ಮೊಯ್ದಿನ್ ಕುಟ್ಟಿ ಅವರಂತಹ ಬಡವನಿಗೆ ಕೋಟಿ ಬಹುಮಾನ ಬಂದ ವಿಷಯ ತಿಳಿದ ರವಿ ಅವರು ಸಂಭ್ರಮಿಸಿದ್ದು ಕುಟ್ಟಿ ಅವರನ್ನ ಅಭಿನಂದಿಸಿದ್ದಾರೆ.

ಭಾಗ್ಯಮಿತ್ರ ಲಾಟರಿಯಲ್ಲಿ 5 ಜನರಿಗೆ ತಲಾ 1 ಕೋಟಿ ಬಂಪರ್ ಬಹುಮಾನ ಲಭಿಸಿದ್ದು ಅದರಲ್ಲಿ ಮೊಯ್ದಿನ್ ಕುಟ್ಟಿ ಅವರು ಓರ್ವ ಅದೃಷ್ಟಶಾಲಿಯಾಗಿದ್ದಾರೆ.
Read: ಕೋಟಿ ಲಾಟರಿ ಕತೆಯೇ ಸುಳ್ಳು ; ಯಾಮಾರಿಸಿದ ವಾಚ್ಮನ್ ಕುಟ್ಟಿ ಪರಾರಿ !
In a big-time luck a security guard from Ullal, Mangalore has won rupees one crore Kerela lottery unexpectedly. Mohiuddin Kuti is the lucky Security Guard.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm