ಬ್ರೇಕಿಂಗ್ ನ್ಯೂಸ್
10-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.10: ಕರಾವಳಿಯ ಮಂಗಳೂರು, ಉಡುಪಿಯಲ್ಲಿ ನೈಟ್ ಕರ್ಫ್ಯೂ ವಿಧಿಸಿರುವುದಕ್ಕೆ ಶಾಸಕರಿಂದ ಆಕ್ಷೇಪ ವ್ಯಕ್ತವಾಗಿದೆ. ಎಪ್ರಿಲ್ ತಿಂಗಳಲ್ಲಿ ಹೆಚ್ಚಿನ ಕಡೆ ಕೋಲ, ನೇಮ, ಉತ್ಸವಗಳು ನಡೆಯುತ್ತಿರುವುದರಿಂದ ಕರಾವಳಿಯಲ್ಲಿ ನೈಟ್ ಕರ್ಫ್ಯೂ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಾಯ್ತಿ ಕೊಡಬೇಕೆಂದು ಶಾಸಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದಲ್ಲದೆ, ಸಿಎಂ ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡುವುದಾಗಿ ಶಾಸಕರು ಹೇಳುತ್ತಿದ್ದಾರೆ.

ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಕಳೆದ ಬಾರಿಯೂ ಕೊರೊನಾ ಕಾರಣದಿಂದ ನೇಮ, ಕೋಲಗಳಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ಬಾರಿಯೂ ಅವಕಾಶ ನೀಡದಿದ್ದರೆ ಜನರು ಅಸಹನೆಗೆ ಈಡಾಗುತ್ತಾರೆ. ಕರಾವಳಿ ಭಾಗದಲ್ಲಿ ಕೋಲ, ನೇಮಗಳು ರಾತ್ರಿ ವೇಳೆ ನಡೆಯುವ ಕಾರಣ ಇದಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಕೂಡ ಈ ಬಗ್ಗೆ ಸಿಎಂ ಅವರಿಗೆ ಪತ್ರ ಬರೆದು ಧಾರ್ಮಿಕ ವಿಧಿಗಳಿಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ.

ಆದರೆ, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ನಾವು ರಾಜ್ಯ ಸರಕಾರದ ಸೂಚನೆಯನ್ನು ಪಾಲಿಸುತ್ತೇವೆ ಎಂದಿದ್ದಾರೆ. ರಾಜ್ಯ ಸರಕಾರದ ಗೈಡ್ ಲೈನ್ಸ್ ಪ್ರಕಾರ ಯಾವುದೇ ಧಾರ್ಮಿಕ ಕಾರ್ಯಗಳಿಗೆ ನೈಟ್ ಕರ್ಫ್ಯೂ ಅವಧಿಯಲ್ಲಿ ಅವಕಾಶ ಇರುವುದಿಲ್ಲ. ಶಾಸಕರು ಸಿಎಂ ಅವರನ್ನು ಮನವರಿಕೆ ಮಾಡಿ, ಹೊಸ ಮಾರ್ಗಸೂಚಿಯನ್ನು ಹೊರಡಿಸಿದರೆ ಅದರಂತೆ ನಡೆದುಕೊಳ್ಳುತ್ತೇವೆ. ನಾವಾಗಿಯೇ ಇದನ್ನು ಬದಲಿಸಲು ಸಾಧ್ಯವಾಗಲ್ಲ ಎಂದು ಹೇಳಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ವಿಧಿಸಲು ಈಗಾಗ್ಲೇ ಆದೇಶ ನೀಡಲಾಗಿದೆ. ಇದರಂತೆ ಯಾವುದೇ ಧಾರ್ಮಿಕ ವಿಧಿಗಳಿಗೆ, ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ಅಗತ್ಯ ಕೆಲಸದ ಹೊರತಾಗಿ ಎಲ್ಲ ಜನರೂ ರಾತ್ರಿ ಹತ್ತು ಗಂಟೆಯ ನಂತರ ಮನೆ ಸೇರಿಕೊಳ್ಳಬೇಕು. ಇಲ್ಲದಿದ್ದರೆ ಪೊಲೀಸರ ಮೂಲಕ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Night curfew Mangalore Mla Vedavyas Kamath urges permission for Bhoota Kola and nema but DC Rajendra Kumar has said a big No for such religious gatherings due to Covid Guidelines.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm