ಬ್ರೇಕಿಂಗ್ ನ್ಯೂಸ್
12-04-21 05:18 pm Mangalore Correspondent ಕರಾವಳಿ
ಮಂಗಳೂರು, ಎ.12: ಕೋವಿಡ್ ನಿಯಂತ್ರಣಕ್ಕಾಗಿ ಒಂದ್ಕಡೆ ರಾತ್ರಿ ವೇಳೆ ನೈಟ್ ಕರ್ಫ್ಯೂ ವಿಧಿಸಿದ್ದರೆ, ಮತ್ತೊಂದ್ಕಡೆ ಹಗಲಿನಲ್ಲಿ ಮಾಸ್ಕ್ ಹಾಕದೇ ತಿರುಗಾಡುವ ಮಂದಿಗೆ ಬಿಸಿ ಮುಟ್ಟಿಸುವುದಕ್ಕಾಗಿ ಕೋವಿಡ್ ಮಾರ್ಶಲ್ ಗಳು ಬೀದಿಗೆ ಇಳಿದಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಜಂಟಿ ಆಪರೇಶನ್ ನಡೆಸಲಾಗಿದ್ದು, ಇದಕ್ಕಾಗಿ ಹೋಮ್ ಗಾರ್ಡ್ ಗಳನ್ನು ಬಳಕೆ ಮಾಡಲಾಗಿದೆ. ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳ ಜೊತೆ ಮಂಗಳೂರಿನಲ್ಲಿ ದಾಳಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ನಗರದಾದ್ಯಂತ ಏಕಕಾಲದಲ್ಲಿ ಮಾರ್ಶಲ್ ಗಳು ರಸ್ತೆಗೆ ಇಳಿದಿದ್ದು ಮಾಸ್ಕ್ ಹಾಕದೇ ತಿರುಗಾಡುವ ಮಂದಿಗೆ 250 ರೂ. ದಂಡ ವಿಧಿಸುತ್ತಿದ್ದಾರೆ. ಸುಮಾರು 50 ಮಂದಿಯ ತಂಡವನ್ನು ಇದಕ್ಕಾಗಿ ಮಾಡಲಾಗಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಫೀಲ್ಡಿಗೆ ಇಳಿದಿದ್ದಾರೆ. ನಗರದ ಹಂಪನಕಟ್ಟೆ, ಕುದ್ರೋಳಿ, ಲಾಲ್ ಬಾಗ್ ಹೀಗೆ ಪ್ರಮುಖ ಭಾಗದಲ್ಲಿ ಕೋವಿಡ್ ಮಾರ್ಶಲ್ ಮತ್ತು ಅಧಿಕಾರಿಗಳು ಜೊತೆಯಾಗಿ ದಾಳಿ ನಡೆಸುತ್ತಿದ್ದಾರೆ.


ಹೋಮ್ ಗಾರ್ಡ್ ಸಿಬಂದಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಜೊತೆಯಾಗಿ ಬೇರೆ ಬೇರೆ ಕಡೆ ವಾಹನದಲ್ಲಿ ತೆರಳುತ್ತಿದ್ದು, ಜನರು ಇರುವಲ್ಲಿ ಗಾಡಿ ನಿಲ್ಲಿಸಿ ಸ್ಪಾಟ್ ಫೈನ್ ಜಾರಿಗೆ ತರುತ್ತಿದ್ದಾರೆ. ಮಾಸ್ಕ್ ಸರಿಯಾಗಿ ಹಾಕಿರದಿದ್ದರೆ ಸರಿ ಹಾಕುವಂತೆ ಸೂಚನೆ ಕೊಡುತ್ತಾರೆ. ಮಾಸ್ಕ್ ಇಲ್ಲದೇ ಇದ್ದವರಿಗೆ ಸ್ಥಳದಲ್ಲೇ 250 ರೂ. ದಂಡ ವಿಧಿಸುತ್ತಿದ್ದಾರೆ.


ಜಿಲ್ಲಾಡಳಿತದಿಂದ 125 ಹೋಮ್ ಗಾರ್ಡ್ ಸಿಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ವಿವಿಧ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದು, ಬಸ್ ನಿಲ್ದಾಣ, ಬಸ್, ಮಾರ್ಕೆಟ್ ಹೀಗೆ ಸಾರ್ವಜನಿಕ ಪ್ರದೇಶಗಳಲ್ಲಿ ಮಾರ್ಶಲ್ ಗಳು ಬೀಡು ಬಿಟ್ಟಿದ್ದು, ಸ್ಥಳದಲ್ಲೇ ಹಣ ಪೀಕಿಸುವ ಕೆಲಸ ಮಾಡುತ್ತಿದ್ದಾರೆ.
Mangalore Mcc deploy Marshals in public places to collect fines from those not following covid guidelines.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm