ಬ್ರೇಕಿಂಗ್ ನ್ಯೂಸ್
09-04-21 08:36 pm Mangaluru correspondent ಕರಾವಳಿ
ಮಂಗಳೂರು, ಎ.9: ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಆರೋಪದಲ್ಲಿ ಮಂಗಳೂರು ವಿವಿಯ ಪ್ರೊಫೆಸರ್ ಜಯಶಂಕರ್ ಅವರನ್ನು ಅಮಾನತು ಮಾಡಲಾಗಿದೆ.
ಮಂಗಳೂರು ವಿವಿಯಲ್ಲಿ ಇಂದು ಸಿಂಡಿಕೇಟ್ ಸಭೆ ನಡೆದಿದ್ದು ಸಭೆಯಲ್ಲಿ ಆರೋಪಿತ ಪ್ರೊಫೆಸರ್ ಜಯಶಂಕರ್ ಅವರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಅಲ್ಲದೆ ನಿವೃತ್ತ ನ್ಯಾಯಾಧೀಶರ ಮೂಲಕ ಪ್ರಕರಣದ ತನಿಖೆ ನಡೆಸಲು ನಿರ್ಧರಿಸಲಾಗಿದೆ.

ಮಂಗಳೂರು ಅಥವಾ ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವ ವಿಚಾರದಲ್ಲಿ ಪ್ರೊ. ಜಯಶಂಕರ್, ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ ಅತ್ತಾವರ ಮೂಲಕ 17.5 ಲಕ್ಷ ರೂ. ನೀಡಿದ್ದರು. ಹಣ ಕೊಟ್ಟು ವರ್ಷ ಕಳೆದರೂ, ಕುಲಪತಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಜಯಶಂಕರ್ ಮಂಗಳೂರಿನ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ದೂರಿನಂತೆ ತನಿಖೆ ನಡೆಸಿದ ಪೊಲೀಸರು ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು.
ಪ್ರಕರಣ ಬೆಳಕಿಗೆ ಬರುತ್ತಲೇ ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಸರಕಾರಿ ನೌಕರನಾಗಿರುವ ಪ್ರೊಫೆಸರ್ ಅನ್ನು ಅಮಾನತುಗೊಳಿಸಬೇಕೆಂದು ಆಗ್ರಹ ಕೇಳಿಬಂದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ, ಒತ್ತಾಯವೂ ಕೇಳಿಬಂದಿತ್ತು. ಈ ನಡುವೆ, ಪ್ರೊಫೆಸರ್ ಜೈಶಂಕರ್ ಗೆ ವಿವಿಯಿಂದ ಸ್ಪಷ್ಟನೆ ಕೇಳಿ ನೋಟಿಸ್ ನೀಡಲಾಗಿತ್ತು. ನೋಟೀಸಿಗೆ ವಿವಿಯ ಕುಲಪತಿ ಪ್ರೊ. ಯಡಪಡಿತ್ತಾಯರಿಗೆ ಪ್ರೊಫೆಸರ್ ಉತ್ತರವನ್ನೂ ನೀಡಿದ್ದರು. ನೋಟೀಸಿಗೆ ನೀಡಿದ್ದ ಉತ್ತರ ಮತ್ತು ಒಟ್ಟು ಪ್ರಕರಣ ಸಿಂಡಿಕೇಟ್ ಸಭೆಯಲ್ಲಿ ಇಂದು ಚರ್ಚೆಗೆ ಬಂದಿದೆ. ಒಬ್ಬ ಗೌರವಾನ್ವಿತ ಪ್ರೊಫೆಸರ್ ಆಗಿದ್ದುಕೊಂಡು ಕುಲಪತಿಯಾಗಲು ಲಂಚ ನೀಡಿರುವುದು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಬೀತಾಗಿದ್ದಲ್ಲದೆ ಮಂಗಳೂರು ವಿವಿಯ ಗೌರವಕ್ಕೆ ಧಕ್ಕೆ ತಂದಿದ್ದಾರೆಂಬ ನೆಲೆಯಲ್ಲಿ ಅವರನ್ನು ಆರು ತಿಂಗಳ ಕಾಲ ಅಮಾನತು ಮಾಡಲು ಸಿಂಡಿಕೇಟ್ ಮಂಡಳಿ ಸಭೆ ನಿರ್ಧರಿಸಿದೆ.
Prof M Jayashanakar who had filed a cheating case against Prasad Attavar has been suspended by Managalore University Syndicate bench over bribe charges.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm