ಬ್ರೇಕಿಂಗ್ ನ್ಯೂಸ್
11-04-21 06:38 pm Mangaluru correspondent ಕರಾವಳಿ
ಉಳ್ಳಾಲ, ಎ.11 : "ಉಳ್ಳಾಲ ದರ್ಗಾ" ಎಂದೇ ಪ್ರಸಿದ್ಧವಾಗಿರುವ ಖುತುಬುಝ್ಝಮಾನ್ ಹಝ್ರತ್ ಅಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ತಂಗಳ್ರವರ ದರ್ಗಾದಲ್ಲಿ ಐದು ವರ್ಷಕ್ಕೊಮ್ಮೆ ಒಂದು ತಿಂಗಳ ಕಾಲ ನಡೆಯುವ ‘ಉಳ್ಳಾಲ ಉರೂಸ್’ ಗೆ ದರ್ಗಾ ಆಡಳಿತ ಮಂಡಳಿ ಸಿದ್ಧತೆ ನಡೆಸುತ್ತಿದೆ. ಪವಿತ್ರ ರಂಝಾನ್ ಉಪವಾಸ ಮುಗಿದ ತಕ್ಷಣ ಉರೂಸ್ ಸಿದ್ಧತಾ ಕಾರ್ಯಕ್ಕೆ ಚಾಲನೆ ನೀಡಲಿದ್ದು, 2021ರ ಅಕ್ಟೋಬರ್ 28ರಿಂದ ನ.20ರ ವರೆಗೆ ಉಳ್ಳಾಲ ಉರೂಸ್ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಹೇಳಿದರು.
ದರ್ಗಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಧಾರ್ಮಿಕ ಶ್ರದ್ಧಾಕೇಂದ್ರವಾಗಿ ದೇಶ ವಿದೇಶಗಳಿಂದ ಇಲ್ಲಿಗೆ ಭಕ್ತಾದಿಗಳು ಆಗಮಿಸುತ್ತಿದ್ದು, ಪ್ರವಾಸೋದ್ಯಮ ಇಲಾಖೆಯಿಂದಲೂ ಧಾರ್ಮಿಕ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದೆ. 2020ರಲ್ಲಿ ಉರೂಸ್ ನಡೆಯಬೇಕಾಗಿದ್ದು ಕೋವಿಡ್ 19 ಹಿನ್ನೆಲೆಯಲ್ಲಿ ಉರೂಸ್ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ ಭಕ್ತಾದಿಗಳು ಉಳ್ಳಾಲ ಉರೂಸ್ ಕುರಿತು ಮಾಹಿತಿಗಾಗಿ ನಿರೀಕ್ಷೆಯಲ್ಲಿದ್ದಾರೆ. ಉರೂಸು ನಡೆಯುವ 6 ತಿಂಗಳ ಮೊದಲೇ ಸಿದ್ಧತೆ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ದರ್ಗಾ ಸಮಿತಿ ಯೋಜನೆ ಹಾಕಿಕೊಂಡಿದ್ದು ಮೇ 28ಕ್ಕೆ ಆಚರಣೆಗೆ ಸಂಬಂಧಿಸಿದ ಕೊಡಿಯೇರಿಸುವ ಕಾರ್ಯ ಆರಂಭಗೊಂಡು ಅಕ್ಟೋಬರ್ನಿಂದ ನವಂಬರ್ ವರೆಗೆ ಉರೂಸ್ ಆಚರಣೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಉಳ್ಳಾಲ ವ್ಯಾಪ್ತಿಯ ಮೊಹಲ್ಲಾಗಳ ಸದಸ್ಯರು, ಸೇರಿದಂತೆ ವಿವಿಧ ಸಮಿತಿಗಳ ರಚನೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

ಉಪಾಧ್ಯಕ್ಷರಾದ ಯು.ಕೆ. ಮೋನು, ಬಾವಾ ಮಹಮ್ಮದ್ , ಕಾರ್ಯದರ್ಶಿ ಮಹಮ್ಮದ್ ತ್ವಾಹಾ, ಲೆಕ್ಕ ಪರಿಶೋಧಕ ಯು.ಟಿ. ಇಲ್ಯಾಸ್, ಜೊತೆ ಕಾರ್ಯದರ್ಶಿ ನೌಷಾದ್ ಅಬೂಬಕ್ಕರ್, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಯು.ಕೆ. ಇಬ್ರಾಹಿಂ ಕಕ್ಕೆತೋಟ, ಜೊತೆ ಕಾರ್ಯದರ್ಶಿ ಎ. ಜೆ. ಮೊಯ್ದಿನ್, ಅರೆಬಿಕ್ ಟ್ರಸ್ಟ್ ಉಪಾಧ್ಯಕ್ಷ ಅಬೂಬಕ್ಕರ್, ಸದಸ್ಯರಾದ ಇಬ್ರಾಹಿಂ ಉಳ್ಳಾಲ ಬೈಲ್, ಹಸನಬ್ಬ ಕಡಪ್ಪರ, ಆಲಿಮೋನು ಉಳ್ಳಾಲ, ನಝೀರ್ ಸುಂದರಿಭಾಗ್, ಹಮ್ಮಬ್ವ ಕೋಟೆಪುರ, ಅಹಮ್ಮದ್ ಮುಕ್ಕಚ್ಚೇರಿ, ಮಯ್ಯದ್ದಿ ಕೋಡಿ, ಹಮೀದ್ ಕೋಡಿ, ದರ್ಗಾ ಸಮಿತಿ ಸದಸ್ಯ ಫಾರೂಕ್ ಉಳ್ಳಾಲ್ , ಕಾರ್ಯದರ್ಶಿ ಮಹಮ್ಮದ್ ತ್ವಾಹಾ ಇದ್ದರು.
Mangalore Ullal darga Urs to start from 2021 October 28 to nov 20.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm