ಬ್ರೇಕಿಂಗ್ ನ್ಯೂಸ್
09-04-21 08:26 pm Mangaluru correspondent ಕರಾವಳಿ
ಮಂಗಳೂರು, ಎ.9 : ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ಆಲಂಗಾರು ಎಂಬಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗಿದ್ದು ಆರೋಪಿಗೆ ಶಿಕ್ಷೆ ಘೋಷಣೆ ಮಾಡಲಾಗಿದೆ.
![]()
ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.10 ಲಕ್ಷ ರು. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ನಿವಾಸಿ ಶಶಿ ಯಾನೆ
ಶಶಿಕುಮಾರ್ (29) ಶಿಕ್ಷೆಗೆ ಒಳಗಾದ ಅಪರಾಧಿ. ಮೂಡುಬಿದಿರೆಯಲ್ಲಿ ಫೈನಾನ್ಸ್ ಒಂದರಲ್ಲಿ ಪಿಗ್ಮಿ ಸಂಗ್ರಾಹಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ, ತನ್ನ ದೊಡ್ಡಮ್ಮನ ಮಗಳಾದ ಅಕ್ಕನ ಮನೆಯಲ್ಲಿ ವಾಸ್ತವ್ಯವಿದ್ದ. ಅಲ್ಲಿಗೆ ಸಂಬಂಧಿಕಳಾಗಿರುವ ನೆರೆಮನೆಯ ಅಪ್ರಾಪ್ತ ಬಾಲಕಿ ಟಿವಿ ನೋಡಲು ಬರುತ್ತಿದ್ದಳು. ಆಕೆಯೊಂದಿಗೆ ಸಲುಗೆ ಬೆಳೆಸಿ, 2017ರ ನವೆಂಬರ್ನಲ್ಲಿ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಆಬಳಿಕ ಹಲವು ಬಾರಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿತ್ತು.
ಕೆಲವು ಸಮಯದ ಬಳಿಕ ಆಕೆಗೆ ವಿಪರೀತ ಸುಸ್ತು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತ. ಬಳಿಕ ಆಕೆಯನ್ನು ವಿಚಾರಿಸಿದಾಗ ಶಶಿಕುಮಾರ್ ಇದಕ್ಕೆ ಕಾರಣ ಎಂದು ಹೇಳಿದ್ದಳು. ಈ ಬಗ್ಗೆ ಆಕೆಯ ತಂದೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 2018 ಜೂ.26ರಂದು ದೂರು ನೀಡಿದ್ದರು.
![]()
ಆರೋಪಿಯನ್ನು ಬಂಧಿಸಿ ಅಂದಿನ ಇನ್ಸ್ಪೆಕ್ಟರ್ ರಾಮಚಂದ್ರ ನಾಯ್ಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಯುವತಿಯ ಮಗು ಹಾಗೂ ಶಶಿಕುಮಾರ್ನ ಡಿಎನ್ಎ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪೂರಕ ವರದಿ ಬಂದಿದೆ. 13 ಮಂದಿ ಸಾಕ್ಷಿ ಹೇಳಿದ್ದರು. 25 ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ನ್ಯಾಯಾಧೀಶರಾದ ಸಾವಿತ್ರಿ ವೆಂಕಟರಮಣ ಅವರು ವಾದ- ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದ್ದಾರೆ. ದಂಡದ ಮೊತ್ತದಲ್ಲಿ ೧ ಲಕ್ಷ ರು. ಸಂತ್ರಸ್ತೆಗೆ ನೀಡಬೇಕು. ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ 2 ಲಕ್ಷ ರು. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ
ಪರವಾಗಿ ಸರ್ಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು.
Mangalore Girl raped in Moodbidri court sentences 10 years jail term to accused Shashikumar (29).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm