ಬ್ರೇಕಿಂಗ್ ನ್ಯೂಸ್
12-04-21 05:18 pm Mangalore Correspondent ಕರಾವಳಿ
ಮಂಗಳೂರು, ಎ.12: ಕೋವಿಡ್ ನಿಯಂತ್ರಣಕ್ಕಾಗಿ ಒಂದ್ಕಡೆ ರಾತ್ರಿ ವೇಳೆ ನೈಟ್ ಕರ್ಫ್ಯೂ ವಿಧಿಸಿದ್ದರೆ, ಮತ್ತೊಂದ್ಕಡೆ ಹಗಲಿನಲ್ಲಿ ಮಾಸ್ಕ್ ಹಾಕದೇ ತಿರುಗಾಡುವ ಮಂದಿಗೆ ಬಿಸಿ ಮುಟ್ಟಿಸುವುದಕ್ಕಾಗಿ ಕೋವಿಡ್ ಮಾರ್ಶಲ್ ಗಳು ಬೀದಿಗೆ ಇಳಿದಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಜಂಟಿ ಆಪರೇಶನ್ ನಡೆಸಲಾಗಿದ್ದು, ಇದಕ್ಕಾಗಿ ಹೋಮ್ ಗಾರ್ಡ್ ಗಳನ್ನು ಬಳಕೆ ಮಾಡಲಾಗಿದೆ. ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳ ಜೊತೆ ಮಂಗಳೂರಿನಲ್ಲಿ ದಾಳಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ನಗರದಾದ್ಯಂತ ಏಕಕಾಲದಲ್ಲಿ ಮಾರ್ಶಲ್ ಗಳು ರಸ್ತೆಗೆ ಇಳಿದಿದ್ದು ಮಾಸ್ಕ್ ಹಾಕದೇ ತಿರುಗಾಡುವ ಮಂದಿಗೆ 250 ರೂ. ದಂಡ ವಿಧಿಸುತ್ತಿದ್ದಾರೆ. ಸುಮಾರು 50 ಮಂದಿಯ ತಂಡವನ್ನು ಇದಕ್ಕಾಗಿ ಮಾಡಲಾಗಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಫೀಲ್ಡಿಗೆ ಇಳಿದಿದ್ದಾರೆ. ನಗರದ ಹಂಪನಕಟ್ಟೆ, ಕುದ್ರೋಳಿ, ಲಾಲ್ ಬಾಗ್ ಹೀಗೆ ಪ್ರಮುಖ ಭಾಗದಲ್ಲಿ ಕೋವಿಡ್ ಮಾರ್ಶಲ್ ಮತ್ತು ಅಧಿಕಾರಿಗಳು ಜೊತೆಯಾಗಿ ದಾಳಿ ನಡೆಸುತ್ತಿದ್ದಾರೆ.


ಹೋಮ್ ಗಾರ್ಡ್ ಸಿಬಂದಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಜೊತೆಯಾಗಿ ಬೇರೆ ಬೇರೆ ಕಡೆ ವಾಹನದಲ್ಲಿ ತೆರಳುತ್ತಿದ್ದು, ಜನರು ಇರುವಲ್ಲಿ ಗಾಡಿ ನಿಲ್ಲಿಸಿ ಸ್ಪಾಟ್ ಫೈನ್ ಜಾರಿಗೆ ತರುತ್ತಿದ್ದಾರೆ. ಮಾಸ್ಕ್ ಸರಿಯಾಗಿ ಹಾಕಿರದಿದ್ದರೆ ಸರಿ ಹಾಕುವಂತೆ ಸೂಚನೆ ಕೊಡುತ್ತಾರೆ. ಮಾಸ್ಕ್ ಇಲ್ಲದೇ ಇದ್ದವರಿಗೆ ಸ್ಥಳದಲ್ಲೇ 250 ರೂ. ದಂಡ ವಿಧಿಸುತ್ತಿದ್ದಾರೆ.


ಜಿಲ್ಲಾಡಳಿತದಿಂದ 125 ಹೋಮ್ ಗಾರ್ಡ್ ಸಿಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ವಿವಿಧ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದು, ಬಸ್ ನಿಲ್ದಾಣ, ಬಸ್, ಮಾರ್ಕೆಟ್ ಹೀಗೆ ಸಾರ್ವಜನಿಕ ಪ್ರದೇಶಗಳಲ್ಲಿ ಮಾರ್ಶಲ್ ಗಳು ಬೀಡು ಬಿಟ್ಟಿದ್ದು, ಸ್ಥಳದಲ್ಲೇ ಹಣ ಪೀಕಿಸುವ ಕೆಲಸ ಮಾಡುತ್ತಿದ್ದಾರೆ.
Mangalore Mcc deploy Marshals in public places to collect fines from those not following covid guidelines.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm