ಬ್ರೇಕಿಂಗ್ ನ್ಯೂಸ್
12-04-21 05:18 pm Mangalore Correspondent ಕರಾವಳಿ
ಮಂಗಳೂರು, ಎ.12: ಕೋವಿಡ್ ನಿಯಂತ್ರಣಕ್ಕಾಗಿ ಒಂದ್ಕಡೆ ರಾತ್ರಿ ವೇಳೆ ನೈಟ್ ಕರ್ಫ್ಯೂ ವಿಧಿಸಿದ್ದರೆ, ಮತ್ತೊಂದ್ಕಡೆ ಹಗಲಿನಲ್ಲಿ ಮಾಸ್ಕ್ ಹಾಕದೇ ತಿರುಗಾಡುವ ಮಂದಿಗೆ ಬಿಸಿ ಮುಟ್ಟಿಸುವುದಕ್ಕಾಗಿ ಕೋವಿಡ್ ಮಾರ್ಶಲ್ ಗಳು ಬೀದಿಗೆ ಇಳಿದಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಜಂಟಿ ಆಪರೇಶನ್ ನಡೆಸಲಾಗಿದ್ದು, ಇದಕ್ಕಾಗಿ ಹೋಮ್ ಗಾರ್ಡ್ ಗಳನ್ನು ಬಳಕೆ ಮಾಡಲಾಗಿದೆ. ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳ ಜೊತೆ ಮಂಗಳೂರಿನಲ್ಲಿ ದಾಳಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ನಗರದಾದ್ಯಂತ ಏಕಕಾಲದಲ್ಲಿ ಮಾರ್ಶಲ್ ಗಳು ರಸ್ತೆಗೆ ಇಳಿದಿದ್ದು ಮಾಸ್ಕ್ ಹಾಕದೇ ತಿರುಗಾಡುವ ಮಂದಿಗೆ 250 ರೂ. ದಂಡ ವಿಧಿಸುತ್ತಿದ್ದಾರೆ. ಸುಮಾರು 50 ಮಂದಿಯ ತಂಡವನ್ನು ಇದಕ್ಕಾಗಿ ಮಾಡಲಾಗಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಫೀಲ್ಡಿಗೆ ಇಳಿದಿದ್ದಾರೆ. ನಗರದ ಹಂಪನಕಟ್ಟೆ, ಕುದ್ರೋಳಿ, ಲಾಲ್ ಬಾಗ್ ಹೀಗೆ ಪ್ರಮುಖ ಭಾಗದಲ್ಲಿ ಕೋವಿಡ್ ಮಾರ್ಶಲ್ ಮತ್ತು ಅಧಿಕಾರಿಗಳು ಜೊತೆಯಾಗಿ ದಾಳಿ ನಡೆಸುತ್ತಿದ್ದಾರೆ.


ಹೋಮ್ ಗಾರ್ಡ್ ಸಿಬಂದಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಜೊತೆಯಾಗಿ ಬೇರೆ ಬೇರೆ ಕಡೆ ವಾಹನದಲ್ಲಿ ತೆರಳುತ್ತಿದ್ದು, ಜನರು ಇರುವಲ್ಲಿ ಗಾಡಿ ನಿಲ್ಲಿಸಿ ಸ್ಪಾಟ್ ಫೈನ್ ಜಾರಿಗೆ ತರುತ್ತಿದ್ದಾರೆ. ಮಾಸ್ಕ್ ಸರಿಯಾಗಿ ಹಾಕಿರದಿದ್ದರೆ ಸರಿ ಹಾಕುವಂತೆ ಸೂಚನೆ ಕೊಡುತ್ತಾರೆ. ಮಾಸ್ಕ್ ಇಲ್ಲದೇ ಇದ್ದವರಿಗೆ ಸ್ಥಳದಲ್ಲೇ 250 ರೂ. ದಂಡ ವಿಧಿಸುತ್ತಿದ್ದಾರೆ.


ಜಿಲ್ಲಾಡಳಿತದಿಂದ 125 ಹೋಮ್ ಗಾರ್ಡ್ ಸಿಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ವಿವಿಧ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದು, ಬಸ್ ನಿಲ್ದಾಣ, ಬಸ್, ಮಾರ್ಕೆಟ್ ಹೀಗೆ ಸಾರ್ವಜನಿಕ ಪ್ರದೇಶಗಳಲ್ಲಿ ಮಾರ್ಶಲ್ ಗಳು ಬೀಡು ಬಿಟ್ಟಿದ್ದು, ಸ್ಥಳದಲ್ಲೇ ಹಣ ಪೀಕಿಸುವ ಕೆಲಸ ಮಾಡುತ್ತಿದ್ದಾರೆ.
Mangalore Mcc deploy Marshals in public places to collect fines from those not following covid guidelines.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm