ಬ್ರೇಕಿಂಗ್ ನ್ಯೂಸ್
10-04-21 05:25 pm Mangalore Correspondent ಕರಾವಳಿ
ಉಳ್ಳಾಲ, ಎ. 10: ವ್ಯಾಪಾರಿಗಳ ಅನುಕೂಲ ಮತ್ತು ಗ್ರಾಹಕರ ಸ್ನೇಹಿ ವ್ಯವಸ್ಥೆಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಆತ್ಮ ನಿರ್ಭರ್ ಗೆ ಪೂರಕ ಎಂಬಂತೆ ರಾ.ಹೆ. 66ರ ಕಲ್ಲಾಪು ಬಳಿ ವಿಶಾಲ, ಸುಸಜ್ಜಿತವಾದ ಗ್ಲೋಬಲ್ ಕಮರ್ಷಿಯಲ್ ಮಾರುಕಟ್ಟೆಯನ್ನು ನಿರ್ಮಿಸಲಾಗಿದೆ.


ರಾ.ಹೆ.66 ರ ಕಲ್ಲಾಪಿನಲ್ಲಿರುವ ಸುಮಾರು 5 ಎಕರೆ ವಿಶಾಲ ಪ್ರದೇಶದಲ್ಲಿ 1.5 ಎಕರೆ ಪ್ರದೇಶವನ್ನು ಮಾರುಕಟ್ಟೆ ವ್ಯಾಪಾರೋದ್ಯಮಕ್ಕೆ ಬಳಸಲಾಗಿದೆ. ಈ ವಿಶಾಲ ಮಾರುಕಟ್ಟೆಯಲ್ಲಿ 200 ರಷ್ಟು ತಾತ್ಕಾಲಿಕ ಶೆಡ್ ರೂಪದ ಅಂಗಡಿ ಮಳಿಗೆಗಳನ್ನು ನಿರ್ಮಿಸಿದ್ದು, ಹೊರ ಆವರಣದಲ್ಲಿ ರಖಂ ಮತ್ತು ಒಳ ಆವರಣದಲ್ಲಿ ಚಿಲ್ಲರೆ ಅಂಗಡಿಗಳು ವಹಿವಾಟು ನಡೆಸಲಿವೆ. ಉಳಿದ ಭಾಗವನ್ನು ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ಕೆಲಸಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ವ್ಯಾಪಾರಿಗಳಿಗೂ ಅನುಕೂಲ ಮತ್ತು ಕೈಗೆಟಕುವ ಬಾಡಿಗೆ ಆಧಾರದಲ್ಲಿ ಎಲ್ಲ ರೀತಿಯ ವ್ಯಾಪಾರ, ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕಲ್ಲಾಪು ಗ್ಲೋಬಲ್ ಕಮರ್ಷಿಯಲ್ ಮಾರುಕಟ್ಟೆಯ ಪ್ರಮೋಟರ್ ಅಬೂಬಕ್ಕರ್ ಸಿದ್ಧಿಕ್ ಮಾಹಿತಿ ನೀಡಿದ್ದಾರೆ.

ವಿಶಾಲ ಮಾರುಕಟ್ಟೆಯಲ್ಲಿ ವಾಹನ ಚಾಲಕರಿಗೆ ವಿಶ್ರಾಂತಿ ಕೊಠಡಿ, ಒಂದು ಡಿಸ್ಪೆನ್ಸರಿ, ಬಡವರ ಬಂಧು ಮಾದರಿಯ ರಿಯಾಯಿತಿ ದರದ ಕ್ಯಾಂಟೀನ್, ಸ್ನಾನ ಗೃಹ, ಆಧುನಿಕ ಮಾದರಿಯ 30 ಶೌಚಾಲಯ ನಿರ್ಮಿಸಲಾಗುತ್ತಿದೆ. ಭದ್ರತೆ ದೃಷ್ಟಿಯಿಂದ ಸಿಸಿ ಕ್ಯಾಮೆರಾ, ಎಂಟು ಮಂದಿ ಭದ್ರತಾ ಸಿಬ್ಬಂದಿ ನೇಮಿಸಲಾಗಿದೆ. ಪ್ರತಿ ಮಳಿಗೆಗೂ ವಿದ್ಯುತ್ ದೀಪ, ಸುತ್ತಮುತ್ತಲ ಪರಿಸರಕ್ಕೆ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ನೆಲಕ್ಕೆ ಇಂಟರ್ ಲಾಕ್ ಅಳವಡಿಸಲಾಗಿದೆ. ಎಟಿಎಂ ಸಹಿತ ಬ್ಯಾಂಕಿಂಗ್ ವ್ಯವಸ್ಥೆಗಾಗಿ ಬ್ಯಾಂಕ್ ಜತೆ ಮಾತುಕತೆ ನಡೆಸಲಾಗಿದೆ.


ಮಾರುಕಟ್ಟೆಯಲ್ಲಿ ಉತ್ಪತ್ತಿಯಾಗುವ ಯಾವುದೇ ಕಸವನ್ನು ಮಾರುಕಟ್ಟೆ ಹೊರ ಭಾಗಕ್ಕೆ ಹಾಕುವುದಿಲ್ಲ. ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಗೆ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ನಿರ್ಮಿಸಿದ್ದು, ಇಂಥಹ ಯೋಜನೆ ಬೇರಾವ ಮಾರುಕಟ್ಟೆಯಲ್ಲೂ ಕಾಣಲು ಸಿಗದು. ದಿನಕ್ಕೆರಡು ಬಾರಿ ಶುಚಿತ್ವ , ಸ್ಯಾನಿಟೈಶೇಷನ್ ಮಾಡಲಾಗುತ್ತದೆ. ಸ್ವಚ್ಚತೆಗೆ ವಿಶೇಷ ಆದ್ಯತೆ ನೀಡಿ ಸುತ್ತಮುತ್ತ ಹಸಿರ ಸಂಪತ್ತು ಹೆಚ್ಚಿಸುವ ಯೋಜನೆ ಇದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ, ಶಾಸಕ ಯು.ಟಿ ಖಾದರ್ ,ಉಳ್ಳಾಲ ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಮೊದಲಾದವರು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅತ್ಯಾಧುನಿಕ ವ್ಯವಸ್ಥಿತ ಯೋಜನೆಯನ್ನು ಪ್ರಶಂಸಿಸಿದ್ದಾರೆ.
Spacious complex for business purpose inaugurated by in Ullal by Global Commercial. Mangalore DC Rajendra Kumar and other leaders have praised their the companies work.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm