ಬ್ರೇಕಿಂಗ್ ನ್ಯೂಸ್
11-04-21 09:15 pm Mangaluru correspondent ಕರಾವಳಿ
ಮಂಗಳೂರು, ಎ.11: ಕೊರೊನಾ ಕಾರಣದಿಂದಾಗಿ ಜನತೆ ಆತಂಕ ಪಡುತ್ತಿರುವ ಈ ಸಂದರ್ಭದಲ್ಲಿ ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ. ಸರಕಾರದ ಮೇಲೆ ವಿಶ್ವಾಸವಿಟ್ಟು ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆ ಪರಿಹಾರವಾಗಲಿದೆ ಎಂಬ ಭರವಸೆಯೊಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಆರನೇ ವೇತನ ಆಯೋಗದ ಶಿಫಾರಸು ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಐದನೇ ದಿನಕ್ಕೆ ಮುಂದುವರೆಯುತ್ತಿರುವ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಪುತ್ತೂರು ವಿಭಾಗದಿಂದ ಹೊರಡುವ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ
ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಪ್ರತಿ ದಿವಸ ಸುಮಾರು 480 ವಾಹನಗಳು ಸಂಚರಿಸುತ್ತಿದ್ದು, ಪ್ರಸ್ತುತ ಮುಷ್ಕರದ ಅವಧಿಯಲ್ಲಿ ಎ. 10ರಂದು ಸುಮಾರು 140 ವಾಹನಗಳು ಬೆಂಗಳೂರು, ಮೈಸೂರು, ಧರ್ಮಸ್ಥಳ, ಹುಬ್ಬಳ್ಳಿ, ಕಾಸರಗೋಡು, ಹೈದ್ರಾಬಾದ್, ಮಧುರೈ, ಕೊಯಮತ್ತೂರು, ಮಂತ್ರಾಲಯ ಮುಂತಾದ ಮಾರ್ಗಗಳಲ್ಲಿ ಕಾರ್ಯಾಚರಣೆ ನಡೆಸಿವೆ. ಅದೇ ರೀತಿ ಎ.11 ರಂದು ಸುಮಾರು 200 ವಾಹನಗಳಲ್ಲಿ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಾಹನಗಳನ್ನು ಕಾರ್ಯಾಚರಿಸಲು ಅಗತ್ಯ ಯೋಜನೆಗಳನ್ನು ಮಾಡಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಪುತ್ತೂರು ವಿಭಾಗದಲ್ಲಿಯೂ ಬಸ್ ಸಂಚಾರ ಹೆಚ್ಚುತ್ತಿದ್ದು ಎ. 10ರಂದು 47 ವಾಹನಗಳು ಮತ್ತು ಎ.11ರಂದು ಸುಮಾರು 75 ವಾಹನಗಳನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ಪುತ್ತೂರು, ಮಡಿಕೇರಿ ಮುಂತಾದ ಮಾರ್ಗಗಳಲ್ಲಿ ಬಿಡಲಾಗುತ್ತಿದೆ.
ಈಗಾಗಲೇ ಕರ್ತವ್ಯಕ್ಕೆ ಹಾಜರಾದ ನೌಕರರೆಲ್ಲರಿಗೆ ಅಭಿನಂದನೆ ಸಲ್ಲಿಸಿ, ಇನ್ನುಳಿದ ನೌಕರರು ಕೂಡ ಕರ್ತವ್ಯಕ್ಕೆ ಹಾಜರಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಸಚಿವ ಕೋಟ ಮನವಿ ಮಾಡಿದ್ದಾರೆ.
Mangalore Kota Srinivas poojary urge kSRTC staffs to come back to duty by leaving their strike as it's causing much problems to general public.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm