ಬ್ರೇಕಿಂಗ್ ನ್ಯೂಸ್
11-04-21 09:15 pm Mangaluru correspondent ಕರಾವಳಿ
ಮಂಗಳೂರು, ಎ.11: ಕೊರೊನಾ ಕಾರಣದಿಂದಾಗಿ ಜನತೆ ಆತಂಕ ಪಡುತ್ತಿರುವ ಈ ಸಂದರ್ಭದಲ್ಲಿ ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ. ಸರಕಾರದ ಮೇಲೆ ವಿಶ್ವಾಸವಿಟ್ಟು ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆ ಪರಿಹಾರವಾಗಲಿದೆ ಎಂಬ ಭರವಸೆಯೊಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಆರನೇ ವೇತನ ಆಯೋಗದ ಶಿಫಾರಸು ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಐದನೇ ದಿನಕ್ಕೆ ಮುಂದುವರೆಯುತ್ತಿರುವ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಪುತ್ತೂರು ವಿಭಾಗದಿಂದ ಹೊರಡುವ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ
ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಪ್ರತಿ ದಿವಸ ಸುಮಾರು 480 ವಾಹನಗಳು ಸಂಚರಿಸುತ್ತಿದ್ದು, ಪ್ರಸ್ತುತ ಮುಷ್ಕರದ ಅವಧಿಯಲ್ಲಿ ಎ. 10ರಂದು ಸುಮಾರು 140 ವಾಹನಗಳು ಬೆಂಗಳೂರು, ಮೈಸೂರು, ಧರ್ಮಸ್ಥಳ, ಹುಬ್ಬಳ್ಳಿ, ಕಾಸರಗೋಡು, ಹೈದ್ರಾಬಾದ್, ಮಧುರೈ, ಕೊಯಮತ್ತೂರು, ಮಂತ್ರಾಲಯ ಮುಂತಾದ ಮಾರ್ಗಗಳಲ್ಲಿ ಕಾರ್ಯಾಚರಣೆ ನಡೆಸಿವೆ. ಅದೇ ರೀತಿ ಎ.11 ರಂದು ಸುಮಾರು 200 ವಾಹನಗಳಲ್ಲಿ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಾಹನಗಳನ್ನು ಕಾರ್ಯಾಚರಿಸಲು ಅಗತ್ಯ ಯೋಜನೆಗಳನ್ನು ಮಾಡಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಪುತ್ತೂರು ವಿಭಾಗದಲ್ಲಿಯೂ ಬಸ್ ಸಂಚಾರ ಹೆಚ್ಚುತ್ತಿದ್ದು ಎ. 10ರಂದು 47 ವಾಹನಗಳು ಮತ್ತು ಎ.11ರಂದು ಸುಮಾರು 75 ವಾಹನಗಳನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ಪುತ್ತೂರು, ಮಡಿಕೇರಿ ಮುಂತಾದ ಮಾರ್ಗಗಳಲ್ಲಿ ಬಿಡಲಾಗುತ್ತಿದೆ.
ಈಗಾಗಲೇ ಕರ್ತವ್ಯಕ್ಕೆ ಹಾಜರಾದ ನೌಕರರೆಲ್ಲರಿಗೆ ಅಭಿನಂದನೆ ಸಲ್ಲಿಸಿ, ಇನ್ನುಳಿದ ನೌಕರರು ಕೂಡ ಕರ್ತವ್ಯಕ್ಕೆ ಹಾಜರಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಸಚಿವ ಕೋಟ ಮನವಿ ಮಾಡಿದ್ದಾರೆ.
Mangalore Kota Srinivas poojary urge kSRTC staffs to come back to duty by leaving their strike as it's causing much problems to general public.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm