ಬ್ರೇಕಿಂಗ್ ನ್ಯೂಸ್
13-04-21 01:43 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಎ.13: ಅರಬ್ಬೀ ಸಮುದ್ರ ಮಧ್ಯೆ ಕೇರಳ ಮೂಲದ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು, ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸೋಮವಾರ ರಾತ್ರಿ ದುರಂತ ನಡೆದಿದ್ದು ಇಂಡಿಯನ್ ಕೋಸ್ಟ್ ಗಾರ್ಡಿನ ಮೂರು ಹಡಗುಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ದುರಂತಕ್ಕೀಡಾದ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರಿನದ್ದು ಎಂದು ಮಾತೃಭೂಮಿ ನ್ಯೂಸ್ ವರದಿ ಮಾಡಿದ್ದು, ಅದರಲ್ಲಿ 14 ಮಂದಿ ಇದ್ದರು ಎನ್ನೋ ಮಾಹಿತಿ ಸಿಕ್ಕಿದೆ. ಬೋಟಿನಲ್ಲಿದ್ದ ಕಾರ್ಮಿಕರು ತಮಿಳ್ನಾಡಿನ ಏಳು ಮಂದಿ ಮತ್ತು ಉಳಿದವರು ಪಶ್ಚಿಮ ಬಂಗಾಳದವರು ಎಂದು ತಿಳಿದುಬಂದಿದೆ.
ಮೂರು ಐಸಿಜಿಎಸ್ ಹಡಗಿನಲ್ಲಿ ಆಪರೇಶನ್ ಕಾರ್ಯ ನಡೆದಿದೆ. ಮೂಲಗಳ ಪ್ರಕಾರ, ಮೀನುಗಾರಿಕಾ ಬೋಟ್ ಕೋಸ್ಟ್ ಗಾರ್ಡ್ ಹಡಗಿಗೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ದುರಂತದಲ್ಲಿ 14 ಮಂದಿ ನಾಪತ್ತೆಯಾಗಿದ್ದು ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೂರು ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಹಡಗು ಮತ್ತು ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸಲಾಗಿದೆ.
ಕೇರಳ ಸಾರಿಗೆ ಸಚಿವ ಎ.ಕೆ. ಸಸೀಂದ್ರನ್ ಎರಡು ಶವ ಸಿಕ್ಕಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಬೋಟಿನ ಮಾಲಕರು ಮೂರು ಶವ ಸಿಕ್ಕಿದೆ ಎನ್ನುವುದನ್ನು ತಿಳಿಸಿದ್ದಾರೆ. ಇದೇ ವೇಳೆ, ಇಂಡಿಯನ್ ಕೋಸ್ಟ್ ಗಾರ್ಡ್ ಟ್ವೀಟ್ ಮಾಡಿದ್ದು, ಮೂರು ಹಡಗಿನ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬೋಟಿನಲ್ಲಿದ್ದ ಇಬ್ಬರು ಸಿಬಂದಿ ಪತ್ತೆಯಾಗಿದ್ದಾರೆ ಎಂದು ಹೇಳಿದೆ.
In a swift sea-air #SAR operation @IndiaCoastGuard deployed 03 #ICG ships & aircraft to search for 14 fishermen of IFB ‘Rabah’ approx 43 NM west #NewMangalore #today. 02 crew found, search for other crew in progress.@DefenceMinIndia @Min_FAHD @shipmin_india @SpokespersonMoD
— Indian Coast Guard (@IndiaCoastGuard) April 13, 2021
Three fishermen were killed and several went missing after a fishing boat capsized by collision with ship 43 Nautical miles of Mangalore Bunder Port. The Boat Rabha Ventured into the sea from Kozhikode district, Kerala.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm