ಬ್ರೇಕಿಂಗ್ ನ್ಯೂಸ್
09-04-21 08:26 pm Mangaluru correspondent ಕರಾವಳಿ
ಮಂಗಳೂರು, ಎ.9 : ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ಆಲಂಗಾರು ಎಂಬಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗಿದ್ದು ಆರೋಪಿಗೆ ಶಿಕ್ಷೆ ಘೋಷಣೆ ಮಾಡಲಾಗಿದೆ.
![]()
ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.10 ಲಕ್ಷ ರು. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ನಿವಾಸಿ ಶಶಿ ಯಾನೆ
ಶಶಿಕುಮಾರ್ (29) ಶಿಕ್ಷೆಗೆ ಒಳಗಾದ ಅಪರಾಧಿ. ಮೂಡುಬಿದಿರೆಯಲ್ಲಿ ಫೈನಾನ್ಸ್ ಒಂದರಲ್ಲಿ ಪಿಗ್ಮಿ ಸಂಗ್ರಾಹಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ, ತನ್ನ ದೊಡ್ಡಮ್ಮನ ಮಗಳಾದ ಅಕ್ಕನ ಮನೆಯಲ್ಲಿ ವಾಸ್ತವ್ಯವಿದ್ದ. ಅಲ್ಲಿಗೆ ಸಂಬಂಧಿಕಳಾಗಿರುವ ನೆರೆಮನೆಯ ಅಪ್ರಾಪ್ತ ಬಾಲಕಿ ಟಿವಿ ನೋಡಲು ಬರುತ್ತಿದ್ದಳು. ಆಕೆಯೊಂದಿಗೆ ಸಲುಗೆ ಬೆಳೆಸಿ, 2017ರ ನವೆಂಬರ್ನಲ್ಲಿ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಆಬಳಿಕ ಹಲವು ಬಾರಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿತ್ತು.
ಕೆಲವು ಸಮಯದ ಬಳಿಕ ಆಕೆಗೆ ವಿಪರೀತ ಸುಸ್ತು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತ. ಬಳಿಕ ಆಕೆಯನ್ನು ವಿಚಾರಿಸಿದಾಗ ಶಶಿಕುಮಾರ್ ಇದಕ್ಕೆ ಕಾರಣ ಎಂದು ಹೇಳಿದ್ದಳು. ಈ ಬಗ್ಗೆ ಆಕೆಯ ತಂದೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 2018 ಜೂ.26ರಂದು ದೂರು ನೀಡಿದ್ದರು.
![]()
ಆರೋಪಿಯನ್ನು ಬಂಧಿಸಿ ಅಂದಿನ ಇನ್ಸ್ಪೆಕ್ಟರ್ ರಾಮಚಂದ್ರ ನಾಯ್ಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಯುವತಿಯ ಮಗು ಹಾಗೂ ಶಶಿಕುಮಾರ್ನ ಡಿಎನ್ಎ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪೂರಕ ವರದಿ ಬಂದಿದೆ. 13 ಮಂದಿ ಸಾಕ್ಷಿ ಹೇಳಿದ್ದರು. 25 ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ನ್ಯಾಯಾಧೀಶರಾದ ಸಾವಿತ್ರಿ ವೆಂಕಟರಮಣ ಅವರು ವಾದ- ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದ್ದಾರೆ. ದಂಡದ ಮೊತ್ತದಲ್ಲಿ ೧ ಲಕ್ಷ ರು. ಸಂತ್ರಸ್ತೆಗೆ ನೀಡಬೇಕು. ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ 2 ಲಕ್ಷ ರು. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ
ಪರವಾಗಿ ಸರ್ಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು.
Mangalore Girl raped in Moodbidri court sentences 10 years jail term to accused Shashikumar (29).
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm