ಬ್ರೇಕಿಂಗ್ ನ್ಯೂಸ್
13-04-21 01:43 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಎ.13: ಅರಬ್ಬೀ ಸಮುದ್ರ ಮಧ್ಯೆ ಕೇರಳ ಮೂಲದ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು, ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸೋಮವಾರ ರಾತ್ರಿ ದುರಂತ ನಡೆದಿದ್ದು ಇಂಡಿಯನ್ ಕೋಸ್ಟ್ ಗಾರ್ಡಿನ ಮೂರು ಹಡಗುಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ದುರಂತಕ್ಕೀಡಾದ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರಿನದ್ದು ಎಂದು ಮಾತೃಭೂಮಿ ನ್ಯೂಸ್ ವರದಿ ಮಾಡಿದ್ದು, ಅದರಲ್ಲಿ 14 ಮಂದಿ ಇದ್ದರು ಎನ್ನೋ ಮಾಹಿತಿ ಸಿಕ್ಕಿದೆ. ಬೋಟಿನಲ್ಲಿದ್ದ ಕಾರ್ಮಿಕರು ತಮಿಳ್ನಾಡಿನ ಏಳು ಮಂದಿ ಮತ್ತು ಉಳಿದವರು ಪಶ್ಚಿಮ ಬಂಗಾಳದವರು ಎಂದು ತಿಳಿದುಬಂದಿದೆ.
ಮೂರು ಐಸಿಜಿಎಸ್ ಹಡಗಿನಲ್ಲಿ ಆಪರೇಶನ್ ಕಾರ್ಯ ನಡೆದಿದೆ. ಮೂಲಗಳ ಪ್ರಕಾರ, ಮೀನುಗಾರಿಕಾ ಬೋಟ್ ಕೋಸ್ಟ್ ಗಾರ್ಡ್ ಹಡಗಿಗೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ದುರಂತದಲ್ಲಿ 14 ಮಂದಿ ನಾಪತ್ತೆಯಾಗಿದ್ದು ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೂರು ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಹಡಗು ಮತ್ತು ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸಲಾಗಿದೆ.
ಕೇರಳ ಸಾರಿಗೆ ಸಚಿವ ಎ.ಕೆ. ಸಸೀಂದ್ರನ್ ಎರಡು ಶವ ಸಿಕ್ಕಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಬೋಟಿನ ಮಾಲಕರು ಮೂರು ಶವ ಸಿಕ್ಕಿದೆ ಎನ್ನುವುದನ್ನು ತಿಳಿಸಿದ್ದಾರೆ. ಇದೇ ವೇಳೆ, ಇಂಡಿಯನ್ ಕೋಸ್ಟ್ ಗಾರ್ಡ್ ಟ್ವೀಟ್ ಮಾಡಿದ್ದು, ಮೂರು ಹಡಗಿನ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬೋಟಿನಲ್ಲಿದ್ದ ಇಬ್ಬರು ಸಿಬಂದಿ ಪತ್ತೆಯಾಗಿದ್ದಾರೆ ಎಂದು ಹೇಳಿದೆ.
In a swift sea-air #SAR operation @IndiaCoastGuard deployed 03 #ICG ships & aircraft to search for 14 fishermen of IFB ‘Rabah’ approx 43 NM west #NewMangalore #today. 02 crew found, search for other crew in progress.@DefenceMinIndia @Min_FAHD @shipmin_india @SpokespersonMoD
— Indian Coast Guard (@IndiaCoastGuard) April 13, 2021
Three fishermen were killed and several went missing after a fishing boat capsized by collision with ship 43 Nautical miles of Mangalore Bunder Port. The Boat Rabha Ventured into the sea from Kozhikode district, Kerala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm