ಬ್ರೇಕಿಂಗ್ ನ್ಯೂಸ್
09-04-21 08:36 pm Mangaluru correspondent ಕರಾವಳಿ
ಮಂಗಳೂರು, ಎ.9: ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಆರೋಪದಲ್ಲಿ ಮಂಗಳೂರು ವಿವಿಯ ಪ್ರೊಫೆಸರ್ ಜಯಶಂಕರ್ ಅವರನ್ನು ಅಮಾನತು ಮಾಡಲಾಗಿದೆ.
ಮಂಗಳೂರು ವಿವಿಯಲ್ಲಿ ಇಂದು ಸಿಂಡಿಕೇಟ್ ಸಭೆ ನಡೆದಿದ್ದು ಸಭೆಯಲ್ಲಿ ಆರೋಪಿತ ಪ್ರೊಫೆಸರ್ ಜಯಶಂಕರ್ ಅವರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಅಲ್ಲದೆ ನಿವೃತ್ತ ನ್ಯಾಯಾಧೀಶರ ಮೂಲಕ ಪ್ರಕರಣದ ತನಿಖೆ ನಡೆಸಲು ನಿರ್ಧರಿಸಲಾಗಿದೆ.

ಮಂಗಳೂರು ಅಥವಾ ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವ ವಿಚಾರದಲ್ಲಿ ಪ್ರೊ. ಜಯಶಂಕರ್, ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ ಅತ್ತಾವರ ಮೂಲಕ 17.5 ಲಕ್ಷ ರೂ. ನೀಡಿದ್ದರು. ಹಣ ಕೊಟ್ಟು ವರ್ಷ ಕಳೆದರೂ, ಕುಲಪತಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಜಯಶಂಕರ್ ಮಂಗಳೂರಿನ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ದೂರಿನಂತೆ ತನಿಖೆ ನಡೆಸಿದ ಪೊಲೀಸರು ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು.
ಪ್ರಕರಣ ಬೆಳಕಿಗೆ ಬರುತ್ತಲೇ ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಸರಕಾರಿ ನೌಕರನಾಗಿರುವ ಪ್ರೊಫೆಸರ್ ಅನ್ನು ಅಮಾನತುಗೊಳಿಸಬೇಕೆಂದು ಆಗ್ರಹ ಕೇಳಿಬಂದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ, ಒತ್ತಾಯವೂ ಕೇಳಿಬಂದಿತ್ತು. ಈ ನಡುವೆ, ಪ್ರೊಫೆಸರ್ ಜೈಶಂಕರ್ ಗೆ ವಿವಿಯಿಂದ ಸ್ಪಷ್ಟನೆ ಕೇಳಿ ನೋಟಿಸ್ ನೀಡಲಾಗಿತ್ತು. ನೋಟೀಸಿಗೆ ವಿವಿಯ ಕುಲಪತಿ ಪ್ರೊ. ಯಡಪಡಿತ್ತಾಯರಿಗೆ ಪ್ರೊಫೆಸರ್ ಉತ್ತರವನ್ನೂ ನೀಡಿದ್ದರು. ನೋಟೀಸಿಗೆ ನೀಡಿದ್ದ ಉತ್ತರ ಮತ್ತು ಒಟ್ಟು ಪ್ರಕರಣ ಸಿಂಡಿಕೇಟ್ ಸಭೆಯಲ್ಲಿ ಇಂದು ಚರ್ಚೆಗೆ ಬಂದಿದೆ. ಒಬ್ಬ ಗೌರವಾನ್ವಿತ ಪ್ರೊಫೆಸರ್ ಆಗಿದ್ದುಕೊಂಡು ಕುಲಪತಿಯಾಗಲು ಲಂಚ ನೀಡಿರುವುದು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಬೀತಾಗಿದ್ದಲ್ಲದೆ ಮಂಗಳೂರು ವಿವಿಯ ಗೌರವಕ್ಕೆ ಧಕ್ಕೆ ತಂದಿದ್ದಾರೆಂಬ ನೆಲೆಯಲ್ಲಿ ಅವರನ್ನು ಆರು ತಿಂಗಳ ಕಾಲ ಅಮಾನತು ಮಾಡಲು ಸಿಂಡಿಕೇಟ್ ಮಂಡಳಿ ಸಭೆ ನಿರ್ಧರಿಸಿದೆ.
Prof M Jayashanakar who had filed a cheating case against Prasad Attavar has been suspended by Managalore University Syndicate bench over bribe charges.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm