ಬ್ರೇಕಿಂಗ್ ನ್ಯೂಸ್
13-04-21 01:43 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಎ.13: ಅರಬ್ಬೀ ಸಮುದ್ರ ಮಧ್ಯೆ ಕೇರಳ ಮೂಲದ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು, ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸೋಮವಾರ ರಾತ್ರಿ ದುರಂತ ನಡೆದಿದ್ದು ಇಂಡಿಯನ್ ಕೋಸ್ಟ್ ಗಾರ್ಡಿನ ಮೂರು ಹಡಗುಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ದುರಂತಕ್ಕೀಡಾದ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರಿನದ್ದು ಎಂದು ಮಾತೃಭೂಮಿ ನ್ಯೂಸ್ ವರದಿ ಮಾಡಿದ್ದು, ಅದರಲ್ಲಿ 14 ಮಂದಿ ಇದ್ದರು ಎನ್ನೋ ಮಾಹಿತಿ ಸಿಕ್ಕಿದೆ. ಬೋಟಿನಲ್ಲಿದ್ದ ಕಾರ್ಮಿಕರು ತಮಿಳ್ನಾಡಿನ ಏಳು ಮಂದಿ ಮತ್ತು ಉಳಿದವರು ಪಶ್ಚಿಮ ಬಂಗಾಳದವರು ಎಂದು ತಿಳಿದುಬಂದಿದೆ.
ಮೂರು ಐಸಿಜಿಎಸ್ ಹಡಗಿನಲ್ಲಿ ಆಪರೇಶನ್ ಕಾರ್ಯ ನಡೆದಿದೆ. ಮೂಲಗಳ ಪ್ರಕಾರ, ಮೀನುಗಾರಿಕಾ ಬೋಟ್ ಕೋಸ್ಟ್ ಗಾರ್ಡ್ ಹಡಗಿಗೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ದುರಂತದಲ್ಲಿ 14 ಮಂದಿ ನಾಪತ್ತೆಯಾಗಿದ್ದು ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೂರು ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಹಡಗು ಮತ್ತು ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸಲಾಗಿದೆ.
ಕೇರಳ ಸಾರಿಗೆ ಸಚಿವ ಎ.ಕೆ. ಸಸೀಂದ್ರನ್ ಎರಡು ಶವ ಸಿಕ್ಕಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಬೋಟಿನ ಮಾಲಕರು ಮೂರು ಶವ ಸಿಕ್ಕಿದೆ ಎನ್ನುವುದನ್ನು ತಿಳಿಸಿದ್ದಾರೆ. ಇದೇ ವೇಳೆ, ಇಂಡಿಯನ್ ಕೋಸ್ಟ್ ಗಾರ್ಡ್ ಟ್ವೀಟ್ ಮಾಡಿದ್ದು, ಮೂರು ಹಡಗಿನ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬೋಟಿನಲ್ಲಿದ್ದ ಇಬ್ಬರು ಸಿಬಂದಿ ಪತ್ತೆಯಾಗಿದ್ದಾರೆ ಎಂದು ಹೇಳಿದೆ.
In a swift sea-air #SAR operation @IndiaCoastGuard deployed 03 #ICG ships & aircraft to search for 14 fishermen of IFB ‘Rabah’ approx 43 NM west #NewMangalore #today. 02 crew found, search for other crew in progress.@DefenceMinIndia @Min_FAHD @shipmin_india @SpokespersonMoD
— Indian Coast Guard (@IndiaCoastGuard) April 13, 2021
Three fishermen were killed and several went missing after a fishing boat capsized by collision with ship 43 Nautical miles of Mangalore Bunder Port. The Boat Rabha Ventured into the sea from Kozhikode district, Kerala.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm