ಬ್ರೇಕಿಂಗ್ ನ್ಯೂಸ್
10-04-21 12:25 pm Mangalore Correspondent ಕರಾವಳಿ
ಮಂಗಳೂರು, ಎ.10: ಸಣ್ಣ ಮಕ್ಕಳನ್ನು ಭಿಕ್ಷಾಟನೆಗೆ ಇಳಿಸಿ ಹಣ ಮಾಡುತ್ತಿರುವ ದಂಧೆಯನ್ನು ಪತ್ತೆಹಚ್ಚಿರುವ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಪೊಳಲಿ ದೇವಸ್ಥಾನದ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ, ಎರಡು ತಿಂಗಳ ಮಗು ಸೇರಿ ಒಂಬತ್ತು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.

ಮಂಗಳೂರಿನ ಬೀದಿಗಳಲ್ಲಿ ಬಲೂನ್ ಮಾರುತ್ತಾ ಭಿಕ್ಷೆಗೆ ಇಳಿದಿದ್ದ ಮಕ್ಕಳು ಈಗ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಉತ್ಸವದ ಸಂದರ್ಭದಲ್ಲಿ ಭಿಕ್ಷಾಟನೆ ಶುರು ಮಾಡಿದ್ದರು. ಈ ವೇಳೆ ಜಿಲ್ಲಾ ಮಕ್ಕಳ ಅಭಿವೃದ್ಧಿ ಸಮಿತಿ ಮತ್ತು ಮಕ್ಕಳ ರಕ್ಷಣಾ ಸಮಿತಿಯ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಎಲ್ಲರೂ ಏಳು ವರ್ಷದೊಳಗಿನ ಮಕ್ಕಳಾಗಿದ್ದು ಈ ಪೈಕಿ ಐದು ಮಂದಿ ಹುಡುಗರು.

ಹಿಂದಿ ಮಾತನಾಡುವ ಮಕ್ಕಳು, ಅವುಗಳ ತಾಯಂದಿರು ಮಂಗಳೂರಿನ ಬೀದಿಗಳಲ್ಲಿ ಅಲೆದಾಡುತ್ತಿದ್ದರು. ಲಾಕ್ಡೌನ್ ಸಂದರ್ಭದಲ್ಲಿ ಇವರ ಕಾಟ ಸ್ವಲ್ಪ ಕಡಿಮೆಯಾಗಿತ್ತು. ಸಾರಿಗೆ ಸೇವೆ ಪುನಾರಂಭಗೊಂಡ ನಂತರ ರಸ್ತೆಗಳ ಮಧ್ಯೆ ಬಲೂನ್ ಮಾರುತ್ತಾ ಭಿಕ್ಷಾಟನೆ ನಡೆಸುತ್ತಿದ್ದುದು ಕಂಡುಬಂದಿದೆ. ಈ ಮಕ್ಕಳು ಶಾಲೆಯ ಮುಖವನ್ನೇ ನೋಡಿರಲಿಕ್ಕಿಲ್ಲ ಎಂದು ಹೇಳುತ್ತಾರೆ, ಚೈಲ್ಡ್ ವೆಲ್ಫೇರ್ ಕಮಿಟಿ ಸದಸ್ಯರು.


ಈ ರೀತಿ ಬೀದಿಗೆ ಬಿಟ್ಟ ಮಕ್ಕಳಲ್ಲಿ ಹೆಚ್ಚಿನವರು ರಾಜಸ್ಥಾನ ಮೂಲದವರು. ಮಕ್ಕಳ ಪೋಷಕರನ್ನು ಲಾಡ್ಜ್ ನಲ್ಲಿ ಇಡಲಾಗುತ್ತೆ. ಮಕ್ಕಳನ್ನು ಈ ರೀತಿ ಭಿಕ್ಷೆಗೆ ಇಳಿಸುವಲ್ಲಿ ಏಜಂಟರು ಕೆಲಸ ಮಾಡುತ್ತಾರೆ. ಹತ್ತು ಕುಟುಂಬಗಳ ಎರಡು ಗುಂಪು ಮಂಗಳೂರಿನಲ್ಲಿ ಸಕ್ರಿಯ ಆಗಿರುವುದು ಕಂಡುಬರುತ್ತಿದೆ. ಈ ಮಕ್ಕಳ ತಾಯಂದಿರು ಕೂಡ ಮೈನರ್ ಆಗಿದ್ದು ಅವರನ್ನು ಭಿಕ್ಷಾಟನೆಗೆ ಇಳಿಸುವುದು ಇಲ್ಲವೇ ಇತರೇ ದಂಧೆಗಳಿಗೆ ಬಳಸಿಕೊಳ್ಳಲಾಗುತ್ತೆ. ವಾರಕ್ಕೊಮ್ಮೆ ಜಾಗ ಬದಲು ಮಾಡುತ್ತಾರೆ. ಒಂದೊಂದು ವಾರ ಒಂದೊಂದು ಕಡೆ ದೇವಸ್ಥಾನ, ಇನ್ನಿತರ ಜನ ಸೇರುವ ಪ್ರದೇಶಗಳಲ್ಲಿ ಮಕ್ಕಳನ್ನು ಬಿಡಲಾಗುತ್ತದೆ. ಸಂಜೆ ಹೊತ್ತಿಗೆ ಲಾಲ್ ಬಾಗಿನ ಫೇಮಸ್ ಐಸ್ ಕ್ರೀಂ ಪಾರ್ಲರ್ ಬಳಿ ಇರುತ್ತಾರೆ ಎಂದು ಕಮಿಟಿ ಸದಸ್ಯರು ಮಾಹಿತಿ ನೀಡಿದ್ದಾರೆ. ರಕ್ಷಣೆ ಮಾಡಿದ ಮಕ್ಕಳನ್ನು ಸುರಕ್ಷಿತವಾಗಿ ಇರಿಸಿ ಶಾಲೆಗೆ ಕಳಿಸುವ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ.
Mangalore Forced begging childline department rescues 9 children of Rajasthan who were forced to sell balloons and make money.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm